AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ಗೆ ‘ಮಂಡ್ಯದ ಗಂಡು’ ಎಂದು ಬಿರುದು ಕೊಟ್ಟವರು ಯಾರು ಗೊತ್ತಾ?

Ambareesh Birthday: ವಿಷ್ಣುವರ್ಧನ್ ನಟನೆಯ ‘ನಾಗರಹಾವು’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ಗಮನ ಸೆಳೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬರುತ್ತಾ ಹೋದವು. ವಿಲನ್ ಆಗಿ, ಹೀರೋ ಆಗಿ, ಪೊಲೀಸ್ ಅಧಿಕಾರಿಯಾಗಿ ಅವರು ಮಿಂಚಿದ್ದಾರೆ. ಅವರು ಮಾಡಿದ ಪಾತ್ರಗಳು ಗಮನ ಸೆಳೆದಿವೆ. 2019ರಲ್ಲಿ ರಿಲೀಸ್ ಆದ ‘ಕುರುಕ್ಷೇತ್ರ’ ಅವರ ನಟನೆಯ ಕೊನೆಯ ಸಿನಿಮಾ.

ಅಂಬರೀಷ್​ಗೆ ‘ಮಂಡ್ಯದ ಗಂಡು’ ಎಂದು ಬಿರುದು ಕೊಟ್ಟವರು ಯಾರು ಗೊತ್ತಾ?
ಅಂಬರೀಷ್
ರಾಜೇಶ್ ದುಗ್ಗುಮನೆ
|

Updated on:May 29, 2024 | 9:26 AM

Share

ಮಲವಳ್ಳಿ ಹುಚ್ಚೇಗೌಡ ಅಮರನಾಥ್ ಎಂದಿದ್ದವರು ನಂತರ ಅಂಬರೀಷ್ (Ambareesh) ಎಂದು ಫೇಮಸ್ ಆದರು. ಇಂದು ಅವರು ನಮ್ಮೊಂದಿಗೆ ಇಲ್ಲ. ಆದರೆ, ಅವರು ತೋರಿಸಿ ಹೋದ ಗತ್ತು, ಅವರು ಸಲುಗೆಯಿಂದ ಬಯ್ಯುತ್ತಿದ್ದುದು, ಅವರ ಸಿನಿಮಾಗಳು ಜನರ ಮನಸ್ಸಿನಲ್ಲಿ ಸದಾ ಹಸಿರಾಗಿದೆ. ಅಂಬರೀಷ್ ಅವರು ಜನಿಸಿದ್ದು 1952ರ ಮೇ 29ರಂದು. ಇಂದು ಅವರು ಇದ್ದಿದ್ದರೆ 72 ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರು. ಅಂಬರೀಷ್ ಅವರು ನಡೆದು ಬಂದ ಹಾದಿಯನ್ನು ಇಲ್ಲಿ ನೆನಪಿಸಿಕೊಳ್ಳೋಣ.

ಅಂಬರೀಷ್ ಅವರು 20ನೇ ವಯಸ್ಸಿಗೆ ಚಿತ್ರರಂಗಕ್ಕೆ ಬಂದರು. ವಿಷ್ಣುವರ್ಧನ್ ನಟನೆಯ ‘ನಾಗರಹಾವು’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ಗಮನ ಸೆಳೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬರುತ್ತಾ ಹೋದವು. ವಿಲನ್ ಆಗಿ, ಹೀರೋ ಆಗಿ, ಪೊಲೀಸ್ ಅಧಿಕಾರಿಯಾಗಿ ಅವರು ಮಿಂಚಿದರು. ಅವರು ಮಾಡಿದ ಪಾತ್ರಗಳು ಗಮನ ಸೆಳೆದಿವೆ. 2019ರಲ್ಲಿ ರಿಲೀಸ್ ಆದ ‘ಕುರುಕ್ಷೇತ್ರ’ ಅವರ ನಟನೆಯ ಕೊನೆಯ ಸಿನಿಮಾ.

ಅಂಬರೀಷ್ ಅವರು 1994ರಲ್ಲಿ ರಾಜಕೀಯ ಬದುಕನ್ನೂ ಆರಂಭಿಸಿದರು. ಅವರು ಕಾಂಗ್ರೆಸ್ ಸೇರಿದರು. ಆದರೆ, ಅವರಿಗೆ ಟಿಕೆಟ್ ಸಿಗಲಿಲ್ಲ. ಹೀಗಾಗಿ 1998ರಲ್ಲಿ ಜನತಾದಳ ಸೇರಿ, ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆದ್ದರು. 1999ರಲ್ಲಿ ಅವರು ಮತ್ತೆ ಕಾಂಗ್ರೆಸ್ ಸೇರಿದರು. ಆ ಬಳಿಕ ಕೆಲವು ಚುನಾವಣೆಗಳನ್ನು ಎದುರಿಸಿದರು. ಅವರು ರಾಜ್ಯ ಸರ್ಕಾರದಲ್ಲಿ ಸಚಿವರೂ ಆಗಿದ್ದರು.

ಇದನ್ನೂ ಓದಿ: ‘ನನಗೂ ಅಂಬರೀಷ್​ ಬೈಯ್ದಿದ್ದರು’: ಆ ದಿನಗಳನ್ನು ನೆನಪಿಸಿಕೊಂಡ ನಟ ತಬಲಾ ನಾಣಿ

ಮಂಡ್ಯದ ಗಂಡು ಟೈಟಲ್

ಅಂಬರೀಷ್ ಅವರು ಮಂಡ್ಯದ ಗಂಡು ಎಂದೇ ಫೇಮಸ್ ಆದವರು. ಅವರಿಗೆ ಮಂಡ್ಯದ ಗಂಡು ಎಂದು ಟೈಟಲ್ ನೀಡಿದ್ದು ರೈತ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ಅವರು. ಅಂಬರೀಷ್ ಅವರು ಗುರು ಎನಿಸಿಕೊಂಡಿದ್ದ ಅವರು, ಅಂಬರೀಷ್​ಗೆ ಮಂಡ್ಯದ ಗಂಡು’ ಎಂದು ಬಿರುದು ಕೊಟ್ಟಿದ್ದರು. ಈ ವಿಚಾರವನ್ನು ಮಾದೇಗೌಡ ಅವರೇ ರಿವೀಲ್ ಮಾಡಿದ್ದರು. 1994ರಲ್ಲಿ ಅಂಬರೀಷ್ ಅವರು ‘ಮಂಡ್ಯದ ಗಂಡು’ ಸಿನಿಮಾ ಮಾಡಿದರು. ಅಂಬಿ ಜೊತೆ ಬಿರುದು ಸೇರಿಕೊಳ್ಳಲು ಈ ಸಿನಿಮಾ ಕೂಡ ಕಾರಣ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:39 am, Wed, 29 May 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ