AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​

ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಡಾ. ಹಂಸಲೇಖ ಅವರುಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್​​ಗಳನ್ನು ಸಿರೀಸ್​​ಗಳನ್ನಾಗಿ ಮಾಡಲಾಗುತ್ತಿದೆ.

ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Mar 29, 2022 | 9:33 PM

ಸಿದ್ದಗಂಗಾ ಶ್ರೀಗಳು (siddaganga sri) ಮಾಡಿದ ಸಾಮಾಜಿಕ ಕೆಲಸಗಳು ತುಂಬಾನೇ ದೊಡ್ಡದು. ಈಗ ಅವರ ಕುರಿತು ಮಿನಿ ಸಿನಿ ಸೀರಿಸ್ (Mini Series) ಸಿದ್ಧವಾಗುತ್ತಿದೆ. ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ನಟಿಸಬೇಕು ಎಂಬುದು ಚಿತ್ರತಂಡದ ಆಶಯ. ಈ ಕಾರಣಕ್ಕೆ ಅವರ ಕಾಲ್​ಶೀಟ್​ಅನ್ನು ಕೇಳಲಾಗಿದೆ. ಅವರು ಒಪ್ಪಿದರೆ ಅವರು ಪೂರ್ಣಪ್ರಮಾಣದಲ್ಲಿ ಕನ್ನಡದಲ್ಲಿ (Kannada) ನಟಿಸಿದಂತೆ ಆಗಲಿದೆ. ಈ ಮೊದಲು ‘ಅಮೃತಧಾರೆ’ ಸಿನಿಮಾದಲ್ಲಿ ಅಮಿತಾಭ್​ ಅತಿಥಿ ಪಾತ್ರ ಮಾಡಿದ್ದರು. ಇದಾದ ಬಳಿಕ ಅವರು ಕನ್ನಡಕ್ಕೆ ಮರಳಿಲ್ಲ.

‘ಅಮಿತಾಭ್ ಬಚ್ಚನ್ ಅವರು ಸಿದ್ದಗಂಗಾ ಶ್ರೀಗಳ ಪಾತ್ರವನ್ನ ಮಾಡಲು ಈಗಾಗಲೇ ಅಪ್ರೋಚ್ ಮಾಡಲಾಗಿದೆ. ಅವರು ಕಥೆಯನ್ನು ಕೇಳಿದ್ದಾರೆ. ಆದರೆ, ಸದ್ಯ ಅಮಿತಾಭ್ ಅವರ ಆರೋಗ್ಯದಲ್ಲಿ ಏರುಪೇರಾಗಿರೋ ಕಾರಣ ಗ್ರೀನ್ ಸಿಗ್ನಲ್​ಗಾಗಿ ಕಾಯುತ್ತಿದ್ದೇವೆ’ ಎಂದು ಹಂಸಲೇಖ ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಡಾ. ಹಂಸಲೇಖ ಅವರ ಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್​​ಗಳನ್ನು ಒಳಗೊಂಡ ಮಿನಿ ಸಿರೀಸ್​​ಗಳನ್ನಾಗಿ ಮಾಡಲಾಗುತ್ತಿದೆ. ದೊಡ್ಡ ಮೊತ್ತದಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಇಂಗ್ಲಿಷ್​ ಹಾಗೂ ಸಂಸ್ಕೃತ  ಭಾಷೆಗಳಲ್ಲಿ ಈ ಸೀರಿಸ್ ಸಿದ್ಧವಾಗುತ್ತಿದೆ. ಏಳಕ್ಕೂ ಹೆಚ್ಚು ತಂಡಗಳಲ್ಲಿ, 300 ಅಧಿಕ ತಂತ್ರಜ್ಞರು ಈ ಮಿನಿ ಸೀರಿಸ್​ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಸಿನಿ ಸಿರೀಸ್​ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಏಪ್ರಿಲ್ 1ರಂದು ತುಮಕೂರಿನ  ಸಿದ್ದಗಂಗಾ ಮಠದಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಅಂದಿನ ಕಾರ್ಯಕ್ರಮದಲ್ಲಿ 115 ಜನ ಗಾಯಕರು ಹಂಸಲೇಖ ಅವರ ಸಾರಥ್ಯದಲ್ಲಿ 6 ಹಾಡುಗಳನ್ನ ಹಾಡಲಿದ್ದಾರೆ. ಅಮಿತ್ ಷಾ ಜೊತೆಗೆ ರಾಜ್ಯದ ನಾಯಕರು ಇರಲಿದ್ದಾರೆ. ಮಾಜಿ ಐಎಎಸ್ ಅಧಿಕಾರಿ ಡಾ. ಸೋಮಶೇಖರ್, ಎ.ಪಿ ರೇಣುಕಾಚಾರ್ಯ, ನಿರ್ಮಾಪಕ ಎಮ್.ರುದ್ರೇಶ್, ದೀಪಕ್, ಸದಾ ಶಿವಯ್ಯ ಈ ಸುದ್ದಿಗೋಷ್ಠಿಯಲ್ಲಿದ್ದಾರೆ.

ಇದನ್ನೂ ಓದಿ: ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರಿಂದ ಹಲ್ಲೆ! ಮೊಬೈಲ್ ಕಸಿದು ಪರಾರಿ

ತುಮಕೂರು ಸಿದ್ದಗಂಗಾ ಮಠದಲ್ಲಿ ಐತಿಹಾಸಿಕ ದನಗಳ ಜಾತ್ರೆ; ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿ ರಾಸುಗಳ ಖರೀದಿ

Published On - 9:17 pm, Tue, 29 March 22

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ