AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಲ್ಫಾ’ ಟ್ರೇಲರ್​ನಲ್ಲಿ ಗಮನ ಸೆಳೆದ ಹೊಸ ಪ್ರತಿಭೆ ಹೇಮಂತ್; ಕಾರ್ತಿಕ್​ ಮಹೇಶ್​​ಗೆ ನೆಗೆಟಿವ್ ಪಾತ್ರ

ಹೇಮಂತ್ ಕುಮಾರ್ ‘ಆಲ್ಫಾ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಫೆಬ್ರವರಿ 20ಕ್ಕೆ ರಿಲೀಸ್ ಆಗಲಿರುವ ಈ ಚಿತ್ರದ ಟ್ರೇಲರ್ ಗಮನ ಸೆಳೆದಿದೆ. ಡ್ರಗ್ಸ್, ಪ್ರೇಮಕಥೆ ಒಳಗೊಂಡ ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹೇಮಂತ್ ಫೈಟ್, ಡ್ಯಾನ್ಸ್‌ನಲ್ಲಿ ಶ್ರಮ ಹಾಕಿರುವುದನ್ನು ಟ್ರೇಲರ್‌ನಲ್ಲಿ ನೋಡಬಹುದು.

‘ಆಲ್ಫಾ’ ಟ್ರೇಲರ್​ನಲ್ಲಿ ಗಮನ ಸೆಳೆದ ಹೊಸ ಪ್ರತಿಭೆ ಹೇಮಂತ್; ಕಾರ್ತಿಕ್​ ಮಹೇಶ್​​ಗೆ ನೆಗೆಟಿವ್ ಪಾತ್ರ
ಹೇಮಂತ್-ಕಾರ್ತಿಕ್
ರಾಜೇಶ್ ದುಗ್ಗುಮನೆ
|

Updated on:Feb 07, 2026 | 2:14 PM

Share

ಕನ್ನಡ ಚಿತ್ರರಂಗಕ್ಕೆ ಹೊಸ ಹೊಸ ಪ್ರತಿಭೆಗಳ ಎಂಟ್ರಿ ಆಗುತ್ತಲೇ ಇರುತ್ತದೆ. ಈಗ ಹೇಮಂತ್ ಕುಮಾರ್ ಹೆಸರಿನ ಹೊಸ ಪ್ರತಿಭೆ ‘ಆಲ್ಫಾ’ ಸಿನಿಮಾ ಮೂಲಕ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ. ಫೆಬ್ರವರಿ 20ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಆಗಿ ಗಮನ ಸೆಳೆದಿದೆ. ಈ ಚಿತ್ರದಲ್ಲಿ ಕಾರ್ತಿಕ್ ಮಹೇಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೇಲರ್ ಸಖತ್ ರಾ ಆಗಿದೆ.

ಹೇಮಂತ್ ಅವರು ‘ಆಲ್ಫಾ’ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಹಾಕಿದ್ದಾರೆ. ಅವರು ಫೈಟ್, ಡ್ಯಾನ್ಸ್​ ಶ್ರದ್ಧೆಯಿಂದ ಕಲಿತಿರೋದು ಟ್ರೇಲರ್ ಅಲ್ಲಿ ನೋಡಿದರೆ ಗೊತ್ತಾಗುತ್ತದೆ. ಟ್ರೇಲರ್ ನೋಡಿದರೆ ಡ್ರಗ್ಸ್ ಹಾಗೂ ಇತರ ವಿಷಯಗಳ ಬಗ್ಗೆ ನಿರ್ದೇಶಕರು ಹೇಳಲು ಹೊರಟಂತೆ ಇದೆ. ಈ ಚಿತ್ರದಲ್ಲಿ ಒಂದು ಸುಂದರ ಪ್ರೇಮಕಥೆ ಕೂಡ ಇದೆ.

ಇದನ್ನೂ ಓದಿ: ‘ಆಲ್ಫಾ ಮೆನ್ ಲವ್ ವೈಲೆನ್ಸ್’ ಸಿನಿಮಾ ಫಸ್ಟ್ ಲುಕ್; ಹೀರೋ ಆದ ಹೇಮಂತ್ ಕುಮಾರ್

‘ಆಲ್ಫಾ’ ಸಿನಿಮಾದಲ್ಲಿ ಕಾರ್ತಿಕ್ ನಟಿಸುತ್ತಿದ್ದಾರೆ ಎಂದಾಗಲೇ ಸಾಕಷ್ಟು ಚರ್ಚೆಗಳು ನಡೆದವು. ಈಗ ಸಿನಿಮಾದಲ್ಲಿ ಅವರ ಅವತಾರ ರಿವೀಲ್ ಆಗಿದೆ. ಈ ಸಿನಿಮಾದಲ್ಲಿ ಅವರದ್ದು ನೆಗೆಟಿವ್ ಪಾತ್ರ ಎಂಬುದು ಸ್ಪಷ್ಟವಾಗಿದೆ. ಆದರೆ, ಪಾತ್ರ ಪ್ರಾಮುಖ್ಯತೆ ಇದೆ ಎಂಬ ಕಾರಣಕ್ಕೆ ಅವರು ಸಿನಿಮಾನ ಒಪ್ಪಿಕೊಂಡಿದ್ದಾರೆ.

ಹೇಮಂತ್ ಕುಮಾರ್ ತಂದೆ ಆನಂದ್ ಕುಮಾರ್ ಅವರು ಮಗನಿಗಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ವಿಜಯ್ ಎನ್​ ಈ ಚಿತ್ರ ನಿರ್ದೇಶನ ಮಾಡಿದ್ದಾರೆ. ಹೇಮಂತ್ ಜೊತೆ ಅಯಾನಾ, ಗೋಪಿಕಾ ಸುರೇಶ್, ಅಚ್ಯುತ್ ಕುಮಾರ್, ಬಾಲು ನಾಗೇಂದ್ರ, ಕಾರ್ತಿಕ್ ಮಹೇಶ್, ರಮೇಶ್ ಇಂದಿರಾ, ಗಿರಿರಾಜ್, ರಾಘು ಶಿವಮೊಗ್ಗ, ವಿನಯ್ ಬಿದ್ದಪ್ಪ ನಟಿಸಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಮಾಸ್ತಿ ಅವರು ಚಿತ್ರಕ್ಕೆ ಡೈಲಾಗ್ ಬರೆದಿದ್ದಾರೆ. ಫೆಬ್ರವರಿ 20ರಂದು ಈ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:17 pm, Sat, 7 February 26

Follow Us
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್