ಬಿಡುಗಡೆಗೆ ಸಜ್ಜಾಗಿದೆ ರಾಯರ ಕುರಿತ ಹೊಸ ಕನ್ನಡ ಸಿನಿಮಾ ‘ಅಮಲಾಮೃತ’

ಚೆನ್ನಪಟ್ಟಣ, ಅಬ್ಬೂರುಪೇಟೆ, ಶ್ರೀರಂಗಂ, ಶ್ರೀ ಮುಷ್ಣಂ, ಕುಂಬಕೋಣಂ, ಮನ್ನಾರ್‌ಗುಡಿ, ಚಿಂತಾಮಣಿ ಮುಂತಾದ ಕಡೆಗಳಲ್ಲಿ ‘ಅಮಲಾಮೃತ’ ಸಿನಿಮಾಗೆ ಚಿತ್ರೀಕರಣ ಮಾಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮೇ ತಿಂಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಇತ್ತೀಚೆಗೆ ವಿಶೇಷ ಪ್ರದರ್ಶನ ಮಾಡಲಾಯಿತು. ‘ಅಮಲಾಮೃತ’ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ..

ಬಿಡುಗಡೆಗೆ ಸಜ್ಜಾಗಿದೆ ರಾಯರ ಕುರಿತ ಹೊಸ ಕನ್ನಡ ಸಿನಿಮಾ ‘ಅಮಲಾಮೃತ’
Amalamrutha Movie Poster

Updated on: Mar 29, 2026 | 2:54 PM

ರಾಘವೇಂದ್ರ ಸ್ವಾಮಿಗಳ ಕುರಿತಾದ ಭಕ್ತಿ ಪ್ರಧಾನ ಕಥೆ ಹೊಂದಿರುವ ‘ಅಮಲಾಮೃತ’ (Amalamrutha) ಸಿನಿಮಾದ ಎಲ್ಲ ಕೆಲಸಗಳು ಮುಗಿದಿವೆ. ‘ಸಿರಿ ಪ್ರೊಡಕ್ಷನ್ಸ್’ ಮೂಲಕ ಈ ಸಿನಿಮಾ ಸಿದ್ಧವಾಗಿದೆ. ಮೈಸೂರು ಮೂಲದ ಗುರುರಾಜ ರಾವ್ ಎಂ.ಎಸ್. ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅಲ್ಲದೇ ಅವರೇ ನಿರ್ದೇಶನ ಕೂಡ ಮಾಡಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿತ್ತು. ಯತಿಗಳು, ಸರ್ಕಾರಿ ಅಧಿಕಾರಿಗಳಿಗೆ ಈ ಸಿನಿಮಾ ವೀಕ್ಷಿಸಿದರು. ಸಿನಿಮಾ ನೋಡಿದ ಜನರ ಪ್ರತಿಕ್ರಿಯೆ ಕಂಡು ಚಿತ್ರತಂಡಕ್ಕೆ ಖುಷಿ ಆಗಿದೆ.

ಕೆ.ಎಸ್. ಗೋವಿಂದರಾಮ ರಾವ್ ಅವರು ‘ಅಮಲಾಮೃತ’ ಸಿನಿಮಾದಲ್ಲಿ ಮುಖ್ಯ ಪಾತ್ರವನ್ನು ಮಾಡಿದ್ದಾರೆ. ಬಾಹ್ಲೀಕರಾಜ, ವ್ಯಾಸರಾಜ ಹಾಗೂ ರಾಘವೇಂದ್ರ ಸ್ವಾಮಿಗಳಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ವೀರೇಂದ್ರ ಆಚಾರ್ಯ, ಸುಬ್ಬರಾವ್, ಚೈತ್ರಾ ಭಾರದ್ವಾಜ್, ಮಾಸ್ಟರ್ ಸುಚೇಂದ್ರ, ಯಶಸ್, ಸುಮನ್, ಶ್ರೀಕಾಂತ್, ದೀಪಕ್ ಮುಂತಾದವರು ನಟಿಸಿದ್ದಾರೆ.

‘ಅಮಲಾಮೃತ’ ಚಿತ್ರಕ್ಕಾಗಿ ಹರಿದಾಸರ 8 ಸಾಹಿತ್ಯಕ್ಕೆ ವಿದೂಷಿ ರತ್ನಪ್ರಸಾದ್ ಅವರು ಸಂಗೀತ ಸಂಯೋಜಿಸಿದ್ದಾರೆ. ಪ್ರದೀಪ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಸ್ವಾಮಿ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಈ ಮೊದಲು ಪುರಂದರದಾಸರು ಮತ್ತು ಶ್ರೀ ಪಾದರಾಜರ ಸಾಕ್ಷಚಿತ್ರ ಸಿದ್ದಪಡಿಸಿದ್ದ ಅನುಭವದ ಮೇಲೆ ನಿರ್ದೇಶಕರು ಈ ಸಿನಿಮಾ ಮಾಡಿದ್ದಾರೆ.

‘ಆ ಅನುಭವದಿಂದಲೇ ನಿರ್ದೇಶನ ಹಾಗೂ ಬಂಡವಾಳ ಹೂಡಿದ್ದೇನೆ. ಅಮಲಾ ಮತ್ತು ಅಮೃತ ಇವರೆಡು ಅ ಅಕ್ಷರದಿಂದ ಕೂಡಿದೆ. ನವ ಭಕುತಿಯ ಜ್ಙಾನಯಘ್ನದ ಫಲಕ್ಕೆ ಅಮಲ ಅಂತಲೂ, ಸಾರಕ್ಕೆ ಅಮೃತ ಎಂದು ಕರೆಯುತ್ತಾರೆ. ನವಭಕುತಿ ಅಂದರೆ ಸಾಕ್ಷಾತ್ ಭಗವಂತನು ವೈಷ್ಣವ ತತ್ವದಲ್ಲಿ ನೀಡಿದ ಆದೇಶ. ಭಕ್ತಿಯಿಂದ 64 ವಿದ್ಯೆಗಳನ್ನು ಕಲಿತವರು ಶ್ರೀ ರಾಘವೇಂದ್ರ ಸ್ವಾಮಿಗಳು. ಅವರು ಪೂರ್ವಪರದಲ್ಲಿ ಐದು ಅವತಾರಗಳಲ್ಲಿ ಕಾಣಿಸಿಕೊಂಡಿದ್ದರು. ಕರ್ಮಜದೇವತೆ, ಭಕ್ತ ಪ್ರಹ್ಲಾದ, ಬಾಹ್ಲೀಕರಾಜ, ವ್ಯಾಸರಾಜ ಕೊನೆಯದಾಗಿ ಗುರುಸಾರ್ವಭೌಮ’ ಎಂದು ಗುರುರಾಜ ರಾವ್ ಎಂ.ಎಸ್. ಹೇಳಿದರು.

ಇದನ್ನೂ ಓದಿ: ಬೆಂಗಳೂರಿನ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ರಜನಿಕಾಂತ್

‘ಇವೆಲ್ಲವು ಹುಟ್ಟಿಕೊಂಡ ಬಗೆ ಹೇಗೆ ಎಂಬುದರ ವಿವರವನ್ನು ತೋರಿಸಲಾಗಿದೆ. ರಾಯರಲ್ಲಿ ಇರುವ ನಿಷ್ಠೆ ಬೇರೆ ಯಾರಲ್ಲೂ ಕಾಣುವುದಿಲ್ಲ. ಸ್ವಾಮಿಗಳ ತಪಸ್ಸಿನ ಫಲ ಎಲ್ಲ ಜನಾಂಗಕ್ಕೂ ಪುಣ್ಯದ ಫಲ ಸಿಕ್ಕಿದೆ. ಯಾವುದೇ ರೀತಿಯಲ್ಲಿ ಶ್ರದ್ದೆಯಿಂದ ಬೃಂದಾವನಕ್ಕೆ ನಮಸ್ಕಾರ ಮಾಡಿದಾಗ ಮಾತ್ರ ಒಳ್ಳೆಯದಾಗುತ್ತದೆ ಎಂಬ ಸಂದೇಶ ಇರಲಿದೆ’ ಎಂದು ನಿರ್ದೇಶಕರು ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us