AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃತಜ್ಞತೆ ಮುಖ್ಯ; ಸುದೀಪ್-ವಿಜಯಲಕ್ಷ್ಮೀ ಹಳೆ ಫೋಟೋ ವೈರಲ್ ಮಾಡಿದ ಫ್ಯಾನ್ಸ್

ಕಿಚ್ಚ ಸುದೀಪ್ ಹೇಳಿಕೆ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ತಿರುಗೇಟು ದೊಡ್ಡ ಚರ್ಚೆಗೆ ಕಾರಣವಾಗಿದೆ. ಸುದೀಪ್ 'ಮಾರ್ಕ್' ಸಿನಿಮಾ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ನೀಡಿದ ಹೇಳಿಕೆಯನ್ನು ದರ್ಶನ್ ಅಭಿಮಾನಿಗಳು ತಮ್ಮನ್ನು ಉದ್ದೇಶಿಸಿ ಅಂದುಕೊಂಡರು. ಇದಕ್ಕೆ ವಿಜಯಲಕ್ಷ್ಮೀ ಕೌಂಟರ್ ನೀಡಿದ್ದು, ಹಳೆಯ ಫೋಟೋಗಳು ಮತ್ತು ಸುದೀಪ್‌ನ ಹಿಂದಿನ ಹೇಳಿಕೆಗಳು ವೈರಲ್ ಆಗುತ್ತಿವೆ. ಈ ವಿವಾದದ ಸಂಪೂರ್ಣ ವಿವರ ಇಲ್ಲಿದೆ.

ಕೃತಜ್ಞತೆ ಮುಖ್ಯ; ಸುದೀಪ್-ವಿಜಯಲಕ್ಷ್ಮೀ ಹಳೆ ಫೋಟೋ ವೈರಲ್ ಮಾಡಿದ ಫ್ಯಾನ್ಸ್
ಸುದೀಪ್-ವಿಜಯಲಕ್ಷ್ಮೀ
ರಾಜೇಶ್ ದುಗ್ಗುಮನೆ
|

Updated on: Dec 22, 2025 | 3:21 PM

Share

ಕಿಚ್ಚ ಸುದೀಪ್ ಹೇಳಿಕೆ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ತಿರುಗೇಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಸುದೀಪ್ ಅವರು ಯಾರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ ಮಾತು ಎಂದು ಭಾವಿಸಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಲ್​​ಚಲ್​ ಸೃಷ್ಟಿಸಿದ್ದರು. ಇದಕ್ಕೆ ವಿಜಯಲಕ್ಷ್ಮೀ ಅವರು ತಿರುಗೇಟು ನೀಡಿದ್ದಾರೆ. ಈ ಬೆನ್ನಲ್ಲೇ ಸುದೀಪ್ ಹಾಗೂ ವಿಜಯಲಕ್ಷ್ಮೀ ಅವರ ಹಳೆಯ ಫೋಟೋ ಹಾಗೂ ಸುದೀಪ್ ಹಳೆಯ ಹೇಳಿಕೆ ವೈರಲ್ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಏನಿದು ವಾರ್?

‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಈವೆಂಟ್ ವೇಳೆ ಮಾತನಾಡಿದ್ದ ಸುದೀಪ್, ‘ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ. ಈ ವೇಳೆ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗಿದೆ’ ಎಂದು ಹೇಳಿದ್ದರು. ‘ದರ್ಶನ್ ಫ್ಯಾನ್ಸ್ ಮಾರ್ಕ್ ಚಿತ್ರವನ್ನು ಹಾಳು ಮಾಡಲು ಸನ್ನದ್ಧರಾಗಿದ್ದಾರೆ’ ಎಂಬರ್ಥದಲ್ಲಿ ಇದನ್ನು ಕಲ್ಪಿಸಿಕೊಳ್ಳಲಾಯಿತು. ಇದಕ್ಕೆ ವಿಜಯಲಕ್ಷ್ಮೀ ಅವರು ಕೌಂಟರ್ ಕೊಟ್ಟಿದ್ದಾರೆ. ‘ದರ್ಶನ್ ಇಲ್ಲದ ಕಾರಣಕ್ಕೆ ಸುದೀಪ್ ಈ ರೀತಿ ಮಾತನಾಡುತ್ತಿದ್ದಾರೆ’ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು.

ಹಳೆಯ ಫೋಟೋ ವೈರಲ್

ವಿಜಯಲಕ್ಷ್ಮೀ ಹೇಳಿಕೆ ಬೆನ್ನಲ್ಲೇ, ಸುದೀಪ್ ಹಾಗೂ ವಿಜಯಲಕ್ಷ್ಮೀ ಅವರು ಸುದ್ದಿಗೋಷ್ಠಿಯಲ್ಲಿ ಒಟ್ಟಾಗಿ ಕುಳಿತಿರೋ ಫೋಟೋನ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಕೃತಜ್ಞತೆ ಮುಖ್ಯ ಎಂಬರ್ಥದಲ್ಲಿ ಪೋಸ್ಟ್​​ಗಳನ್ನು ಹಾಕಲಾಗುತ್ತಿದೆ. ದರ್ಶನ್​ ಅವರಿಗೆ 2013ರಲ್ಲ ‘ಬೃಂದಾವನ’ ಚಿತ್ರದ ಶೂಟಿಂಗ್ ವೇಳೆ ಗಾಯವಾಗಿತ್ತು. ಆಗ ಆಸ್ಪತ್ರೆಯಲ್ಲಿದ್ದಾಗ ಸುದೀಪ್ ಅವರು ಈ ಕುಟುಂಬದ ಬೆಂಬಲಕ್ಕೆ ನಿಂತಿದ್ದರು ಎನ್ನಲಾಗಿದೆ. ದರ್ಶನ್ ಆರಾಮಾಗಿದ್ದಾರೆ ಎಂದು ಹೇಳಲು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ವಿಜಯಲಕ್ಷ್ಮೀ ಜೊತೆ ಭಾಗಿ ಆಗಿದ್ದರು ಎನ್ನಲಾಗಿದೆ. ಆ ಸಂದರ್ಭದ ಫೋಟೋ ಇದು ಎನ್ನಲಾಗಿದೆ.

ವಿಜಯಲಕ್ಷ್ಮೀಗೆ ಸಹಾಯ ಮಾಡಿದ್ರಾ?

ದರ್ಶನ್ ಅವರು ವಿಜಯಲಕ್ಷ್ಮೀ ಮೇಲೆ ಹಲ್ಲೆ ಮಾಡಿದ್ದರು. ಈ ಹಲ್ಲೆ ಬಳಿಕ ವಿಜಯಲಕ್​ಷ್ಮೀ ದರ್ಶನ್ ವಿರುದ್ಧ ಕೇಸ್ ಹಾಕಿದ್ದರು. ಈ ವೇಳೆ ವಿಜಯಲಕ್ಷ್ಮೀ ಅವರು ಸುದೀಪ್ ಅವರಿಂದ ಬೆಂಬಲ ಕೇಳಿದ್ದರೆ ಎಂಬ ಪ್ರಶ್ನೆ ಮೂಡಿತ್ತು. ಈ ಮೊದಲು ಮಾಧ್ಯಮದ ಜೊತೆ ಮಾತನಾಡಿದ್ದ ಸುದೀಪ್, ‘ಯಾರೋ ಒಬ್ಬರು ಬಂದು ಅವರು ನಂಗೆ ಹೊಡೀತಾ ಇದಾರೆ ಎಂದು ಸಪೋರ್ಟ್ ಕೇಳ್ತಾರೆ. ಆ ವ್ಯಕ್ತಿ ಸಪೋರ್ಟ್ ಮಾಡ್ತಾನೆ. ಆದರೆ, ಹೊಡೆದಾಡಿಕೊಂಡವರು ಒಂದಾಗ್ತಾರೆ. ಸಪೋರ್ಟ್ ಮಾಡಿದವನು ಗೂಬೆ ತರ ಕಾಣ್ತಾರೆ’ ಎಂದು ಹೇಳಿದ್ದರು. ಇದು ವಿಜಯಲಕ್ಷ್ಮೀ-ದರ್ಶನ್ ಬಗ್ಗೆ ಹೇಳಿದ ಮಾತು ಎಂದು ಊಹಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ