AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ಗೆ ಅಲ್ಲು ಅರ್ಜುನ್​ ಪುಷ್ಪ ನಮನ; ಅಪ್ಪು ಜತೆ ಕೊನೇ ಬಾರಿ ಮಾತನಾಡಿದ್ದನ್ನು ನೆನಪಿಸಿಕೊಂಡ ಸ್ಟೈಲಿಷ್​ ಸ್ಟಾರ್​

ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್​ ಸಮಾಧಿಗೆ ಅಲ್ಲು ಅರ್ಜುನ್​ ಭೇಟಿ ಮಾಡಿದರು. ಅಲ್ಲಿ ಅಪ್ಪುಗೆ ಪುಷ್ಪ ನಮನ ಸಲ್ಲಿಸಿದ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಪುನೀತ್​ ಅವರನ್ನು ನೆನೆದು ಭಾವುಕರಾದರು.

ಪುನೀತ್​ಗೆ ಅಲ್ಲು ಅರ್ಜುನ್​ ಪುಷ್ಪ ನಮನ; ಅಪ್ಪು ಜತೆ ಕೊನೇ ಬಾರಿ ಮಾತನಾಡಿದ್ದನ್ನು ನೆನಪಿಸಿಕೊಂಡ ಸ್ಟೈಲಿಷ್​ ಸ್ಟಾರ್​
ಅಲ್ಲು ಅರ್ಜುನ್
TV9 Web
| Edited By: |

Updated on: Feb 03, 2022 | 2:32 PM

Share

ಪುನೀತ್​ ರಾಜ್​ಕುಮಾರ್ (Puneeth Rajkumar)​ ಅವರನ್ನು ಕಳೆದುಕೊಂಡಿದ್ದು ಕೋಟ್ಯಂತರ ಜನರಿಗೆ ನೋವು ತಂದಿದೆ. ಅವರ ಸಮಾಧಿ ದರ್ಶನ ಪಡೆಯೋಕೆ ಈಗಲೂ ಅಭಿಮಾನಿಗಳು ಬರುತ್ತಲೇ ಇದ್ದಾರೆ. ಪುನೀತ್​ಗೆ ನಮನ ಸಲ್ಲಿಸುವ ಉದ್ದೇಶದಿಂದ ಅಲ್ಲು ಅರ್ಜುನ್ (Allu Arjun)​ ಅವರು ಇಂದು (ಫೆಬ್ರವರಿ 3) ಬೆಂಗಳೂರಿಗೆ ಆಗಮಿಸಿದ್ದಾರೆ. ಖಾಸಗಿ ವಿಮಾನದಲ್ಲಿ ಬೆಂಗಳೂರಿಗೆ ಬಂದ ಅವರು ನೇರವಾಗಿ ಶಿವರಾಜ್​ಕುಮಾರ್​ ಅವರ ಮನೆಗೆ ಆಗಮಿಸಿದರು. ಆ ಬಳಿಕ ಪುನೀತ್​ ರಾಜ್​​ಕುಮಾರ್​ ನಿವಾಸಕ್ಕೆ ತೆರಳಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ಗೆ ಸಾಂತ್ವನ ಹೇಳಿದರು. ನಂತರ ನೇರವಾಗಿ ಅವರು ತೆರಳಿದ್ದು ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್​ ಸಮಾಧಿಗೆ (Puneeth Rajkumar Samadhi). ಅಲ್ಲಿ ಅಪ್ಪುಗೆ ಪುಷ್ಪ ನಮನ ಸಲ್ಲಿಸಿದ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಪುನೀತ್​ ಅವರನ್ನು ನೆನೆದು ಭಾವುಕರಾದರು.

‘ನನ್ನ ಹಾಗೂ ಪುನೀತ್​ ನಡುವೆ ಮೊದಲಿನಿಂದಲೂ ಒಳ್ಳೆಯ ಬಾಂಧವ್ಯ ಇತ್ತು. ನಾನು ಬೆಂಗಳೂರಿಗೆ ಬಂದಾಗ ಅವರನ್ನು ಭೇಟಿ ಮಾಡುತ್ತಿದ್ದೆ. ಅವರು ಹೈದರಾಬಾದ್​ಗೆ ಬಂದಾಗ ನನ್ನನ್ನು ಭೇಟಿ ಮಾಡುತ್ತಿದ್ದರು. ‘ಅಲಾ ವೈಕುಂಟಪುರಮುಲೋ’ ಸಿನಿಮಾ ಸಂದರ್ಭದಲ್ಲಿ ನನಗೆ ಕರೆ ಮಾಡಿದ್ದರು. ಸಾಂಗ್​ ಚೆನ್ನಾಗಿದೆ ಎಂದು ಹೇಳಿದ್ದರು. ಇಬ್ಬರೂ ಭೇಟಿ ಆಗೋ ಆಲೋಚನೆ ಇತ್ತು. ಆದರೆ, ಕೊವಿಡ್ ಲಾಕ್​ಡೌನ್​ ಕಾರಣದಿಂದ ಅದು ಸಾಧ್ಯವಾಗಲೇ ಇಲ್ಲ. ಅವರ ನಿಧನ ನೋವು ತಂದಿದೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ.

‘ಪುಷ್ಪ’ ಚಿತ್ರದ ಪ್ರಚಾರದ ಸಮಯದಲ್ಲಿ ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಆಗಮಿಸಿದ್ದರು. ಆದರೆ ಆ ಸಂದರ್ಭದಲ್ಲಿ ಪುನೀತ್​ ನಿವಾಸಕ್ಕೆ ಭೇಟಿ ನೀಡದಿರಲು ಅವರು ನಿರ್ಧರಿಸಿದ್ದರು. ಅದಕ್ಕೆ ಕಾರಣ ಏನೆಂಬುದನ್ನೂ ಅವರು ವಿವರಿಸಿದ್ದರು. ‘ಪುನೀತ್​ ರಾಜ್​ಕುಮಾರ್​ ಕುಟುಂಬಕ್ಕೆ ನನ್ನ ಸಂತಾಪ ಇದೆ. ‘ಪುಷ್ಪ’ ಸಿನಿಮಾ ಕೆಲಸಗಳಿಂದ ಬೆಂಗಳೂರಿಗೆ ಬರೋಕೆ ಆಗಿರಲಿಲ್ಲ. ಈಗ ‘ಪುಷ್ಪ’ ಸಿನಿಮಾ ಪ್ರಮೋಷನ್​ಗೆ ಬೆಂಗಳೂರಿಗೆ ಬಂದಿದ್ದೇನೆ. ಈ ಸಂದರ್ಭದಲ್ಲಿ ನಾನು ಅಲ್ಲಿಗೆ ಹೋಗೋಕೆ ಇಷ್ಟಪಡುವುದಿಲ್ಲ. ‘ಪುಷ್ಪ’ ರಿಲೀಸ್​ ಆದ ನಂತರ ಮತ್ತೊಮ್ಮೆ ಬೆಂಗಳೂರಿಗೆ ಬರುತ್ತೇನೆ. ಬಂದು ಇಡೀ ಕುಟುಂಬವನ್ನು ಭೇಟಿ ಆಗುತ್ತೇನೆ. ಅದು ನನ್ನ ಕರ್ತವ್ಯ’ ಎಂದು ಅಲ್ಲು ಅರ್ಜುನ್​ ಹೇಳಿದ್ದರು.

‘ಪುಷ್ಪಕ ವಿಮಾನಂ’ ಸಿನಿಮಾದ ಪ್ರಚಾರದ ಸಮಯದಲ್ಲಿ ಪುನೀತ್​ ಬಗ್ಗೆ ಅಲ್ಲು ಅರ್ಜುನ್​ ಮಾತನಾಡಿದ್ದರು. ‘ಪುನೀತ್​ ರಾಜ್​ಕುಮಾರ್​ ಅವರು ನನಗೆ ಬಹಳ ಕಾಲದಿಂದ ಪರಿಚಯ. ನಮ್ಮ ಮನೆಗೆ ಬರುತ್ತಿದ್ದರು. ಎಷ್ಟೋ ಬಾರಿ ಜೊತೆಯಲ್ಲಿ ಕುಳಿತು ಊಟ ಮಾಡಿದ್ದೆವು. ನಮ್ಮಿಬ್ಬರ ನಡುವೆ ಪರಸ್ಪರ ಪ್ರೀತಿ-ವಿಶ್ವಾಸ ಇತ್ತು. ಒಂದು ಡ್ಯಾನ್ಸ್​ ಕಾರ್ಯಕ್ರಮದಲ್ಲಿ ನಾವು ಜಡ್ಜ್​ ಆಗಿದ್ದೆವು. ಯಾವಾಗ ಮಾತನಾಡಿದರೂ ಬೆಂಗಳೂರಿಗೆ ಬನ್ನಿ ಎಂದು ಕರೆಯುತ್ತಿದ್ದರು. ಆದರೆ ಇಂದು ಸಡನ್​ ಆಗಿ ಅವರು ಇಲ್ಲ ಎಂಬುದನ್ನು ನಂಬಲಾಗುತ್ತಿಲ್ಲ’ ಎಂದು ಅಲ್ಲು ಅರ್ಜುನ್​ ಹೇಳಿದ್ದರು.

ಇದನ್ನೂ ಓದಿ: ಮೈಸೂರಿನಲ್ಲಿ ಶಿವರಾಜ್​ಕುಮಾರ್ ನೋಡೋಕೆ ಮುಗಿಬಿದ್ದ ಅಭಿಮಾನಿಗಳು 

Allu Arjun: ಶಿವರಾಜ್​ಕುಮಾರ್​ ಅವರನ್ನು ಭೇಟಿ ಮಾಡಿದ ಅಲ್ಲು ಅರ್ಜುನ್; ಇಲ್ಲಿವೆ ಫೋಟೋಗಳು

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ