AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​

ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಡಾ. ಹಂಸಲೇಖ ಅವರುಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್​​ಗಳನ್ನು ಸಿರೀಸ್​​ಗಳನ್ನಾಗಿ ಮಾಡಲಾಗುತ್ತಿದೆ.

ಸಿದ್ದಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್​?; ಸಿದ್ಧವಾಗುತ್ತಿದೆ ಮಿನಿ ಸಿನಿ ಸೀರಿಸ್​
TV9 Web
| Edited By: |

Updated on:Mar 29, 2022 | 9:33 PM

Share

ಸಿದ್ದಗಂಗಾ ಶ್ರೀಗಳು (siddaganga sri) ಮಾಡಿದ ಸಾಮಾಜಿಕ ಕೆಲಸಗಳು ತುಂಬಾನೇ ದೊಡ್ಡದು. ಈಗ ಅವರ ಕುರಿತು ಮಿನಿ ಸಿನಿ ಸೀರಿಸ್ (Mini Series) ಸಿದ್ಧವಾಗುತ್ತಿದೆ. ಸಿದ್ಧಗಂಗಾ ಶ್ರೀಗಳ ಪಾತ್ರದಲ್ಲಿ ಅಮಿತಾಭ್ ಬಚ್ಚನ್ ಅವರು ನಟಿಸಬೇಕು ಎಂಬುದು ಚಿತ್ರತಂಡದ ಆಶಯ. ಈ ಕಾರಣಕ್ಕೆ ಅವರ ಕಾಲ್​ಶೀಟ್​ಅನ್ನು ಕೇಳಲಾಗಿದೆ. ಅವರು ಒಪ್ಪಿದರೆ ಅವರು ಪೂರ್ಣಪ್ರಮಾಣದಲ್ಲಿ ಕನ್ನಡದಲ್ಲಿ (Kannada) ನಟಿಸಿದಂತೆ ಆಗಲಿದೆ. ಈ ಮೊದಲು ‘ಅಮೃತಧಾರೆ’ ಸಿನಿಮಾದಲ್ಲಿ ಅಮಿತಾಭ್​ ಅತಿಥಿ ಪಾತ್ರ ಮಾಡಿದ್ದರು. ಇದಾದ ಬಳಿಕ ಅವರು ಕನ್ನಡಕ್ಕೆ ಮರಳಿಲ್ಲ.

‘ಅಮಿತಾಭ್ ಬಚ್ಚನ್ ಅವರು ಸಿದ್ದಗಂಗಾ ಶ್ರೀಗಳ ಪಾತ್ರವನ್ನ ಮಾಡಲು ಈಗಾಗಲೇ ಅಪ್ರೋಚ್ ಮಾಡಲಾಗಿದೆ. ಅವರು ಕಥೆಯನ್ನು ಕೇಳಿದ್ದಾರೆ. ಆದರೆ, ಸದ್ಯ ಅಮಿತಾಭ್ ಅವರ ಆರೋಗ್ಯದಲ್ಲಿ ಏರುಪೇರಾಗಿರೋ ಕಾರಣ ಗ್ರೀನ್ ಸಿಗ್ನಲ್​ಗಾಗಿ ಕಾಯುತ್ತಿದ್ದೇವೆ’ ಎಂದು ಹಂಸಲೇಖ ಹೇಳಿದ್ದಾರೆ.

ಸಿದ್ದಗಂಗಾ ಶ್ರೀಗಳ 115 ಜಯಂತೋತ್ಸವದ ಪ್ರಯುಕ್ತ ಶ್ರೀಗಳ ಜೀವನ ಚರಿತ್ರೆಯನ್ನು ಸಾರುವ ಸಿನಿ ಸೀರಿಸ್ ಸಿದ್ಧವಾಗುತ್ತಿದೆ. ಡಾ. ಹಂಸಲೇಖ ಅವರ ಸಾರಥ್ಯದಲ್ಲಿ ಒಟ್ಟು 52 ಎಪಿಸೋಡ್​​ಗಳನ್ನು ಒಳಗೊಂಡ ಮಿನಿ ಸಿರೀಸ್​​ಗಳನ್ನಾಗಿ ಮಾಡಲಾಗುತ್ತಿದೆ. ದೊಡ್ಡ ಮೊತ್ತದಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಇಂಗ್ಲಿಷ್​ ಹಾಗೂ ಸಂಸ್ಕೃತ  ಭಾಷೆಗಳಲ್ಲಿ ಈ ಸೀರಿಸ್ ಸಿದ್ಧವಾಗುತ್ತಿದೆ. ಏಳಕ್ಕೂ ಹೆಚ್ಚು ತಂಡಗಳಲ್ಲಿ, 300 ಅಧಿಕ ತಂತ್ರಜ್ಞರು ಈ ಮಿನಿ ಸೀರಿಸ್​ನಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಸಿನಿ ಸಿರೀಸ್​ಅನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಏಪ್ರಿಲ್ 1ರಂದು ತುಮಕೂರಿನ  ಸಿದ್ದಗಂಗಾ ಮಠದಲ್ಲಿ ಉದ್ಘಾಟನೆ ಮಾಡಲಿದ್ದಾರೆ. ಅಂದಿನ ಕಾರ್ಯಕ್ರಮದಲ್ಲಿ 115 ಜನ ಗಾಯಕರು ಹಂಸಲೇಖ ಅವರ ಸಾರಥ್ಯದಲ್ಲಿ 6 ಹಾಡುಗಳನ್ನ ಹಾಡಲಿದ್ದಾರೆ. ಅಮಿತ್ ಷಾ ಜೊತೆಗೆ ರಾಜ್ಯದ ನಾಯಕರು ಇರಲಿದ್ದಾರೆ. ಮಾಜಿ ಐಎಎಸ್ ಅಧಿಕಾರಿ ಡಾ. ಸೋಮಶೇಖರ್, ಎ.ಪಿ ರೇಣುಕಾಚಾರ್ಯ, ನಿರ್ಮಾಪಕ ಎಮ್.ರುದ್ರೇಶ್, ದೀಪಕ್, ಸದಾ ಶಿವಯ್ಯ ಈ ಸುದ್ದಿಗೋಷ್ಠಿಯಲ್ಲಿದ್ದಾರೆ.

ಇದನ್ನೂ ಓದಿ: ತುಮಕೂರು ಸಿದ್ದಗಂಗಾ ಮಠದ ವಿದ್ಯಾರ್ಥಿ ಮೇಲೆ ಅಪರಿಚಿತರಿಂದ ಹಲ್ಲೆ! ಮೊಬೈಲ್ ಕಸಿದು ಪರಾರಿ

ತುಮಕೂರು ಸಿದ್ದಗಂಗಾ ಮಠದಲ್ಲಿ ಐತಿಹಾಸಿಕ ದನಗಳ ಜಾತ್ರೆ; ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿ ರಾಸುಗಳ ಖರೀದಿ

Published On - 9:17 pm, Tue, 29 March 22

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ