AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಷ್​ಗೆ ‘ಮಂಡ್ಯದ ಗಂಡು’ ಎಂದು ಬಿರುದು ಕೊಟ್ಟವರು ಯಾರು ಗೊತ್ತಾ?

Ambareesh Birthday: ವಿಷ್ಣುವರ್ಧನ್ ನಟನೆಯ ‘ನಾಗರಹಾವು’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ಗಮನ ಸೆಳೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬರುತ್ತಾ ಹೋದವು. ವಿಲನ್ ಆಗಿ, ಹೀರೋ ಆಗಿ, ಪೊಲೀಸ್ ಅಧಿಕಾರಿಯಾಗಿ ಅವರು ಮಿಂಚಿದ್ದಾರೆ. ಅವರು ಮಾಡಿದ ಪಾತ್ರಗಳು ಗಮನ ಸೆಳೆದಿವೆ. 2019ರಲ್ಲಿ ರಿಲೀಸ್ ಆದ ‘ಕುರುಕ್ಷೇತ್ರ’ ಅವರ ನಟನೆಯ ಕೊನೆಯ ಸಿನಿಮಾ.

ಅಂಬರೀಷ್​ಗೆ ‘ಮಂಡ್ಯದ ಗಂಡು’ ಎಂದು ಬಿರುದು ಕೊಟ್ಟವರು ಯಾರು ಗೊತ್ತಾ?
ಅಂಬರೀಷ್
ರಾಜೇಶ್ ದುಗ್ಗುಮನೆ
|

Updated on:May 29, 2024 | 9:26 AM

Share

ಮಲವಳ್ಳಿ ಹುಚ್ಚೇಗೌಡ ಅಮರನಾಥ್ ಎಂದಿದ್ದವರು ನಂತರ ಅಂಬರೀಷ್ (Ambareesh) ಎಂದು ಫೇಮಸ್ ಆದರು. ಇಂದು ಅವರು ನಮ್ಮೊಂದಿಗೆ ಇಲ್ಲ. ಆದರೆ, ಅವರು ತೋರಿಸಿ ಹೋದ ಗತ್ತು, ಅವರು ಸಲುಗೆಯಿಂದ ಬಯ್ಯುತ್ತಿದ್ದುದು, ಅವರ ಸಿನಿಮಾಗಳು ಜನರ ಮನಸ್ಸಿನಲ್ಲಿ ಸದಾ ಹಸಿರಾಗಿದೆ. ಅಂಬರೀಷ್ ಅವರು ಜನಿಸಿದ್ದು 1952ರ ಮೇ 29ರಂದು. ಇಂದು ಅವರು ಇದ್ದಿದ್ದರೆ 72 ವರ್ಷದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದರು. ಅಂಬರೀಷ್ ಅವರು ನಡೆದು ಬಂದ ಹಾದಿಯನ್ನು ಇಲ್ಲಿ ನೆನಪಿಸಿಕೊಳ್ಳೋಣ.

ಅಂಬರೀಷ್ ಅವರು 20ನೇ ವಯಸ್ಸಿಗೆ ಚಿತ್ರರಂಗಕ್ಕೆ ಬಂದರು. ವಿಷ್ಣುವರ್ಧನ್ ನಟನೆಯ ‘ನಾಗರಹಾವು’ ಚಿತ್ರದಲ್ಲಿ ವಿಲನ್ ಪಾತ್ರ ಮಾಡಿ ಗಮನ ಸೆಳೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬರುತ್ತಾ ಹೋದವು. ವಿಲನ್ ಆಗಿ, ಹೀರೋ ಆಗಿ, ಪೊಲೀಸ್ ಅಧಿಕಾರಿಯಾಗಿ ಅವರು ಮಿಂಚಿದರು. ಅವರು ಮಾಡಿದ ಪಾತ್ರಗಳು ಗಮನ ಸೆಳೆದಿವೆ. 2019ರಲ್ಲಿ ರಿಲೀಸ್ ಆದ ‘ಕುರುಕ್ಷೇತ್ರ’ ಅವರ ನಟನೆಯ ಕೊನೆಯ ಸಿನಿಮಾ.

ಅಂಬರೀಷ್ ಅವರು 1994ರಲ್ಲಿ ರಾಜಕೀಯ ಬದುಕನ್ನೂ ಆರಂಭಿಸಿದರು. ಅವರು ಕಾಂಗ್ರೆಸ್ ಸೇರಿದರು. ಆದರೆ, ಅವರಿಗೆ ಟಿಕೆಟ್ ಸಿಗಲಿಲ್ಲ. ಹೀಗಾಗಿ 1998ರಲ್ಲಿ ಜನತಾದಳ ಸೇರಿ, ಮಂಡ್ಯದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡಿ ಗೆದ್ದರು. 1999ರಲ್ಲಿ ಅವರು ಮತ್ತೆ ಕಾಂಗ್ರೆಸ್ ಸೇರಿದರು. ಆ ಬಳಿಕ ಕೆಲವು ಚುನಾವಣೆಗಳನ್ನು ಎದುರಿಸಿದರು. ಅವರು ರಾಜ್ಯ ಸರ್ಕಾರದಲ್ಲಿ ಸಚಿವರೂ ಆಗಿದ್ದರು.

ಇದನ್ನೂ ಓದಿ: ‘ನನಗೂ ಅಂಬರೀಷ್​ ಬೈಯ್ದಿದ್ದರು’: ಆ ದಿನಗಳನ್ನು ನೆನಪಿಸಿಕೊಂಡ ನಟ ತಬಲಾ ನಾಣಿ

ಮಂಡ್ಯದ ಗಂಡು ಟೈಟಲ್

ಅಂಬರೀಷ್ ಅವರು ಮಂಡ್ಯದ ಗಂಡು ಎಂದೇ ಫೇಮಸ್ ಆದವರು. ಅವರಿಗೆ ಮಂಡ್ಯದ ಗಂಡು ಎಂದು ಟೈಟಲ್ ನೀಡಿದ್ದು ರೈತ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ಅವರು. ಅಂಬರೀಷ್ ಅವರು ಗುರು ಎನಿಸಿಕೊಂಡಿದ್ದ ಅವರು, ಅಂಬರೀಷ್​ಗೆ ಮಂಡ್ಯದ ಗಂಡು’ ಎಂದು ಬಿರುದು ಕೊಟ್ಟಿದ್ದರು. ಈ ವಿಚಾರವನ್ನು ಮಾದೇಗೌಡ ಅವರೇ ರಿವೀಲ್ ಮಾಡಿದ್ದರು. 1994ರಲ್ಲಿ ಅಂಬರೀಷ್ ಅವರು ‘ಮಂಡ್ಯದ ಗಂಡು’ ಸಿನಿಮಾ ಮಾಡಿದರು. ಅಂಬಿ ಜೊತೆ ಬಿರುದು ಸೇರಿಕೊಳ್ಳಲು ಈ ಸಿನಿಮಾ ಕೂಡ ಕಾರಣ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:39 am, Wed, 29 May 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್