ಕೃತಜ್ಞತೆ ಮುಖ್ಯ; ಸುದೀಪ್-ವಿಜಯಲಕ್ಷ್ಮೀ ಹಳೆ ಫೋಟೋ ವೈರಲ್ ಮಾಡಿದ ಫ್ಯಾನ್ಸ್

ಕಿಚ್ಚ ಸುದೀಪ್ ಹೇಳಿಕೆ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ತಿರುಗೇಟು ದೊಡ್ಡ ಚರ್ಚೆಗೆ ಕಾರಣವಾಗಿದೆ. ಸುದೀಪ್ 'ಮಾರ್ಕ್' ಸಿನಿಮಾ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ನೀಡಿದ ಹೇಳಿಕೆಯನ್ನು ದರ್ಶನ್ ಅಭಿಮಾನಿಗಳು ತಮ್ಮನ್ನು ಉದ್ದೇಶಿಸಿ ಅಂದುಕೊಂಡರು. ಇದಕ್ಕೆ ವಿಜಯಲಕ್ಷ್ಮೀ ಕೌಂಟರ್ ನೀಡಿದ್ದು, ಹಳೆಯ ಫೋಟೋಗಳು ಮತ್ತು ಸುದೀಪ್‌ನ ಹಿಂದಿನ ಹೇಳಿಕೆಗಳು ವೈರಲ್ ಆಗುತ್ತಿವೆ. ಈ ವಿವಾದದ ಸಂಪೂರ್ಣ ವಿವರ ಇಲ್ಲಿದೆ.

ಕೃತಜ್ಞತೆ ಮುಖ್ಯ; ಸುದೀಪ್-ವಿಜಯಲಕ್ಷ್ಮೀ ಹಳೆ ಫೋಟೋ ವೈರಲ್ ಮಾಡಿದ ಫ್ಯಾನ್ಸ್
ಸುದೀಪ್-ವಿಜಯಲಕ್ಷ್ಮೀ

Updated on: Dec 22, 2025 | 3:21 PM

ಕಿಚ್ಚ ಸುದೀಪ್ ಹೇಳಿಕೆ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ತಿರುಗೇಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಸುದೀಪ್ ಅವರು ಯಾರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ್ದರು. ಇದು ದರ್ಶನ್ ಅಭಿಮಾನಿಗಳಿಗೆ ಹೇಳಿದ ಮಾತು ಎಂದು ಭಾವಿಸಿದ ಫ್ಯಾನ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಲ್​​ಚಲ್​ ಸೃಷ್ಟಿಸಿದ್ದರು. ಇದಕ್ಕೆ ವಿಜಯಲಕ್ಷ್ಮೀ ಅವರು ತಿರುಗೇಟು ನೀಡಿದ್ದಾರೆ. ಈ ಬೆನ್ನಲ್ಲೇ ಸುದೀಪ್ ಹಾಗೂ ವಿಜಯಲಕ್ಷ್ಮೀ ಅವರ ಹಳೆಯ ಫೋಟೋ ಹಾಗೂ ಸುದೀಪ್ ಹಳೆಯ ಹೇಳಿಕೆ ವೈರಲ್ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಏನಿದು ವಾರ್?

‘ಮಾರ್ಕ್’ ಸಿನಿಮಾ ಡಿಸೆಂಬರ್ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಪ್ರೀ ರಿಲೀಸ್ ಈವೆಂಟ್ ವೇಳೆ ಮಾತನಾಡಿದ್ದ ಸುದೀಪ್, ‘ನಮ್ಮ ಸಿನಿಮಾ ರಿಲೀಸ್ ಆಗುತ್ತಿದೆ. ಈ ವೇಳೆ ಒಂದು ಪಡೆ ಯುದ್ಧಕ್ಕೆ ಸಿದ್ಧವಾಗಿದೆ’ ಎಂದು ಹೇಳಿದ್ದರು. ‘ದರ್ಶನ್ ಫ್ಯಾನ್ಸ್ ಮಾರ್ಕ್ ಚಿತ್ರವನ್ನು ಹಾಳು ಮಾಡಲು ಸನ್ನದ್ಧರಾಗಿದ್ದಾರೆ’ ಎಂಬರ್ಥದಲ್ಲಿ ಇದನ್ನು ಕಲ್ಪಿಸಿಕೊಳ್ಳಲಾಯಿತು. ಇದಕ್ಕೆ ವಿಜಯಲಕ್ಷ್ಮೀ ಅವರು ಕೌಂಟರ್ ಕೊಟ್ಟಿದ್ದಾರೆ. ‘ದರ್ಶನ್ ಇಲ್ಲದ ಕಾರಣಕ್ಕೆ ಸುದೀಪ್ ಈ ರೀತಿ ಮಾತನಾಡುತ್ತಿದ್ದಾರೆ’ ಎಂಬರ್ಥದಲ್ಲಿ ಹೇಳಿಕೆ ನೀಡಿದ್ದರು.

ಹಳೆಯ ಫೋಟೋ ವೈರಲ್

ವಿಜಯಲಕ್ಷ್ಮೀ ಹೇಳಿಕೆ ಬೆನ್ನಲ್ಲೇ, ಸುದೀಪ್ ಹಾಗೂ ವಿಜಯಲಕ್ಷ್ಮೀ ಅವರು ಸುದ್ದಿಗೋಷ್ಠಿಯಲ್ಲಿ ಒಟ್ಟಾಗಿ ಕುಳಿತಿರೋ ಫೋಟೋನ ಫ್ಯಾನ್ಸ್ ವೈರಲ್ ಮಾಡುತ್ತಿದ್ದಾರೆ. ಕೃತಜ್ಞತೆ ಮುಖ್ಯ ಎಂಬರ್ಥದಲ್ಲಿ ಪೋಸ್ಟ್​​ಗಳನ್ನು ಹಾಕಲಾಗುತ್ತಿದೆ. ದರ್ಶನ್​ ಅವರಿಗೆ 2013ರಲ್ಲ ‘ಬೃಂದಾವನ’ ಚಿತ್ರದ ಶೂಟಿಂಗ್ ವೇಳೆ ಗಾಯವಾಗಿತ್ತು. ಆಗ ಆಸ್ಪತ್ರೆಯಲ್ಲಿದ್ದಾಗ ಸುದೀಪ್ ಅವರು ಈ ಕುಟುಂಬದ ಬೆಂಬಲಕ್ಕೆ ನಿಂತಿದ್ದರು ಎನ್ನಲಾಗಿದೆ. ದರ್ಶನ್ ಆರಾಮಾಗಿದ್ದಾರೆ ಎಂದು ಹೇಳಲು ಕರೆದ ಸುದ್ದಿಗೋಷ್ಠಿಯಲ್ಲಿ ಅವರು ವಿಜಯಲಕ್ಷ್ಮೀ ಜೊತೆ ಭಾಗಿ ಆಗಿದ್ದರು ಎನ್ನಲಾಗಿದೆ. ಆ ಸಂದರ್ಭದ ಫೋಟೋ ಇದು ಎನ್ನಲಾಗಿದೆ.

ವಿಜಯಲಕ್ಷ್ಮೀಗೆ ಸಹಾಯ ಮಾಡಿದ್ರಾ?

ದರ್ಶನ್ ಅವರು ವಿಜಯಲಕ್ಷ್ಮೀ ಮೇಲೆ ಹಲ್ಲೆ ಮಾಡಿದ್ದರು. ಈ ಹಲ್ಲೆ ಬಳಿಕ ವಿಜಯಲಕ್​ಷ್ಮೀ ದರ್ಶನ್ ವಿರುದ್ಧ ಕೇಸ್ ಹಾಕಿದ್ದರು. ಈ ವೇಳೆ ವಿಜಯಲಕ್ಷ್ಮೀ ಅವರು ಸುದೀಪ್ ಅವರಿಂದ ಬೆಂಬಲ ಕೇಳಿದ್ದರೆ ಎಂಬ ಪ್ರಶ್ನೆ ಮೂಡಿತ್ತು. ಈ ಮೊದಲು ಮಾಧ್ಯಮದ ಜೊತೆ ಮಾತನಾಡಿದ್ದ ಸುದೀಪ್, ‘ಯಾರೋ ಒಬ್ಬರು ಬಂದು ಅವರು ನಂಗೆ ಹೊಡೀತಾ ಇದಾರೆ ಎಂದು ಸಪೋರ್ಟ್ ಕೇಳ್ತಾರೆ. ಆ ವ್ಯಕ್ತಿ ಸಪೋರ್ಟ್ ಮಾಡ್ತಾನೆ. ಆದರೆ, ಹೊಡೆದಾಡಿಕೊಂಡವರು ಒಂದಾಗ್ತಾರೆ. ಸಪೋರ್ಟ್ ಮಾಡಿದವನು ಗೂಬೆ ತರ ಕಾಣ್ತಾರೆ’ ಎಂದು ಹೇಳಿದ್ದರು. ಇದು ವಿಜಯಲಕ್ಷ್ಮೀ-ದರ್ಶನ್ ಬಗ್ಗೆ ಹೇಳಿದ ಮಾತು ಎಂದು ಊಹಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us