AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ

Amitabh Bachchan | Vikrant Rona: ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಸಿನಿಮಾದ ಟ್ರೇಲರ್​ ಅನ್ನು ಅಮಿತಾಭ್​ ಬಚ್ಚನ್​ ಅವರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ.

Kichcha Sudeep: ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಅಮಿತಾಭ್​ ಬಚ್ಚನ್​ ಸಾಥ್​; ಕಿಚ್ಚ ಸುದೀಪ್​ ಸಿನಿಮಾಗೆ ‘ಬಿಗ್​ ಬಿ’ ಬೆಂಬಲ
ಕಿಚ್ಚ ಸುದೀಪ್, ಜಾಕ್ವೆಲಿನ್ ಫರ್ನಾಂಡಿಸ್, ಅಮಿತಾಭ್ ಬಚ್ಚನ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 27, 2022 | 1:11 PM

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಿಲ್ಲ. ಅನೇಕ ವರ್ಷಗಳ ಹಿಂದೆಯೇ ಅವರು ಪರಭಾಷೆಯಲ್ಲಿ ಸಿನಿಮಾ ಮಾಡಿ ಸೈ ಎನಿಸಿಕೊಂಡಿದ್ದರು. ಈಗ ಅವರು ನಟಿಸಿರುವ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾ ಏಕಕಾಲಕ್ಕೆ ಕನ್ನಡದ ಜೊತೆ ಬೇರೆ ಬೇರೆ ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗಿನಲ್ಲಿ ಜುಲೈ 28ರಂದು ರಿಲೀಸ್​ ಆಗಲಿರುವ ಈ ಸಿನಿಮಾಗೆ ಬಾಲಿವುಡ್​ ದಿಗ್ಗಜ ಅಮಿತಾಭ್​ ಬಚ್ಚನ್​ (Amitabh Bachchan) ಕೂಡ ಸಾಥ್​ ನೀಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ‘ವಿಕ್ರಾಂತ್​ ರೋಣ’ ಸಿನಿಮಾದ ಟ್ರೇಲರ್​ ಹಂಚಿಕೊಳ್ಳುವ ಮೂಲಕ ‘ಬಿಗ್​ ಬಿಗ್​’ ಬೆಂಬಲ ನೀಡಿದ್ದಾರೆ. ಇದರಿಂದಾಗಿ ಚಿತ್ರತಂಡದ ಬಲ ಹೆಚ್ಚಿದಂತಾಗಿದೆ.

ಇದನ್ನೂ ಓದಿ
Image
Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ
Image
Vikrant Rona: ಮುಂಬೈನಲ್ಲಿ ಸುದೀಪ್​ ಜತೆ ರಕ್ಕಮ್ಮ ಜಾಕ್ವೆಲಿನ್​ ಫರ್ನಾಂಡಿಸ್​ ಮಿರಿಮಿರಿ ಮಿಂಚಿಂಗ್
Image
‘ವಿಕ್ರಾಂತ್​ ರೋಣ’ ರಿಲೀಸ್​ ಸಮಯದಲ್ಲಿ ಸುದೀಪ್​ಗೆ ಸ್ಟ್ರೆಸ್​ ಇದೆಯಾ? ನೇರ ಉತ್ತರ ನೀಡಿದ ಕಿಚ್ಚ
Image
Vikrant Rona: ಕಿಚ್ಚನ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕಿದ ಬಾಲಿವುಡ್​ ಸ್ಟಾರ್​ ನಟ ರಿತೇಶ್​ ದೇಶಮುಖ್​

ಈ ಹಿಂದೆ ‘ರಣ್​’ ಸಿನಿಮಾದಲ್ಲಿ ಅಮಿತಾಭ್​ ಬಚ್ಚನ್​ ಮತ್ತು ಕಿಚ್ಚ ಸುದೀಪ್​ ಅವರು ಜೊತೆಯಾಗಿ ನಟಿಸಿದ್ದರು. ಆ ದಿನಗಳಿಂದಲೂ ಅವರ ನಡುವೆ ಬಾಂಧವ್ಯ ಇದೆ. ಈಗ ಕಿಚ್ಚನ ಸಿನಿಮಾ ಬಗ್ಗೆ ಅವರು ಟ್ವೀಟ್​ ಮಾಡಿರುವುದರಿಂದ ಹಿಂದಿ ಪ್ರೇಕ್ಷಕರ ವಲಯದಲ್ಲಿ ಈ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. ಬಹಳ ಅದ್ದೂರಿಯಾಗಿ ‘ವಿಕ್ರಾಂತ್​ ರೋಣ’ ಬಿಡುಗಡೆಗೆ ಪ್ಲ್ಯಾನ್​ ಮಾಡಲಾಗಿದೆ.

ಈ ಸಿನಿಮಾದಲ್ಲಿ ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಕೂಡ ನಟಿಸಿದ್ದಾರೆ. ‘ರಾರಾ ರಕ್ಕಮ್ಮ..’ ಹಾಡಿನ ಜೊತೆಗೆ ಒಂದು ದೃಶ್ಯದಲ್ಲೂ ಅವರು ಅಭಿನಯಿಸಿದ್ದಾರೆ ಎಂಬುದು ವಿಶೇಷ. ಈ ಹಾಡು ಈಗಾಗಲೇ ಧೂಳೆಬ್ಬಿಸಿದೆ. ಕೆಲವೇ ದಿನಗಳ ಹಿಂದೆ ಬಾಲಿವುಡ್​ ನಟ ರಿತೇಶ್​ ದೇಶಮುಖ್ ಅವರು ಈ ಗೀತೆಗೆ ರೀಲ್ಸ್​ ಮಾಡಿದ್ದರು. ಆ ಮೂಲಕ ಅವರು ತಮ್ಮ ಗೆಳೆಯ ಸುದೀಪ್​ಗೆ ವಿಶ್​ ಮಾಡಿದ್ದರು. ಈ ಎಲ್ಲ ಕಾರಣದಿಂದಾಗಿ ರಿಲೀಸ್​ಗೂ ಮುನ್ನವೇ ‘ವಿಕ್ರಾಂತ್​ ರೋಣ’ ಸಿನಿಮಾ ಬಾಲಿವುಡ್​ ಮಂದಿಯ ಗಮನ ಸೆಳೆದಿದೆ.

ನಿರ್ಮಾಪಕ ಜಾಕ್​ ಮಂಜು ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅವರಿಗೆ ಅಲಂಕಾರ್​ ಪಾಂಡಿಯನ್​ ಸಾಥ್​ ನೀಡಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದಲ್ಲಿ ಈ ಚಿತ್ರ ಮೂಡಿಬಂದಿದೆ. 3ಡಿ ಟ್ರೇಲರ್​ ನೋಡಿದ ಅನೇಕ ಸೆಲೆಬ್ರಿಟಿಗಳು ‘ವಿಕ್ರಾಂತ್​ ರೋಣ’ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದ್ದಾರೆ. ಅಭಿಮಾನಿಗಳು ಈ ಸಿನಿಮಾವನ್ನು ನೋಡಲು ಕಾತರದಿಂದ ಕಾದಿದ್ದಾರೆ. ನಿರೂಪ್​ ಭಂಡಾರಿ, ನೀತಾ ಅಶೋಕ್​ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Sudeep: ‘ನಾನು-ಶಿವಣ್ಣ ಕೆಲವು ಸಮಯ ಮಾತಾಡ್ತಾ ಇರಲಿಲ್ಲ, ಕಾರಣ ಹುಡುಕ್ತಾ ಹೋದ್ರೆ..’; ಸುದೀಪ್​ ನೇರ ಮಾತು

Kichcha Sudeep: ಕೇರಳದಲ್ಲಿ ‘ವಿಕ್ರಾಂತ್​ ರೋಣ’: ಕೊಚ್ಚಿಗೆ ತೆರಳಿದ ಕಿಚ್ಚ ಸುದೀಪ್​ಗೆ ಅಭಿಮಾನಿಗಳ ಆತ್ಮೀಯ ಸ್ವಾಗತ

Published On - 12:46 pm, Mon, 27 June 22

ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ಪ್ರಧಾನಿ ಮೋದಿ ಉಗ್ರರಿಗೆ ತಕ್ಕ ಪಾಠ ಕಲಿಸದೆ ಬಿಡೋದಿಲ್ಲ: ರಾಜೇಶ್ವರಿ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ