Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಇನ್ನೂ ಬಾಕಿ ಇದೆ ಪುನೀತ್​ ಕನಸಿನ ‘ಗಂಧದ ಗುಡಿ’ ಶೂಟಿಂಗ್​; ಪೂರ್ಣಗೊಳಿಸೋರು ಯಾರು?

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿತ್ತು.

 ಇನ್ನೂ ಬಾಕಿ ಇದೆ ಪುನೀತ್​ ಕನಸಿನ ‘ಗಂಧದ ಗುಡಿ’ ಶೂಟಿಂಗ್​; ಪೂರ್ಣಗೊಳಿಸೋರು ಯಾರು?
ಗಂಧದಗುಡಿ ಟೀಸರ್​, ಪುನೀತ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Dec 16, 2021 | 1:30 PM

‘ಗಂಧದ ಗುಡಿ’ ಡಾಕ್ಯುಮೆಂಟರಿ (Gandhada Gudi Documentary) ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿದೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಹೆಚ್ಚು  ಇಷ್ಟಪಟ್ಟು ಮಾಡಿರುವ ಈ ಸಾಕ್ಷ್ಯಚಿತ್ರ ಕರ್ನಾಟಕದ ವನ್ಯ ಸಂಪತ್ತು, ಪ್ರಕೃತಿ ವೈಭವವನ್ನು ಎತ್ತಿ ತೋರಿಸುತ್ತಿದೆ. ಇತ್ತೀಚೆಗೆ ಇದರ ಟೈಟಲ್​ ಟೀಸರ್ (Gandhada Gudi Tittle Teaser)​ ರಿಲೀಸ್​ ಆಗಿದ್ದು, ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪುನೀತ್​ ಕಂಡ ಅದ್ಭುತ ಕನಸಿನ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ‘ಗಂಧದ ಗುಡಿ’ ಶೂಟಿಂಗ್​ ಇನ್ನೂ ಬಾಕಿ ಉಳಿದುಕೊಂಡಿದೆ. ಪುನೀತ್​ ಅವರು ಇದನ್ನು ಪೂರ್ಣಗೊಳಿಸಬೇಕಿತ್ತು. ಅದಕ್ಕೂ ಮೊದಲೇ ಅವರು ನಿಧನ ಹೊಂದಿದ್ದರು. ಹಾಗಾದರೆ, ಇದನ್ನು ಈಗ ಪೂರ್ಣಗೊಳಿಸೋರು ಯಾರು? ಆ ಪ್ರಶ್ನೆಗೂ ಉತ್ತರವಿದೆ.

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿತ್ತು. ಇದಕ್ಕೆ ‘ಗಂಧದಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಟೀಸರ್ ಇತ್ತೀಚೆಗೆ ರಿಲೀಸ್​ ಆಗಿ ಮೆಚ್ಚುಗೆ ಗಳಿಸಿಕೊಂಡಿತ್ತು. ಈಗ ಬಾಕಿ ಇರುವ ಶೂಟಿಂಗ್​ಅನ್ನು ಅಮೋಘ ವರ್ಷ ಅವರು ಪುನೀತ್​ ಇಲ್ಲದೆ ಶೂಟ್​ ಪೂರ್ಣಗೊಳಿಸಬೇಕಿದೆ.

ಮೂಲಗಳ ಪ್ರಕಾರ ‘ಗಂಧದ ಗುಡಿ’ಯ 7-8 ದಿನಗಳ ಶೂಟಿಂಗ್​ ಬಾಕಿ ಇವೆ. ಪುನೀತ್​ ಅವರು ಇದಕ್ಕಾಗಿ ಡೇಟ್​ ಕೂಡ ನೀಡಿದ್ದರು. ಈ ಮಧ್ಯೆ ಅವರು ಅಕಾಲಿಕ ಮರಣ ಹೊಂದಿದ್ದರು. ಇದು ಸಾಕಷ್ಟು ಆಘಾತ ತಂದಿದೆ. ಕನ್ನಡ ಚಿತ್ರರಂಗಕ್ಕೆ ಇದರಿಂದ ಇನ್ನೂ ಹೊರಬರೋಕೆ ಆಗುತ್ತಿಲ್ಲ. ಈಗ ಅಮೋಘ ವರ್ಷ ಅವರು ಬಾಕಿ ಇರುವ ಶೂಟಿಂಗ್​ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕದ ದಟ್ಟ ಕಾನನದ ಒಳಗೆ ಇದನ್ನು ಚಿತ್ರೀಕರಿಸಲಾಗಿದೆ. ಪ್ರಕೃತಿ ಸೌಂದರ್ಯವನ್ನು, ವನ್ಯಜೀವಿಗಳ ಜೀವನವನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ಕೇವಲ ಟೀಸರ್​ ನೋಡಿಯೇ ಜನರು ರೋಮಾಂಚನಗೊಳ್ಳುತ್ತಿದ್ದಾರೆ. ಕಣ್ಮನ ತಣಿಸುವಂತಹ ಛಾಯಾಗ್ರಹಣ ಎಲ್ಲರಲ್ಲೂ ಬೆರಗು ಮೂಡಿಸುತ್ತಿದೆ. ಇದು ಕೇವಲ ಆನ್​ಲೈನ್​ಗೆ ಸೀಮಿತವಲ್ಲ. ‘ಗಂಧದ ಗುಡಿ’ ಸಾಕ್ಷ್ಯಚಿತ್ರವು ಥಿಯೇಟರ್​ನಲ್ಲಿ ಬಿಡುಗಡೆ ಆಗಲಿದೆ. 2022ರಲ್ಲಿ ಚಿತ್ರಮಂದಿರಗಳಲ್ಲಿ ಇದನ್ನು ತೆರೆಕಾಣಿಸಲು ಪ್ಲ್ಯಾನ್​ ಮಾಡಲಾಗಿದೆ.

ಇದನ್ನೂ ಓದಿ: ಗಂಧದಗುಡಿ ಟೀಸರ್​ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ರಾಜಮೌಳಿ: ಟ್ವೀಟ್​ ಮೂಲಕ ಶುಭ ಹಾರೈಕೆ

David Warner: ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಂದ ಡೇವಿಡ್ ವಾರ್ನರ್​ಗೆ ವಿಶೇಷ ಬೇಡಿಕೆ: ಈಡೇರಿಸ್ತಾರ ಆಸೀಸ್ ಕ್ರಿಕೆಟಿಗ?

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ