AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಅತಿಥಿ? ಬಾಲಿವುಡ್ ನಟನಿಗೆ ಆಹ್ವಾನ

ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿ ಇತ್ತೀಚೆಗೆ ಅಮಿತಾಭ್ ಬಚ್ಚನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅಮಿತಾಭ್ ಖುಷಿಯಿಂದ ಆಮಂತ್ರಣ ಸ್ವೀಕಾರ ಮಾಡಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಅವರು ಈ ಜಾತ್ರೆಗೆ ಬರೋ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ.

ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಅತಿಥಿ? ಬಾಲಿವುಡ್ ನಟನಿಗೆ ಆಹ್ವಾನ
ಅಮಿತಾಭ್​ಗೆ ಆಹ್ವಾನ ನೀಡಿದ ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿ
ಸಂಜಯ್ಯಾ ಚಿಕ್ಕಮಠ
| Edited By: |

Updated on:Nov 16, 2024 | 11:32 AM

Share

ಪ್ರಸಿದ್ಧ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುತ್ತದೆ. ಪ್ರತಿ ವರ್ಷ ಇದಕ್ಕೆ ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಈಬಾರಿಯ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಆಗಮಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿ ಅಮಿತಾಭ್​ಗೆ ಆಹ್ವಾನ ಪತ್ರ ನೀಡಿದೆ.

ಗವಿಸಿದ್ದೇಶ್ವರ ಮಠದ ಆಡಳಿತ ಮಂಡಳಿಯವರು ಇತ್ತೀಚೆಗೆ ಅಮಿತಾಭ್​ ಬಚ್ಚನ್ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಅಮಿತಾಭ್ ಖುಷಿಯಿಂದ ಆಮಂತ್ರಣ ಸ್ವೀಕಾರ ಮಾಡಿದ್ದು, ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ, ಅವರು ಈ ಜಾತ್ರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಗವಿಸಿದ್ದೇಶ್ವರ ಮಠದ ಜಾತ್ರೆ ದಕ್ಷಿಣ ಭಾರತದ ಕುಂಭ ಮೇಳ ಎಂದೆ ಖ್ಯಾತಿ ಪಡೆದಿದೆ. ಜನವರಿ 15ರಂದು ಈ ಜಾತ್ರೆ ನಡೆಯಲಿದೆ. ಒಂದೊಮ್ಮೆ ಅಮಿತಾಭ್ ಬಚ್ಚನ್ ಜಾತ್ರೆಗೆ ಆಗಮಿಸಿದರೆ ಇದರ ಮೆರಗು ಮತ್ತಷ್ಟು ಹೆಚ್ಚಲಿದೆ. ರಾಷ್ಟ್ರಮಟ್ಟದಲ್ಲಿ ಇದು ಸುದ್ದಿ ಆಗಲಿದೆ.

ಇದನ್ನೂ ಓದಿ: ವಿಚ್ಛೇದನ ಪ್ರಕರಣ: ಜಡ್ಜ್​ ಸಲಹೆಯಂತೆ ಕೊಪ್ಪಳ ಗವಿಮಠಕ್ಕೆ ಭೇಟಿ ನೀಡಿದ ದಂಪತಿ, ಮುಂದೇನಾಯ್ತು?

ಪ್ರತಿ ವರ್ಷವೂ ಗವಿಸಿದ್ದೇಶ್ವರ ಮಠದಲ್ಲಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನೆರವೇರುತ್ತದೆ. ಲಕ್ಷಾಂತರ ಮಂದಿ ಜಾತ್ರೆಗೆ ಆಗಮಿಸುತ್ತಾರೆ. ಬರುವ ಎಲ್ಲಾ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಇರುತ್ತದೆ. ಅನ್ನ ದಾಸೋಹವನ್ನು ಮಠದ ವತಿಯಿಂದಲೇ ನೆರವೇರಿಸಲಾಗುತ್ತದೆ. ಇಷ್ಟು ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದರೂ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಅನ್ನೋದು ವಿಶೇಷ.

ಅಮಿತಾಭ್ ಬಚ್ಚನ್ ಸಿನಿಮಾ ವಿಚಾರಕ್ಕೆ ಬರೋದಾದರೆ ಅವರು ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅಶ್ವತ್ಥಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ. ಇದರ ಜೊತೆಗೆ  ಅವರು ‘ಕೌನ್ ಬನೇಗಾ ಕರೋಡ್ಪತಿ’ಯ 16ನೇ ಸೀಸನ್ ನಡೆಸಿಕೊಡುತ್ತಾ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:13 am, Sat, 16 November 24

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ