AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

Amitabh Bachchan | Vikrant Rona: ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾದ ಟ್ರೇಲರ್​ ಅನ್ನು ಅಮಿತಾಭ್​ ಬಚ್ಚನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ.

Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ
ಕಿಚ್ಚ ಸುದೀಪ್, ಜಾಕ್ವೆಲಿನ್ ಫರ್ನಾಂಡಿಸ್, ಅಮಿತಾಭ್ ಬಚ್ಚನ್
TV9 Web
| Edited By: |

Updated on:Jun 27, 2022 | 1:11 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಿಲ್ಲ. ಅನೇಕ ವರ್ಷಗಳ ಹಿಂದೆಯೇ ಅವರು ಪರಭಾಷೆಯಲ್ಲಿ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದರು. ಈಗ ಅವರು ನಟಿಸಿರುವ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಏಕಕಾಲಕ್ಕೆ ಕನ್ನಡದ ಜೊತೆ ಬೇರೆ ಬೇರೆ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗಿನಲ್ಲಿ ಜುಲೈ 28ರಂದು ರಿಲೀಸ್​ ಆಗಲಿರುವ ಈ ಸಿನಿಮಾಗೆ ಬಾಲಿವುಡ್​ ದಿಗ್ಗಜ ಅಮಿತಾಭ್​ ಬಚ್ಚನ್​ (Amitabh Bachchan) ಕೂಡ ಸಾಥ್​ ನೀಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾದ ಟ್ರೇಲರ್​ ಹಂಚಿಕೊಳ್ಳುವ ಮೂಲಕ ‘ಬಿಗ್​ ಬಿಗ್​’ ಬೆಂಬಲ ನೀಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ.

ಇದನ್ನೂ ಓದಿ
Image
Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ
Image
Vikrant Rona: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್
Image
‘ವಿಕ್ರಾಂತ್​ ರೋಣ’ ರಿಲೀಸ್​ ಸಮಯದಲ್ಲಿ ಸುದೀಪ್​ಗೆ ಸ್ಟ್ರೆಸ್​ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

ಈ ಹಿಂದೆ ‘ರಣ್​’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಮತ್ತು ಕಿಚ್ಚ ಸುದೀಪ್​ ಅವರು ಜೊತೆಯಾಗಿ ನಟಿಸಿದ್ದರು. ಆ ದಿನಗಳಿಂದಲೂ ಅವರ ನಡುವೆ ಬಾಂಧವ್ಯ ಇದೆ. ಈಗ ಕಿಚ್ಚನ ಸಿನಿಮಾ ಬಗ್ಗೆ ಅವರು ಟ್ವೀಟ್​ ಮಾಡಿರುವುದರಿಂದ ಹಿಂದಿ ಪ್ರೇಕ್ಷಕರ ವಲಯದಲ್ಲಿ ಈ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಬಹಳ ಅದ್ದೂರಿಯಾಗಿ ‘ವಿಕ್ರಾಂತ್​ ರೋಣ’ ಬಿಡುಗಡೆಗೆ ಪ್ಲ್ಯಾನ್​ ಮಾಡಲಾಗಿದೆ.

ಈ ಸಿನಿಮಾದಲ್ಲಿ ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ‘ರಾರಾ ರಕ್ಕಮ್ಮ..’ ಹಾಡಿನ ಜೊತೆಗೆ ಒಂದು ದೃಶ್ಯದಲ್ಲೂ ಅವರು ಅಭಿನಯಿಸಿದ್ದಾರೆ ಎಂಬುದು ವಿಶೇಷ. ಈ ಹಾಡು ಈಗಾಗಲೇ ಧೂಳೆಬ್ಬಿಸಿದೆ. ಕೆಲವೇ ದಿನಗಳ ಹಿಂದೆ ಬಾಲಿವುಡ್​ ನಟ ರಿತೇಶ್​ ದೇಶಮುಖ್ ಅವರು ಈ ಗೀತೆಗೆ ರೀಲ್ಸ್​ ಮಾಡಿದ್ದರು. ಆ ಮೂಲಕ ಅವರು ತಮ್ಮ ಗೆಳೆಯ ಸುದೀಪ್​ಗೆ ವಿಶ್​ ಮಾಡಿದ್ದರು. ಈ ಎಲ್ಲ ಕಾರಣದಿಂದಾಗಿ ರಿಲೀಸ್​ಗೂ ಮುನ್ನವೇ ‘ವಿಕ್ರಾಂತ್​ ರೋಣ’ ಸಿನಿಮಾ ಬಾಲಿವುಡ್​ ಮಂದಿಯ ಗಮನ ಸೆಳೆದಿದೆ.

ನಿರ್ಮಾಪಕ ಜಾಕ್​ ಮಂಜು ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರಿಗೆ ಅಲಂಕಾರ್​ ಪಾಂಡಿಯನ್​ ಸಾಥ್​ ನೀಡಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ. 3ಡಿ ಟ್ರೇಲರ್​ ನೋಡಿದ ಅನೇಕ ಸೆಲೆಬ್ರಿಟಿಗಳು ‘ವಿಕ್ರಾಂತ್​ ರೋಣ’ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಅಭಿಮಾನಿಗಳು ಈ ಸಿನಿಮಾವನ್ನು ನೋಡಲು ಕಾತರದಿಂದ ಕಾದಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ

Published On - 12:46 pm, Mon, 27 June 22

Follow Us
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು
ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು