Amitabh Bachchan: ಪುನೀತ್​​ ಬಗ್ಗೆ ಅಮಿತಾಭ್​ ಬಚ್ಚನ್​ ಮಾತು; ದಿಗ್ಗಜ ನಟನಿಗೂ ಕಾಡುತ್ತಿದೆ ಅಪ್ಪು ನಗು

Puneeth Rajkumar | Gandhada Gudi: ‘ಪುನೀತ್​ ರಾಜ್​ಕುಮಾರ್​ ಅವರನ್ನು ನಾವೆಲ್ಲರೂ ಅಪ್ಪು ಅಂತ ಪ್ರೀತಿಯಿಂದ ಕರೆಯುತ್ತಿದ್ವಿ. ಅವರ ಬಗ್ಗೆ ಭೂತಕಾಲದಲ್ಲಿ ಮಾತನಾಡಲು ಕಷ್ಟ ಆಗುತ್ತದೆ’ ಎಂದು ಬಿಗ್​ ಬಿ ಮಾತು ಆರಂಭಿಸಿದ್ದಾರೆ.

Amitabh Bachchan: ಪುನೀತ್​​ ಬಗ್ಗೆ ಅಮಿತಾಭ್​ ಬಚ್ಚನ್​ ಮಾತು; ದಿಗ್ಗಜ ನಟನಿಗೂ ಕಾಡುತ್ತಿದೆ ಅಪ್ಪು ನಗು
ಅಮಿತಾಭ್​ ಬಚ್ಚನ್​, ಪುನೀತ್​ ರಾಜ್​ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Nov 10, 2022 | 2:49 PM

ನಟ ಪುನೀತ್​ ರಾಜ್​ಕುಮಾರ್​ (Puneeth Rajkumar) ನಮ್ಮೊಂದಿಗೆ ಇಲ್ಲ ಎಂಬ ನೋವು ಎಂದಿಗೂ ಮರೆ ಆಗುವಂಥದ್ದಲ್ಲ. ಅಪ್ಪು ಇಲ್ಲ ಎಂಬ ಸತ್ಯವನ್ನು ಅಭಿಮಾನಿಗಳಿಗೆ, ಆಪ್ತರಿಗೆ, ಕುಟುಂಬದವರಿಗೆ ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಿನಿಮಾಗಳ ಮೂಲಕ ‘ಪವರ್​ ಸ್ಟಾರ್​’ ಎಂದಿಗೂ ಶಾಶ್ವತವಾಗಿ ಇರುತ್ತಾರೆ. ಕನ್ನಡ ಚಿತ್ರರಂಗ ಮಾತ್ರವಲ್ಲದೇ ಪರಭಾಷೆಯ ಅನೇಕ ಸೆಲೆಬ್ರಿಟಿಗಳ ಜೊತೆಗೂ ಪುನೀತ್​ ರಾಜ್​ಕುಮಾರ್​ ಸ್ನೇಹ ಹೊಂದಿದ್ದರು. ಅವರನ್ನು ಕಂಡರೆ ಎಲ್ಲರಿಗೂ ಅಚ್ಚುಮೆಚ್ಚು. ಅಪ್ಪು ಅವರ ನಗುಮುಖವನ್ನು ಇಷ್ಟಪಡದವರೇ ಇಲ್ಲ. ದಿಗ್ಗಜ ನಟ ಅಮಿತಾಭ್​ ಬಚ್ಚನ್​ (Amitabh Bachchan) ಕೂಡ ಪುನೀತ್​ ರಾಜ್​ಕುಮಾರ್​ ಸ್ಮೈಲ್​ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋವನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪುನೀತ್​ ರಾಜ್​ಕುಮಾರ್​ ಅವರು ಬಹಳ ಪ್ರೀತಿಯಿಂದ ಮಾಡಿದ ಸಾಕ್ಷ್ಯಚಿತ್ರ ‘ಗಂಧದ ಗುಡಿ’. ಈ ಡಾಕ್ಯುಮೆಂಟರಿಯ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನ ಅವರು ನಿಧನರಾಗಿದ್ದು ನೋವಿನ ಸಂಗತಿ. ಈ ವರ್ಷ ಅಕ್ಟೋಬರ್​ 28ರಂದು ‘ಗಂಧದ ಗುಡಿ’ ರಿಲೀಸ್​ ಮಾಡಲಾಯಿತು. ಅದಕ್ಕೂ ಮುನ್ನ ಅದ್ದೂರಿಯಾಗಿ ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಯಿತು. ಆ ಕಾರ್ಯಕ್ರಮಕ್ಕೆ ಅಮಿತಾಭ್​ ಬಚ್ಚನ್​ ಬರಬೇಕಿತ್ತು. ಕಾರಣಾಂತರಗಳಿಂದ ಬರಲು ಸಾಧ್ಯವಾಗಲಿಲ್ಲ. ಮುಂಬೈನಿಂದಲೇ ಅವರು ಒಂದು ವಿಡಿಯೋ ಸಂದೇಶ ಕಳಿಸಿದ್ದರು. ಆ ವಿಡಿಯೋ ಈಗ ವೈರಲ್​ ಆಗಿದೆ.

ಇದನ್ನೂ ಓದಿ
Image
Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ

ಅಪ್ಪು ಬಗ್ಗೆ ಅಮಿತಾಭ್​ ಬಚ್ಚನ್​ ಹೇಳಿದ್ದೇನು?

‘ಪುನೀತ್​ ರಾಜ್​ಕುಮಾರ್​ ಅವರನ್ನು ನಾವೆಲ್ಲರೂ ಅಪ್ಪು ಅಂತ ಪ್ರೀತಿಯಿಂದ ಕರೆಯುತ್ತಿದ್ವಿ. ಅವರ ಬಗ್ಗೆ ಭೂತಕಾಲದಲ್ಲಿ ಮಾತನಾಡಲು ಕಷ್ಟ ಆಗುತ್ತದೆ’ ಎಂದು ಬಿಗ್​ ಬಿ ಮಾತು ಆರಂಭಿಸಿದ್ದಾರೆ. ‘ಅವರು ಚಿಕ್ಕ ಬಾಲಕನಾಗಿದ್ದಾಗ ನಾನು ಮೊದಲ ಬಾರಿ ಭೇಟಿ ಮಾಡಿದೆ. ಯಾವಾಗ ಭೇಟಿ ಆದರೂ ಕೂಡ ಅವರ ಮುಖದಲ್ಲಿ ಸುಂದರವಾದ ನಗು ಇರುತ್ತಿತ್ತು. ನಮ್ಮಲ್ಲರಿಗೂ ಅವರು ಹತ್ತಿರವಾಗಲು ಆ ನಗುವೇ ಕಾರಣ ಅಂತ ನಾನು ನಂಬಿದ್ದೇನೆ’ ಎಂದಿದ್ದಾರೆ ಅಮಿತಾಭ್​ ಬಚ್ಚನ್​.

‘ಗಂಧದ ಗುಡಿ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಟಿಸಿಲ್ಲ. ಅವರು ತಾವಾಗಿಯೇ ಕಾಣಿಸಿಕೊಂಡಿದ್ದಾರೆ. ಸಮೃದ್ಧವಾದ ಕರ್ನಾಟಕದ ಕಾಡನ್ನು ಎಲ್ಲರಿಗೂ ಪರಿಚಯಿಸಿದ್ದಾರೆ. ಅಪ್ಪು ಅವರ ಮ್ಯಾಜಿಕಲ್​ ಜರ್ನಿಯಲ್ಲಿ ಎಲ್ಲರೂ ಭಾಗವಹಿಸಿ. ಪರಿಸರದ ಜೊತೆ ಸಾಮರಸ್ಯದಿಂದ ಬದುಕುವ ಬಗ್ಗೆ ಪುನೀತ್​ ಅವರು ಈ ಸಾಕ್ಷ್ಯಚಿತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ. ನಮ್ಮ ಮಕ್ಕಳಿಗಾಗಿ ಇರುವ ಚಿತ್ರ ಇದು. ನಾವೆಲ್ಲರೂ ನಮ್ಮ ಅರಣ್ಯ ಸಂಪತ್ತಿನ ಬಗ್ಗೆ ಹೆಮ್ಮೆ ಪಡುವಂತಹ ಚಿತ್ರ. ಗಂಧದ ಗುಡಿಗೆ ಯಶಸ್ಸು ಸಿಗಲಿ’ ಎಂದು ಅಮಿತಾಭ್​ ಬಚ್ಚನ್​ ಹೇಳಿದ್ದಾರೆ.

ಈ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಳ್ಳುವ ಮೂಲಕ ಅಮಿತಾಭ್​ ಬಚ್ಚನ್​ ಅವರಿಗೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಧನ್ಯವಾದ ಸಲ್ಲಿಸಿದ್ದಾರೆ. ‘ಅಮಿತಾಭ್ ಬಚ್ಚನ್ ಅವರೇ, ನಿಮ್ಮ ಈ ಭಾವನಾತ್ಮಕ ಮಾತುಗಳಿಗೆ ಮತ್ತು ವಿಶೇಷ ಸಂದೇಶಕ್ಕೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು’ ಎಂದು ಅಶ್ವಿನಿ ಪೋಸ್ಟ್​ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ