AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಇನ್ನೂ ಬಾಕಿ ಇದೆ ಪುನೀತ್​ ಕನಸಿನ ‘ಗಂಧದ ಗುಡಿ’ ಶೂಟಿಂಗ್​; ಪೂರ್ಣಗೊಳಿಸೋರು ಯಾರು?

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿತ್ತು.

 ಇನ್ನೂ ಬಾಕಿ ಇದೆ ಪುನೀತ್​ ಕನಸಿನ ‘ಗಂಧದ ಗುಡಿ’ ಶೂಟಿಂಗ್​; ಪೂರ್ಣಗೊಳಿಸೋರು ಯಾರು?
ಗಂಧದಗುಡಿ ಟೀಸರ್​, ಪುನೀತ್​
TV9 Web
| Edited By: |

Updated on: Dec 16, 2021 | 1:30 PM

Share

‘ಗಂಧದ ಗುಡಿ’ ಡಾಕ್ಯುಮೆಂಟರಿ (Gandhada Gudi Documentary) ಬಗ್ಗೆ ಸಾಕಷ್ಟು ನಿರೀಕ್ಷೆ ಹುಟ್ಟಿದೆ. ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರು ಹೆಚ್ಚು  ಇಷ್ಟಪಟ್ಟು ಮಾಡಿರುವ ಈ ಸಾಕ್ಷ್ಯಚಿತ್ರ ಕರ್ನಾಟಕದ ವನ್ಯ ಸಂಪತ್ತು, ಪ್ರಕೃತಿ ವೈಭವವನ್ನು ಎತ್ತಿ ತೋರಿಸುತ್ತಿದೆ. ಇತ್ತೀಚೆಗೆ ಇದರ ಟೈಟಲ್​ ಟೀಸರ್ (Gandhada Gudi Tittle Teaser)​ ರಿಲೀಸ್​ ಆಗಿದ್ದು, ಎಲ್ಲ ಕಡೆಗಳಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪುನೀತ್​ ಕಂಡ ಅದ್ಭುತ ಕನಸಿನ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಮಧ್ಯೆ, ‘ಗಂಧದ ಗುಡಿ’ ಶೂಟಿಂಗ್​ ಇನ್ನೂ ಬಾಕಿ ಉಳಿದುಕೊಂಡಿದೆ. ಪುನೀತ್​ ಅವರು ಇದನ್ನು ಪೂರ್ಣಗೊಳಿಸಬೇಕಿತ್ತು. ಅದಕ್ಕೂ ಮೊದಲೇ ಅವರು ನಿಧನ ಹೊಂದಿದ್ದರು. ಹಾಗಾದರೆ, ಇದನ್ನು ಈಗ ಪೂರ್ಣಗೊಳಿಸೋರು ಯಾರು? ಆ ಪ್ರಶ್ನೆಗೂ ಉತ್ತರವಿದೆ.

‘ವೈಲ್ಡ್​ ಕರ್ನಾಟಕ’ ಡಾಕ್ಯುಮೆಂಟರಿ ಮಾಡಿದ್ದ ಅಮೋಘ ವರ್ಷ ಜತೆ ಸೇರಿ ಪುನೀತ್​ ಕರುನಾಡ ಬಗ್ಗೆ ಡಾಕ್ಯುಮೆಂಟರಿ ಒಂದನ್ನು ಸಿದ್ಧಪಡಿಸಿದ್ದರು. ರಾಜ್ಯದ ನಾನಾಕಡೆಗಳಲ್ಲಿ ಭೇಟಿ ನೀಡಿ ಶೂಟ್​ ಮಾಡಲಾಗಿತ್ತು. ಇದಕ್ಕೆ ‘ಗಂಧದಗುಡಿ’ ಎಂದು ಹೆಸರಿಡಲಾಗಿದೆ. ಪುನೀತ್​ ಕೂಡ ಇದರಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ಟೀಸರ್ ಇತ್ತೀಚೆಗೆ ರಿಲೀಸ್​ ಆಗಿ ಮೆಚ್ಚುಗೆ ಗಳಿಸಿಕೊಂಡಿತ್ತು. ಈಗ ಬಾಕಿ ಇರುವ ಶೂಟಿಂಗ್​ಅನ್ನು ಅಮೋಘ ವರ್ಷ ಅವರು ಪುನೀತ್​ ಇಲ್ಲದೆ ಶೂಟ್​ ಪೂರ್ಣಗೊಳಿಸಬೇಕಿದೆ.

ಮೂಲಗಳ ಪ್ರಕಾರ ‘ಗಂಧದ ಗುಡಿ’ಯ 7-8 ದಿನಗಳ ಶೂಟಿಂಗ್​ ಬಾಕಿ ಇವೆ. ಪುನೀತ್​ ಅವರು ಇದಕ್ಕಾಗಿ ಡೇಟ್​ ಕೂಡ ನೀಡಿದ್ದರು. ಈ ಮಧ್ಯೆ ಅವರು ಅಕಾಲಿಕ ಮರಣ ಹೊಂದಿದ್ದರು. ಇದು ಸಾಕಷ್ಟು ಆಘಾತ ತಂದಿದೆ. ಕನ್ನಡ ಚಿತ್ರರಂಗಕ್ಕೆ ಇದರಿಂದ ಇನ್ನೂ ಹೊರಬರೋಕೆ ಆಗುತ್ತಿಲ್ಲ. ಈಗ ಅಮೋಘ ವರ್ಷ ಅವರು ಬಾಕಿ ಇರುವ ಶೂಟಿಂಗ್​ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕದ ದಟ್ಟ ಕಾನನದ ಒಳಗೆ ಇದನ್ನು ಚಿತ್ರೀಕರಿಸಲಾಗಿದೆ. ಪ್ರಕೃತಿ ಸೌಂದರ್ಯವನ್ನು, ವನ್ಯಜೀವಿಗಳ ಜೀವನವನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ಕೇವಲ ಟೀಸರ್​ ನೋಡಿಯೇ ಜನರು ರೋಮಾಂಚನಗೊಳ್ಳುತ್ತಿದ್ದಾರೆ. ಕಣ್ಮನ ತಣಿಸುವಂತಹ ಛಾಯಾಗ್ರಹಣ ಎಲ್ಲರಲ್ಲೂ ಬೆರಗು ಮೂಡಿಸುತ್ತಿದೆ. ಇದು ಕೇವಲ ಆನ್​ಲೈನ್​ಗೆ ಸೀಮಿತವಲ್ಲ. ‘ಗಂಧದ ಗುಡಿ’ ಸಾಕ್ಷ್ಯಚಿತ್ರವು ಥಿಯೇಟರ್​ನಲ್ಲಿ ಬಿಡುಗಡೆ ಆಗಲಿದೆ. 2022ರಲ್ಲಿ ಚಿತ್ರಮಂದಿರಗಳಲ್ಲಿ ಇದನ್ನು ತೆರೆಕಾಣಿಸಲು ಪ್ಲ್ಯಾನ್​ ಮಾಡಲಾಗಿದೆ.

ಇದನ್ನೂ ಓದಿ: ಗಂಧದಗುಡಿ ಟೀಸರ್​ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ನಿರ್ದೇಶಕ ರಾಜಮೌಳಿ: ಟ್ವೀಟ್​ ಮೂಲಕ ಶುಭ ಹಾರೈಕೆ

David Warner: ಪುನೀತ್ ರಾಜ್​ಕುಮಾರ್ ಅಭಿಮಾನಿಗಳಿಂದ ಡೇವಿಡ್ ವಾರ್ನರ್​ಗೆ ವಿಶೇಷ ಬೇಡಿಕೆ: ಈಡೇರಿಸ್ತಾರ ಆಸೀಸ್ ಕ್ರಿಕೆಟಿಗ?

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ