AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambareesh Memorial: ‘ಸಾವಿನ ನಂತರವೂ ಬದುಕಿರುವ ಸಾಧಕ ಅಂಬರೀಷ್​’: ಸ್ಮಾರಕ ಉದ್ಘಾಟನೆ ಬಳಿಕ ಬಸವರಾಜ ಬೊಮ್ಮಾಯಿ ಮಾತು

Basavaraj Bommai | Ambareesh Memorial: ‘ಅಂಬರೀಷ್​ ಅವರ ಸ್ಮಾರಕಕ್ಕೆ ನಾನೇ ಅಡಿಗಲ್ಲು ಹಾಕಿದ್ದು. ಇಂದು ನಾನೇ ಉದ್ಘಾಟನೆ ಮಾಡಿದ್ದೇನೆ. ಇದನ್ನು ದೇವರ ಇಚ್ಛೆ ಅಂತ ಭಾವಿಸುತ್ತೇನೆ’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Ambareesh Memorial: ‘ಸಾವಿನ ನಂತರವೂ ಬದುಕಿರುವ ಸಾಧಕ ಅಂಬರೀಷ್​’: ಸ್ಮಾರಕ ಉದ್ಘಾಟನೆ ಬಳಿಕ ಬಸವರಾಜ ಬೊಮ್ಮಾಯಿ ಮಾತು
ಬಸವರಾಜ ಬೊಮ್ಮಾಯಿ
ಮದನ್​ ಕುಮಾರ್​
|

Updated on:Mar 27, 2023 | 9:35 PM

Share

‘ರೆಬೆಲ್​ ಸ್ಟಾರ್​’ ಅಂಬರೀಷ್ (Ambareesh)​ ಅವರ ಅಭಿಮಾನಿಗಳ ಪಾಲಿಗೆ ಇಂದು (ಮಾರ್ಚ್​ 27) ವಿಶೇಷವಾದ ದಿನ. ಯಾಕೆಂದರೆ, ಈ ದಿನ ಅಂಬರೀಷ್​ ಅವರಿಗೆ ಸಂಬಂಧಿಸಿದ ಎರಡು ಪ್ರಮುಖ ಘಟನೆಗಳು ನಡೆದಿವೆ. ಬೆಂಗಳೂರಿನ ರೇಸ್​ ಕೋರ್ಸ್​ ರಸ್ತೆಗೆ ಅವರ ಹೆಸರನ್ನು ಇಡಲಾಗಿದೆ. ಅಲ್ಲದೇ, ಕಂಠೀರವ ಸ್ಟುಡಿಯೋ ಆವರಣದಲ್ಲಿ ಅಂಬರೀಷ್​ ಸ್ಮಾರಕ (Ambareesh Memorial) ಮತ್ತು ಪ್ರತಿಮೆ ಅನಾವರಣ ಆಗಿದೆ. ಇದರ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ನೆರವೇರಿಸಿದ್ದಾರೆ. ಬೊಮ್ಮಾಯಿ ಮತ್ತು ಅಂಬರೀಷ್​ ನಡುವೆ ಸ್ನೇಹವಿತ್ತು. ಆ ದಿನಗಳ ಬಗ್ಗೆ ಇಂದು ಸಿಎಂ ಮಾತನಾಡಿದ್ದಾರೆ. ಅಂಬರೀಷ್​ ಸ್ಮಾರಕ ಉದ್ಘಾಟನೆ ಬಳಿಕ ಅವರು ಒಂದಷ್ಟು ವಿಚಾರಗಳನ್ನು ಹಂಚಿಕೊಂಡರು.

ಅಂಬಿ ಸವಿ ನೆನಪಿಗಾಗಿ ಸ್ಮಾರಕ:

‘ಅಂಬರೀಷ್​ ಅವರ ನೆನಪು ಸದಾ ಕಾಲ ಇರುತ್ತದೆ. ಸಾಧಕನಿಗೆ ಸಾವು ಅಂತ್ಯವಲ್ಲ. ಸಾವಿನ ನಂತರವೂ ಬದುಕುವವನು ಸಾಧಕ. ಹೀಗೆ ಅಂಬರೀಷ್​ ಅವರು ಸಾವಿನ ನಂತರವೂ ಬದುಕುತ್ತಿದ್ದಾರೆ. ಅವರ ಸವಿ ನೆನಪಿಗಾಗಿ ಈ ಸ್ಮಾರಕ, ಮ್ಯೂಸಿಯಂ ನಿರ್ಮಾಣಕ್ಕೆ ಅನುದಾನ ನೀಡಲಾಯಿತು. ಇಂದು ಉದ್ಘಾಟನೆ ಮಾಡಿದ್ದು ಸಂತಸ ತಂದಿದೆ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.

ಮಾತು ಒರಟು, ಮನಸ್ಸು ಮೃದು:

‘ನನಗೆ ಅಂಬರೀಷ್​ ಅವರು ಅತ್ಯಂತ ಅತ್ಮೀಯ ಮಿತ್ರನಾಗಿದ್ದರು. ‘ಈ ಸ್ಮಾರಕಕ್ಕೆ ನಾನೇ ಅಡಿಗಲ್ಲು ಹಾಕಿದ್ದು. ಇಂದು ನಾನೇ ಉದ್ಘಾಟನೆ ಮಾಡಿದ್ದೇನೆ. ಇದನ್ನು ದೇವರ ಇಚ್ಛೆ ಎಂದು ಭಾವಿಸುತ್ತೇನೆ. ಅಂಬರೀಷ್​ ಅವರು ಮಾತಿನಲ್ಲಿ ಒರಟು. ಆದರೆ ಸ್ವಚ್ಛ ಹಾಗೂ ಸರಳ ಹೃದಯ ಇದ್ದಂತಹ ವ್ಯಕ್ತಿ ಅವರು. ಅವರ ಸ್ವಭಾವ ಬಹಳ ಮೃದು ಆಗಿತ್ತು’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ
Image
‘ಅಂಬರೀಷ್​​ಗೆ ಅನಾರೋಗ್ಯ ಉಂಟಾದಾಗ ಬದುಕಿಸಿದವರು ಇವರೇ’; ಹಳೆ ಘಟನೆ ನೆನೆದ ಸುಂದರ್ ರಾಜ್
Image
ಅಂಬಿ ಸಮಾಧಿಗೆ ಎಡೆ ಇಟ್ಟು ನಮಿಸಿದ ಸುಮಲತಾ ಅಂಬರೀಷ್​; ಸಾಥ್​ ನೀಡಿದ ರಾಕ್​ಲೈನ್​ ವೆಂಕಟೇಶ್​
Image
‘ರೆಬೆಲ್​ ಸ್ಟಾರ್​​’ 70ನೇ ಜನ್ಮದಿನಕ್ಕೆ ಕೇಕ್​ ಕತ್ತರಿಸಿ ವಿಶೇಷ ಮಾತುಗಳನ್ನು ಹಂಚಿಕೊಂಡ ಸುಮಲತಾ ಅಂಬರೀಷ್​
Image
‘ಇಲ್ಲಿಗೆ ಬರಲು ನಂಗೆ ಧೈರ್ಯ ಸಾಕಾಗಲ್ಲ’: ಕಲಾವಿದರ ಭವನದಲ್ಲಿ ಅಂಬರೀಷ್​ ನೆನೆದು ರಾಕ್​ಲೈನ್​ ಭಾವುಕ

ಇದನ್ನೂ ಓದಿ: Ambareesh Road Inauguration: ರೇಸ್​ ಕೋರ್ಸ್​ ರಸ್ತೆಗೆ ಅಂಬರೀಷ್​ ಹೆಸರು ಇಟ್ಟಿದ್ದೇಕೆ? ಉದ್ಘಾಟನೆ ವೇಳೆ ವಿವರಣೆ ನೀಡಿದ ಸಿಎಂ

ಬಡವರ ಬಗ್ಗೆ ಕಾಳಜಿ ಇಟ್ಟುಕೊಂಡಿದ್ದ ನಾಯಕ:

‘ಅಂಬರೀಷ್​ ಅವರು ಕೊಡುಗೈ ದಾನಿ ಆಗಿದ್ದರು. ದೀನ ದಲಿತರ ಬಗ್ಗೆ ಹಾಗೂ ಬಡವರ ಬಗ್ಗೆ ಕಾಳಜಿ ಹೊಂದಿ​ದ್ದರು. ಅವರ ಸ್ಮಾರಕವನ್ನು ಇಡೀ ರಾಜ್ಯದ ಜನರು ನೋಡಿ ಅಭಿಮಾನಪಡುತ್ತಾರೆ. ಇದನ್ನು ರಾಜ್ಯದ ಜನರಿಗೆ ಅರ್ಪಿಸುತ್ತೇನೆ’ ಎಂದಿದ್ದಾರೆ ಬೊಮ್ಮಾಯಿ.

ಅಂಬರೀಷ್​ ಅವರ ಸ್ಮಾರಕ ಉದ್ಘಾಟನೆ ವೇಳೆ ಸುಮಲತಾ ಅಂಬರೀಷ್​, ಅಭಿಷೇಕ್​ ಅಂಬರೀಷ್​, ಭಾ.ಮ. ಹರೀಶ್​, ದೊಡ್ಡಣ್ಣ, ರಾಕ್​ಲೈನ್​ ವೆಂಕಟೇಶ್​, ರಾಘವೇಂದ್ರ ರಾಜ್​ಕುಮಾರ್​, ಸಂದರ್​ ರಾಜ್​ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಹಾಜರಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:35 pm, Mon, 27 March 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್