AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು-ಅಂಬಿ ಫ್ಯಾನ್ಸ್​ ನಡುವೆ ಮನಸ್ತಾಪ? ರಸ್ತೆಗೆ ಪುನೀತ್​ ಹೆಸರಿಡುವುದಕ್ಕೆ ಅಂಬರೀಷ್​ ಅಭಿಮಾನಿಗಳ ಆಕ್ಷೇಪ

ಪುನೀತ್​ ನಿಧನದ ಬಳಿಕ ಹಲವು ರಸ್ತೆಗಳಿಗೆ ಅವರ ಹೆಸರು ಇಡಲಾಗಿದೆ. ಅದೇ ರೀತಿ ನಾಯಂಡಹಳ್ಳಿಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್​ ಹೆಸರು ಇಡುವಂತೆ ಅಭಿಮಾನಿಗಳು ಮನವಿ ಸಲ್ಲಿಸಿದ್ದರು. ಇದಕ್ಕೆ ಅಂಬರೀಷ್​ ಅಭಿಮಾನಿಗಳೇ ಆಕ್ಷೇಪಣೆ ಸಲ್ಲಿಕೆ ಮಾಡುತ್ತಿದ್ದಾರೆ.

ಅಪ್ಪು-ಅಂಬಿ ಫ್ಯಾನ್ಸ್​ ನಡುವೆ ಮನಸ್ತಾಪ? ರಸ್ತೆಗೆ ಪುನೀತ್​ ಹೆಸರಿಡುವುದಕ್ಕೆ ಅಂಬರೀಷ್​ ಅಭಿಮಾನಿಗಳ ಆಕ್ಷೇಪ
ಅಂಬರೀಷ್​-ಪುನೀತ್​
TV9 Web
| Edited By: |

Updated on:Jan 25, 2022 | 11:16 AM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಿಧನದ ಬಳಿಕ ಅವರ ಹೆಸರನ್ನು ಅಮರವಾಗಿಸಲು ಅನೇಕ ಕೆಲಸಗಳು ನಡೆಯುತ್ತಿವೆ. ಕೆಲವು ರಸ್ತೆ, ವೃತ್ತಕ್ಕೆ ಪುನೀತ್​ ಹೆಸರನ್ನು ಇಡಲಾಗಿದೆ. ಇನ್ನು ಕೆಲ ರಸ್ತೆಗಳಿಗೆ ಪುನೀತ್​ ಹೆಸರು ಇಡೋಕೆ ಪ್ಲ್ಯಾನ್​ ನಡೆದಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ತಂದಿರುವ ವಿಚಾರ. ಅದೇ ರೀತಿ ‘ರೆಬೆಲ್​ ಸ್ಟಾರ್​’ ಅಂಬರೀಷ್ (Ambareesh) ಅವರಿಗೂ ಇಂಥ ಗೌರವಗಳು ಸಲ್ಲಬೇಕು ಎಂದು ಅಂಬಿ ಫ್ಯಾನ್ಸ್​ ಬೇಡಿಕೆ ಇಡುತ್ತಿದ್ದಾರೆ. ಬೆಂಗಳೂರಿನ (Bangalore) ರಸ್ತೆಯೊಂದಕ್ಕೆ ಪುನೀತ್​ ಹೆಸರು ಇಡಲು ನಿರ್ಧರಿಸಲಾಗಿದೆ. ಇದಕ್ಕೆ ಅಂಬರೀಷ್​ ಅಭಿಮಾನಿಗಳಿಂದಲೇ ವಿರೋಧ ವ್ಯಕ್ತವಾಗಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಪುನೀತ್​ ಅಕ್ಟೋಬರ್​ 29ರಂದು ನಿಧನ ಹೊಂದಿದರು. ಆ ಬಳಿಕ ಹಲವು ರಸ್ತೆಗಳಿಗೆ ಅವರ ಹೆಸರು ಇಡಲಾಗಿದೆ. ಅದೇ ರೀತಿ ನಾಯಂಡಹಳ್ಳಿಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್​ ಹೆಸರು ಇಡುವಂತೆ ಅಭಿಮಾನಿಗಳು ಮನವಿ ಸಲ್ಲಿಸಿದ್ದರು. ಇದಕ್ಕೆ ಬಿಬಿಎಂಪಿ ಒಪ್ಪಿದೆ. ಇತ್ತೀಚೆಗೆ ಈ ಬಗ್ಗೆ ಜಾಹೀರಾತು ನೀಡಿದ್ದ ಬಿಬಿಎಂಪಿ, ಈ ನಿರ್ಧಾರಕ್ಕೆ ಜನವರಿ 29ರ ಒಳಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದು ಎಂದು ಹೇಳಿತ್ತು. ಈಗ ಇದಕ್ಕೆ ಅಂಬರೀಷ್​ ಅಭಿಮಾನಿಗಳೇ ಆಕ್ಷೇಪಣೆ ಸಲ್ಲಿಕೆ ಮಾಡುತ್ತಿದ್ದಾರೆ. ಇದರಿಂದ ಅಪ್ಪು ಅಭಿಮಾನಿಗಳು ಹಾಗೂ ಅಂಬಿ ಅಭಿಮಾನಿಗಳ‌‌ ನಡುವೆ ಶೀತಲ ಸಮರ ಶುರುವಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಅಂಬರೀಷ್​ ಹಾಗೂ ಪುನೀತ್​ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಂಬರೀಷ್​ ಅವರನ್ನು ಪುನೀತ್ ಪ್ರೀತಿಯಿಂದ ಮಾಮ ಎಂದು ಕರೆಯುತ್ತಿದ್ದರು​. ಆದರೆ, ಇಬ್ಬರೂ ಮೃತಪಟ್ಟ ನಂತರ ರಸ್ತೆಗೆ ಹೆಸರಿಡುವ ವಿಚಾರದಲ್ಲಿ ಅಭಿಮಾನಿಗಳ ಮಧ್ಯೆ ಪ್ರತಿಷ್ಠೆ ಶುರುವಾಗಿದೆ. ‘ನಾಯಂಡಹಳ್ಳಿಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್​ ಹೆಸರು ಇಡಬಾರದು. ಇದಕ್ಕೆ ಅಂಬಿ ಹೆಸರು ಇಡಬೇಕು. 1993ರ ಸಂದರ್ಭದಲ್ಲಿ ಈ ರಸ್ತೆಗೆ ಅಂಬಿ ಹೆಸರಿಡಲು ಬಾಮಾ ಹರೀಶ್​ ಅವರು ಹೋರಾಟ ಮಾಡಿದ್ದರು ಎಂದು ನಮಗೆ ಮಾಹಿತಿ ಸಿಕ್ಕಿದೆ’ ಎಂದು ಅಂಬರೀಷ್​ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ. ಇಂದು (ಜನವರಿ​ 25) ಬಿಬಿಎಂಪಿ ಕಚೇರಿಗೆ ತೆರಳಿ ಅಂಬರೀಷ್​ ಸಂಘಟನೆಗಳು ಈ ಬಗ್ಗೆ ಮನವಿ ಸಲ್ಲಿಕೆ ಮಾಡಲಿವೆ.

ಸದ್ಯ, ಈ ವಿಚಾರ ಬೂದಿ ಮುಚ್ಚಿದ ಕೆಂಡದಂತಿದೆ. ಯಾವುದೇ ಸಂದರ್ಭದಲ್ಲೂ ಈ ವಿಚಾರ ದೊಡ್ಡ ಮಟ್ಟದಲ್ಲಿ ಸ್ಫೋಟಗೊಳ್ಳಬಹುದು. ಈ ಬಗ್ಗೆ ಅಂಬರೀಷ್​ ಪತ್ನಿ, ಸಂಸದೆ, ಸುಮಲತಾ ಅಂಬರೀಷ್​ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:  ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್​ಗೂ ಸಿಕ್ಕಿದಂತೆ: ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ

ಅಂಬರೀಷ್​ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ರೂ. ಅನುದಾನ ನೀಡಲು ಮುಂದಾದ ಸರ್ಕಾರ

Published On - 11:04 am, Tue, 25 January 22

Follow Us
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು