AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪು-ಅಂಬಿ ಫ್ಯಾನ್ಸ್​ ನಡುವೆ ಮನಸ್ತಾಪ? ರಸ್ತೆಗೆ ಪುನೀತ್​ ಹೆಸರಿಡುವುದಕ್ಕೆ ಅಂಬರೀಷ್​ ಅಭಿಮಾನಿಗಳ ಆಕ್ಷೇಪ

ಪುನೀತ್​ ನಿಧನದ ಬಳಿಕ ಹಲವು ರಸ್ತೆಗಳಿಗೆ ಅವರ ಹೆಸರು ಇಡಲಾಗಿದೆ. ಅದೇ ರೀತಿ ನಾಯಂಡಹಳ್ಳಿಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್​ ಹೆಸರು ಇಡುವಂತೆ ಅಭಿಮಾನಿಗಳು ಮನವಿ ಸಲ್ಲಿಸಿದ್ದರು. ಇದಕ್ಕೆ ಅಂಬರೀಷ್​ ಅಭಿಮಾನಿಗಳೇ ಆಕ್ಷೇಪಣೆ ಸಲ್ಲಿಕೆ ಮಾಡುತ್ತಿದ್ದಾರೆ.

ಅಪ್ಪು-ಅಂಬಿ ಫ್ಯಾನ್ಸ್​ ನಡುವೆ ಮನಸ್ತಾಪ? ರಸ್ತೆಗೆ ಪುನೀತ್​ ಹೆಸರಿಡುವುದಕ್ಕೆ ಅಂಬರೀಷ್​ ಅಭಿಮಾನಿಗಳ ಆಕ್ಷೇಪ
ಅಂಬರೀಷ್​-ಪುನೀತ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 25, 2022 | 11:16 AM

Share

ನಟ ಪುನೀತ್​ ರಾಜ್​ಕುಮಾರ್ (Puneeth Rajkumar)​ ನಿಧನದ ಬಳಿಕ ಅವರ ಹೆಸರನ್ನು ಅಮರವಾಗಿಸಲು ಅನೇಕ ಕೆಲಸಗಳು ನಡೆಯುತ್ತಿವೆ. ಕೆಲವು ರಸ್ತೆ, ವೃತ್ತಕ್ಕೆ ಪುನೀತ್​ ಹೆಸರನ್ನು ಇಡಲಾಗಿದೆ. ಇನ್ನು ಕೆಲ ರಸ್ತೆಗಳಿಗೆ ಪುನೀತ್​ ಹೆಸರು ಇಡೋಕೆ ಪ್ಲ್ಯಾನ್​ ನಡೆದಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ತಂದಿರುವ ವಿಚಾರ. ಅದೇ ರೀತಿ ‘ರೆಬೆಲ್​ ಸ್ಟಾರ್​’ ಅಂಬರೀಷ್ (Ambareesh) ಅವರಿಗೂ ಇಂಥ ಗೌರವಗಳು ಸಲ್ಲಬೇಕು ಎಂದು ಅಂಬಿ ಫ್ಯಾನ್ಸ್​ ಬೇಡಿಕೆ ಇಡುತ್ತಿದ್ದಾರೆ. ಬೆಂಗಳೂರಿನ (Bangalore) ರಸ್ತೆಯೊಂದಕ್ಕೆ ಪುನೀತ್​ ಹೆಸರು ಇಡಲು ನಿರ್ಧರಿಸಲಾಗಿದೆ. ಇದಕ್ಕೆ ಅಂಬರೀಷ್​ ಅಭಿಮಾನಿಗಳಿಂದಲೇ ವಿರೋಧ ವ್ಯಕ್ತವಾಗಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಪುನೀತ್​ ಅಕ್ಟೋಬರ್​ 29ರಂದು ನಿಧನ ಹೊಂದಿದರು. ಆ ಬಳಿಕ ಹಲವು ರಸ್ತೆಗಳಿಗೆ ಅವರ ಹೆಸರು ಇಡಲಾಗಿದೆ. ಅದೇ ರೀತಿ ನಾಯಂಡಹಳ್ಳಿಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್​ ಹೆಸರು ಇಡುವಂತೆ ಅಭಿಮಾನಿಗಳು ಮನವಿ ಸಲ್ಲಿಸಿದ್ದರು. ಇದಕ್ಕೆ ಬಿಬಿಎಂಪಿ ಒಪ್ಪಿದೆ. ಇತ್ತೀಚೆಗೆ ಈ ಬಗ್ಗೆ ಜಾಹೀರಾತು ನೀಡಿದ್ದ ಬಿಬಿಎಂಪಿ, ಈ ನಿರ್ಧಾರಕ್ಕೆ ಜನವರಿ 29ರ ಒಳಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಬಹುದು ಎಂದು ಹೇಳಿತ್ತು. ಈಗ ಇದಕ್ಕೆ ಅಂಬರೀಷ್​ ಅಭಿಮಾನಿಗಳೇ ಆಕ್ಷೇಪಣೆ ಸಲ್ಲಿಕೆ ಮಾಡುತ್ತಿದ್ದಾರೆ. ಇದರಿಂದ ಅಪ್ಪು ಅಭಿಮಾನಿಗಳು ಹಾಗೂ ಅಂಬಿ ಅಭಿಮಾನಿಗಳ‌‌ ನಡುವೆ ಶೀತಲ ಸಮರ ಶುರುವಾಗಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಅಂಬರೀಷ್​ ಹಾಗೂ ಪುನೀತ್​ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಅಂಬರೀಷ್​ ಅವರನ್ನು ಪುನೀತ್ ಪ್ರೀತಿಯಿಂದ ಮಾಮ ಎಂದು ಕರೆಯುತ್ತಿದ್ದರು​. ಆದರೆ, ಇಬ್ಬರೂ ಮೃತಪಟ್ಟ ನಂತರ ರಸ್ತೆಗೆ ಹೆಸರಿಡುವ ವಿಚಾರದಲ್ಲಿ ಅಭಿಮಾನಿಗಳ ಮಧ್ಯೆ ಪ್ರತಿಷ್ಠೆ ಶುರುವಾಗಿದೆ. ‘ನಾಯಂಡಹಳ್ಳಿಯಿಂದ ಬನ್ನೇರುಘಟ್ಟದವರೆಗಿನ ರಸ್ತೆಗೆ ಪುನೀತ್​ ಹೆಸರು ಇಡಬಾರದು. ಇದಕ್ಕೆ ಅಂಬಿ ಹೆಸರು ಇಡಬೇಕು. 1993ರ ಸಂದರ್ಭದಲ್ಲಿ ಈ ರಸ್ತೆಗೆ ಅಂಬಿ ಹೆಸರಿಡಲು ಬಾಮಾ ಹರೀಶ್​ ಅವರು ಹೋರಾಟ ಮಾಡಿದ್ದರು ಎಂದು ನಮಗೆ ಮಾಹಿತಿ ಸಿಕ್ಕಿದೆ’ ಎಂದು ಅಂಬರೀಷ್​ ಅಭಿಮಾನಿಗಳು ಬೇಡಿಕೆ ಇಡುತ್ತಿದ್ದಾರೆ. ಇಂದು (ಜನವರಿ​ 25) ಬಿಬಿಎಂಪಿ ಕಚೇರಿಗೆ ತೆರಳಿ ಅಂಬರೀಷ್​ ಸಂಘಟನೆಗಳು ಈ ಬಗ್ಗೆ ಮನವಿ ಸಲ್ಲಿಕೆ ಮಾಡಲಿವೆ.

ಸದ್ಯ, ಈ ವಿಚಾರ ಬೂದಿ ಮುಚ್ಚಿದ ಕೆಂಡದಂತಿದೆ. ಯಾವುದೇ ಸಂದರ್ಭದಲ್ಲೂ ಈ ವಿಚಾರ ದೊಡ್ಡ ಮಟ್ಟದಲ್ಲಿ ಸ್ಫೋಟಗೊಳ್ಳಬಹುದು. ಈ ಬಗ್ಗೆ ಅಂಬರೀಷ್​ ಪತ್ನಿ, ಸಂಸದೆ, ಸುಮಲತಾ ಅಂಬರೀಷ್​ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ:  ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್​ಗೂ ಸಿಕ್ಕಿದಂತೆ: ಸಂಸದೆ ಸುಮಲತಾ ಅಂಬರೀಷ್ ಹೇಳಿಕೆ

ಅಂಬರೀಷ್​ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ರೂ. ಅನುದಾನ ನೀಡಲು ಮುಂದಾದ ಸರ್ಕಾರ

Published On - 11:04 am, Tue, 25 January 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ