AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಬರೀಶ್ ಪುಣ್ಯಸ್ಮರಣೆ: ಮರಳಿ ಬಂದಿದ್ದೀರಿ ಎಂದ ಸುಮಲತಾ

Ambareesh: ಅಂಬರೀಶ್ ನಿಧನ ಹೊಂದಿ ಇಂದಿಗೆ (ನವೆಂಬರ್ 24) ಆರು ವರ್ಷಗಳಾಗಿವೆ. ಪತಿಯನ್ನು ನೆನಪಿಸಿಕೊಂಡು ಪೋಸ್ಟ್ ಹಂಚಿಕೊಂಡಿರುವ ಸುಮಲತಾ ಅಂಬರೀಶ್, ‘ಮರಳಿ ಬಂದಿದ್ದೀರಿ’ ಎಂದಿದ್ದಾರೆ. ಅಂಬರೀಶ್​ ಪುತ್ರ ಅಭಿಷೇಕ್​ ಹಾಗೂ ದಂಪತಿಗೆ ಇತ್ತೀಚೆಗಷ್ಟೆ ಗಂಡುಮಗು ಜನಿಸಿದೆ.

ಅಂಬರೀಶ್ ಪುಣ್ಯಸ್ಮರಣೆ: ಮರಳಿ ಬಂದಿದ್ದೀರಿ ಎಂದ ಸುಮಲತಾ
ಮಂಜುನಾಥ ಸಿ.
|

Updated on: Nov 24, 2024 | 10:45 AM

Share

ಅಂಬರೀಶ್ ಅವರ ಪುಣ್ಯಸ್ಮರಣೆ ಇಂದು (ನವೆಂಬರ್ 24), 2018 ರ ಇದೇ ದಿನಾಂಕದಂದು ಅಂಬರೀಶ್ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದರು. ಅಂಬರೀಶ್ ಅಗಲಿ ಇಂದಿಗೆ ಆರು ವರ್ಷಗಳಾಗಿದ್ದು, ಇಂದಿಗೂ ಸಹ ಅಭಿಮಾನಿಗಳು ಹಾಗೂ ಕುಟುಂಬದವರ ಮನದಲ್ಲಿ ಅಂಬರೀಶ್ ನೆಲೆಸಿದ್ದಾರೆ. ಅಂಬರೀಶ್​ ಅವರ ಆರನೇ ವರ್ಷದ ಪುಣ್ಯ ಸ್ಮರಣೆ ಆದ ಇಂದು, ಪತ್ನಿ ಸುಮಲತಾ ಅವರು ಅಂಬರೀಶ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

ಫೇಸ್​ಬುಕ್​ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಸುಮಲತಾ, ‘ನಿಮ್ಮ ಪ್ರೀತಿ, ನಿಮ್ಮ ಇರುವಿಕೆ ಶಾಶ್ವತ… ಸದಾ ಜನರ ಮಧ್ಯೆ ಇದ್ದು ಸ್ಪಂದನೀಯ ವ್ಯಕ್ತಿತ್ವದೊಂದಿಗೆ ನಮ್ಮೊಂದಿಗಿದ್ದ ಡಾ. ಅಂಬರೀಶ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಪ್ರೀತಿ, ಭಕ್ತಿಪೂರ್ವಕವಾಗಿ ಸ್ಮರಿಸುತ್ತಿದ್ದೇನೆ. ನಾಡು, ನುಡಿಗೆ ಅವರು ಸಲ್ಲಿಸಿದ ಸೇವೆಗಳು, ಅವರು ಕಲಿಸಿದ ಜೀವನ ಪಾಠಗಳು ಸದಾ ನಮ್ಮನ್ನು ಕಾಯಲಿವೆ, ಅವರಿಗೆ ಜನಮಾನಸದಲ್ಲಿ ದೊರಕುತ್ತಿರುವ ಅಭಿಮಾನ ನಮ್ಮ ಕುಟುಂಬಕ್ಕೆ ನಿರಂತರ ಆಶೀರ್ವಾದ. ಇದಕ್ಕೆ ನಾವೆಲ್ಲಾ ಚಿರಋಣಿ’ ಎಂದಿದ್ದಾರೆ.

ಮುಂದುವರೆದು, ‘ನೀವು ಪ್ರತಿ ಹೃದಯ ಬಡಿತದಲ್ಲಿ ನೆಲೆಸಿದ್ದೀರಿ, ಎಲ್ಲೆಲ್ಲೂ ಇದ್ದೀರಿ, ಪ್ರತಿ ಹುಟ್ಟಿನಲ್ಲೂ ಇದ್ದೀರಿ. ಈಗ ನೀವು ಮರಳಿ ಬಂದಿದ್ದೀರಿ’ ಎಂದಿದ್ದಾರೆ ಸುಮಲತಾ. ಅಂದಹಾಗೆ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಇತ್ತೀಚೆಗಷ್ಟೆ ತಂದೆಯಾಗಿದ್ದು ಅವರಿಗೆ ಮುದ್ದಾದ ಗಂಡು ಮಗು ಜನಿಸಿದೆ. ಅಂಬರೀಶ್ ಅವರೇ ಮತ್ತೆ ಹುಟ್ಟಿಬಂದಿದ್ದಾರೆ ಎಂಬ ನಂಬಿಕೆಯಲ್ಲಿ ಅವರ ಕುಟುಂಬ ಇದೆ. ಇದೇ ಕಾರಣಕ್ಕೆ ಸುಮಲತಾ ಅವರು ‘ಮರಳಿ ಬಂದಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಅಭಿಷೇಕ್-ಅವಿವಾ ಮಗನಿಗೆ ‘ಅಂಬರೀಷ್’ ಎಂದು ನಾಮಕರಣ? ಕಾರಣ ಇಲ್ಲಿದೆ

ಅಂಬರೀಶ್ ಅವರ ಅಭಿಮಾನಿಗಳು ಅವರ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಮಾಡಿದ್ದಾರೆ. ಅಂಬರೀಶ್ ಅವರು 2018 ರ ನವೆಂಬರ್ 24 ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಅದಕ್ಕೆ ಮುಂಚೆಯೂ ಸಹ ಅಂಬರೀಶ್ ಅವರು ಉಸಿರಾಟದ ಸಮಸ್ಯೆ ಸೇರಿದಂತೆ ಕೆಲವು ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಬಳಲಿದ್ದರು. ಅಂಬರೀಶ್ ಅವರನ್ನು ಕಂಠಿರವ ಸ್ಟುಡಿಯೋನಲ್ಲಿ ಸಮಾಧಿ ಮಾಡಲಾಗಿದೆ.

ಅಂಬರೀಶ್ ಕನ್ನಡ ಚಿತ್ರರಂಗದ ಮೇರು ನಟರಲ್ಲೊಬ್ಬರು. ‘ನಾಗರಹಾವು’ ಸಿನಿಮಾ ಮೂಲಕ ವಿಲನ್ ಆಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ ಆ ನಂತರ ನಾಯಕನಾಗಿ ಕನ್ನಡ ಸಿನಿಮಾ ಪ್ರೇಕ್ಷಕರ ಮನದಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ. ನಟನಾಗಿ, ರಾಜಕಾರಣಿಯಾಗಿಯೂ ಅಂಬರೀಶ್ ಸೇವೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!