AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರಕಾಂಡ’ ಚಿತ್ರಕ್ಕೆ ‘ಶೈತಾನ್’ ಸಿನಿಮಾ ಸಂಗೀತ ಸಂಯೋಜಕ; ಕನ್ನಡಕ್ಕೆ ಬಂದ ಅಮಿತ್ ತ್ರಿವೇದಿ

ಅಮಿತ್ ತ್ರಿವೇದಿ ಅವರು ಭಾರತ ಚಿತ್ರರಂಗದ ಬೇಡಿಕೆಯ ಸಂಗೀತ ನಿರ್ದೇಶಕರಲ್ಲಿ ಒಬ್ಬರು. 2008ರಲ್ಲಿ ‘ಆಮಿರ್’ ಸಿನಿಮಾ ಮೂಲಕ ಸಂಗೀತ ಸಂಯೋಜಕರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. 2009ರಲ್ಲಿ ‘ದೇವ್​.ಡಿ’ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿ ರಾಷ್ಟ್ರಪ್ರಶಸ್ತಿ ಪಡೆದರು.

‘ಉತ್ತರಕಾಂಡ’ ಚಿತ್ರಕ್ಕೆ ‘ಶೈತಾನ್’ ಸಿನಿಮಾ ಸಂಗೀತ ಸಂಯೋಜಕ; ಕನ್ನಡಕ್ಕೆ ಬಂದ ಅಮಿತ್ ತ್ರಿವೇದಿ
ಅಮಿತ್ ತ್ರಿವೇದಿ
ರಾಜೇಶ್ ದುಗ್ಗುಮನೆ
|

Updated on: Apr 03, 2024 | 10:34 AM

Share

‘ಶೈತಾನ್’ (Shaitaan Movie) ರೀತಿಯ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ಸಂಯೋಜನೆ ಮಾಡಿರೋ ಹಿಂದಿ ಗಾಯಕ, ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಈಗ ಕನ್ನಡಕ್ಕೆ ಬಂದಿದ್ದಾರೆ. ಶಿವರಾಜ್​ಕುಮಾರ್ ಹಾಗೂ ಡಾಲಿ ಧನಂಜಯ್ ನಟನೆಯ ‘ಉತ್ತರಕಾಂಡ’ ಚಿತ್ರಕ್ಕೆ ಅವರು ಸಂಗೀತ ಸಂಯೋಜನೆ ಮಾಡಲಿದ್ದಾರೆ. ಈ ವಿಚಾರವನ್ನು ತಂಡದವರೇ ರಿವೀಲ್ ಮಾಡಿದ್ದಾರೆ. ಇದನ್ನು ಕೇಳಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಅಮಿತ್ ತ್ರಿವೇದಿ ಅವರು ಭಾರತ ಚಿತ್ರರಂಗದ ಬೇಡಿಕೆಯ ಸಂಗೀತ ನಿರ್ದೇಶಕರಲ್ಲಿ ಒಬ್ಬರು. 2008ರಲ್ಲಿ ‘ಆಮಿರ್’ ಸಿನಿಮಾ ಮೂಲಕ ಸಂಗೀತ ಸಂಯೋಜಕರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟರು. 2009ರಲ್ಲಿ ‘ದೇವ್​.ಡಿ’ ಸಿನಿಮಾಗೆ ಸಂಗೀತ ಸಂಯೋಜನೆ ಮಾಡಿ ರಾಷ್ಟ್ರಪ್ರಶಸ್ತಿ ಪಡೆದರು. ‘ವೇಕ್​ ಅಪ್​ ಸಿಡ್’, ‘ಕ್ವೀನ್’, ‘ಇಂಗ್ಲಿಷ್ ವಿಂಗ್ಲಿಷ್’, ‘ಉಡ್ತಾ ಪಂಜಾಬ್’, ‘ಡಿಯರ್ ಜಿಂದಗಿ, ‘ಅಂಧಾದೂನ್’, ‘ಶೈತಾನ್’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಅವರು ಕೆಲಸ ಮಾಡಿದ್ದಾರೆ. ಈಗ ಅವರು ಕನ್ನಡ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.

‘ಉತ್ತರಕಾಂಡ’ ಪ್ರೋಮೋ ಈ ಮೊದಲು ಬಿಡುಗಡೆ ಆಗಿತ್ತು. ಆಗ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದರು. ಈಗ ಸಿನಿಮಾಗೆ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಈ ಬಗ್ಗೆ ನಿರ್ದೇಶಕ ರೋಹಿತ್ ಪದಕಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರ ಸಂಗೀತ ಸಂಯೋಜನೆಯಿಂದ ಸಿನಿಮಾದ ಮೆರಗು ಹೆಚ್ಚಲಿದೆ ಎನ್ನುವ ಭರವಸೆಯಲ್ಲಿದ್ದಾರೆ.

ಇದನ್ನೂ ಓದಿ: ‘ಉತ್ತರಕಾಂಡ’ ಸಿನಿಮಾದಿಂದ ಹೊರಬಂದ ರಮ್ಯಾ; ಅಭಿಮಾನಿಗಳಿಗೆ ನಿರಾಸೆ

‘ಉತ್ತರಕಾಂಡ’ ಸಿನಿಮಾ ಉತ್ತರಕರ್ನಾಟಕದ ಹಳ್ಳಿಗಾಡಿನ ಕಥೆಯನ್ನು ಹೊಂದಿದೆ. ಸಖತ್ ರಗಡ್ ಭಾಷೆಯೊಂದಿಗೆ ಸಿನಿಮಾ ಮೂಡಿ ಬರುತ್ತಿದೆ. ಇಂಥ ಕಥೆಗೆ ಅಮಿತ್ ತ್ರಿವೇದಿ ಅವರ ಸಂಗೀತದಿಂದ ತೂಕ ಹೆಚ್ಚಲಿದೆ ಎನ್ನುವ ಭರವಸೆ ಚಿತ್ರತಂಡದ್ದು.  ‘ಉತ್ತರಕಾಂಡ’ ಚಿತ್ರವನ್ನು ಕೆಆರ್​ಜಿ ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ‌ ಜಿ. ರಾಜ್ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಮತ್ತು ಡಾಲಿ‌ ಧನಂಜಯ್ ಮುಖ್ಯ ಭೂಮಿಕೆ ನಿರ್ವಹಿಸಿದ್ದಾರೆ. ಏಪ್ರಿಲ್ 15ರಿಂದ ಸಿನಿಮಾದ ಶೂಟಿಂಗ್ ಆರಂಭ ಆಗಲಿದೆ. ಈ ಸಿನಿಮಾದಲ್ಲಿ ರಮ್ಯಾ ನಟಿಸಲಿದ್ದಾರೆ ಎಂದು ಘೋಷಣೆ ಆಗಿತ್ತು. ಆದರೆ, ಅವರು ಸಿನಿಮಾದಿಂದ ಹೊರನಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು