Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಗ್ರಂ’ನಿಂದ ‘ಸಲಾರ್’ ಚಿತ್ರದವರೆಗೆ: ಪ್ರಶಾಂತ್ ನೀಲ್​ ಸಿನಿಮಾಗೆ ಈ ಹೀರೋ ಪಾತ್ರಗಳೇ ಸ್ಫೂರ್ತಿ

ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಈ ಚಿತ್ರದ ಪಾತ್ರದ ಬಗ್ಗೆ ಪ್ರಶಾಂತ್ ನೀಲ್ ಮಾತನಾಡಿದ್ದಾರೆ.

‘ಉಗ್ರಂ’ನಿಂದ ‘ಸಲಾರ್’ ಚಿತ್ರದವರೆಗೆ: ಪ್ರಶಾಂತ್ ನೀಲ್​ ಸಿನಿಮಾಗೆ ಈ ಹೀರೋ ಪಾತ್ರಗಳೇ ಸ್ಫೂರ್ತಿ
‘ಉಗ್ರಂ’ನಿಂದ ‘ಸಲಾರ್’ ಚಿತ್ರದವರೆಗೆ: ಪ್ರಶಾಂತ್ ನೀಲ್​ ಸಿನಿಮಾಗೆ ಈ ಹೀರೋ ಪಾತ್ರಗಳೇ ಸ್ಫೂರ್ತಿ
Follow us
ರಾಜೇಶ್ ದುಗ್ಗುಮನೆ
|

Updated on:Nov 30, 2023 | 7:59 AM

ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಅವರ ಸಿನಿಮಾಗಳಲ್ಲಿ ಹೀರೋ, ವಿಲನ್ ಪಾತ್ರಗಳಿಗೆ ಸಾಕಷ್ಟು ಪ್ರಾಮುಖ್ಯತೆ ಇರುತ್ತದೆ. ಅವರ ಎಲ್ಲಾ ಸಿನಿಮಾಗಳಲ್ಲಿ ಹೀರೋಗೆ ಒಂದು ವಿಲನ್ ಶೇಡ್​ ಇರುತ್ತದೆ. ಹಾಗಂತ ಅದನ್ನು ವಿಲನ್ ಪಾತ್ರ ಎಂದು ಕರೆಯೋಕೆ ಸಾಧ್ಯವೇ ಇಲ್ಲ. ಈಗ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಈ ಚಿತ್ರದ ಟ್ರೇಲರ್ ಡಿಸೆಂಬರ್ 1ರಂದು ಬಿಡುಗಡೆ ಆಗುತ್ತಿದೆ. ಈ ಚಿತ್ರದ ಬಗ್ಗೆ ಪ್ರಶಾಂತ್ ನೀಲ್ ಮಾತನಾಡಿದ್ದಾರೆ. ತಮ್ಮ ಎಲ್ಲಾ ಸಿನಿಮಾಗಳಿಗೆ ಅಮಿತಾಭ್ ಬಚ್ಚನ್ ಪಾತ್ರಗಳೇ ಸ್ಫೂರ್ತಿ ಎಂದಿದ್ದಾರೆ.

‘ಉಗ್ರಂ’ ಸಿನಿಮಾದಲ್ಲಿ ಕಥಾ ನಾಯಕ ಕೊಲೆ, ಸುಲಿಗೆ ಮಾಡುತ್ತಾನೆ. ‘ಕೆಜಿಎಫ್’, ‘ಕೆಜಿಎಫ್ 2’ ಚಿತ್ರದಲ್ಲಿ ಹೀರೋ ಗ್ಯಾಂಗ್​ಸ್ಟರ್. ಈಗ ‘ಸಲಾರ್’ ಚಿತ್ರದಲ್ಲೂ ಕಥಾ ನಾಯಕನಿಗೆ ಅದೇ ರೀತಿಯ ಪಾತ್ರ ಇರೋದು ಬಹುತೇಕ ಖಚಿತ ಎನ್ನಲಾಗುತ್ತಿದೆ. ಪ್ರಶಾಂತ್ ನೀಲ್​ ಈ ರೀತಿಯ ಪಾತ್ರಗಳನ್ನು ಸೃಷ್ಟಿ ಮಾಡಲು ಅಮಿತಾಭ್ ಅವರು ಮಾಡಿದ ಸಿನಿಮಾಗಳ ಪ್ರಭಾವ ಸಾಕಷ್ಟಿದೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ನನ್ನ ಎಲ್ಲಾ ಸಿನಿಮಾಗಳಿಗೆ ಅಮಿತಾಭ್​ ಬಚ್ಚನ್ ಅವರು ಸ್ಫೂರ್ತಿ. ಅವರು ಹಲವು ಸಿನಿಮಾಗಳಲ್ಲಿ ಹೀರೋ ಪಾತ್ರ ಮಾಡಿದ್ದಾರೆ. ಅದರಲ್ಲಿ ಅವರು ವಿಲನ್​ ಕೂಡ ಹೌದು. ಅವರ ಕಾಲಘಟ್ಟದಲ್ಲಿ ಈ ರೀತಿಯ ಸಿನಿಮಾಗಳು ಅಲ್ಲೊಂದು ಇಲ್ಲೊಂದು ಬಂದಿವೆ. ಈ ರೀತಿಯ ಗ್ರೇ ಶೇಡ್​ ಪಾತ್ರಗಳನ್ನು ಇನ್ಯಾರೂ ಮಾಡಿಲ್ಲ’ ಎಂದಿದ್ದಾರೆ ಪ್ರಶಾಂತ್ ನೀಲ್.

‘ವಿಲನ್ ಹೀರೋ ಆಗಿ ಕಾಣುವಂತೆ ಮಾಡುತ್ತಾರೆ. ನನ್ನ ಸಿನಿಮಾಗಳಲ್ಲೂ ಅದನ್ನು ಪ್ರಯತ್ನಿಸಿದೆ. ನಾನು ಸೃಷ್ಟಿಸುವ ಪಾತ್ರಗಳು ಸಾಕಷ್ಟು ನೆಗೆಟಿವ್ ಆಗಿ ಕಾಣುವಂತೆ ನಾನು ಮಾಡುತ್ತೇನೆ. ನನ್ನ ಸಿನಿಮಾಗಳಲ್ಲಿ ಹೀರೋಗಳೇ ದೊಡ್ಡ ವಿಲನ್​ಗಳು’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಡಂಕಿ’ ಜೊತೆ ‘ಸಲಾರ್​’ ಕ್ಲ್ಯಾಷ್: ಪ್ರಶಾಂತ್ ನೀಲ್ ಹೇಳಿದ್ದು ಹೀಗೆ

1990ರಲ್ಲಿ ಬಂದು ಅಮಿತಾಭ್ ನಟನೆಯ ‘ಅಗ್ನೀಪಥ್’ ರಿಲೀಸ್ ಆಗಿ ಗೆದ್ದಿತ್ತು. ಪ್ರಶಾಂತ್ ನೀಲ್ ಅವರ ಫೇವರಿಟ್ ಸಿನಿಮಾ ಇದು. ಇದು ರಿವೇಂಜ್ ಕಥೆಯನ್ನು ಹೊಂದಿತ್ತು. ಮುಕುಲ್ ಆನಂದ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ‘ನಾನು ಸಾಯುವುದಕ್ಕೂ ಮೊದಲು ಅಮಿತಾಭ್ ಬಚ್ಚನ್ ಜೊತೆ ಸಿನಿಮಾ ಮಾಡಬೇಕು. ಇದು ನನ್ನ ಜೀವನದ ದೊಡ್ಡ ಕನಸು. ನನ್ನ ಸಿನಿಮಾದಲ್ಲಿ ಅತಿ ದೊಡ್ಡ ವಿಲನ್ ಆಗಿ ಅವರನ್ನು ಮಾಡಬೇಕು. ಅವರು ಒಪ್ಪಿದರೆ ನಾನು ಸಿನಿಮಾ ಮಾಡುತ್ತೇನೆ. ಅದು ನನಗೆ ಸಿಗುವ ದೊಡ್ಡ ಗೌರವ’ ಎಂದಿದ್ದಾರೆ ಪ್ರಶಾಂತ್ ನೀಲ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:13 am, Thu, 30 November 23

ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ