AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೈಕಾಳ ರಿಪೋರ್ಟ್ ಹರಿಬಿಟ್ಟವರ ವಿರುದ್ಧ ಹರಿಹಾಯ್ದ ಅಮೃತಾ

ಸೋಮವಾರದಂದು ಖ್ಯಾತ ನಟಿ ಮತ್ತು ಡ್ಯಾನ್ಸರ್ ಮಲೈಕಾ ಅರೋರಾ, ತನ್ನ ಕೊವಿಡ್-19 ಲ್ಯಾಬ್ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಹೇಳುವ ಮೊದಲೇ ಆಕೆಯ ಮೆಡಿಕಲ್ ರಿಪೋರ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಲು ಶುರುವಾಗಿದ್ದು ಮಲೈಕಾಳ ಸಹೋದರಿ ಮತ್ತು ನಟಿ ಅಮೃತಾ ಅರೋರಾಗೆ ಪಿತ್ತ ನೆತ್ತಿಗೇರುವಂತೆ ಮಾಡಿದೆ. ತನ್ನ ಇನ್​ಸ್ಟಾಗ್ರಾಮ್ ಪೋಸ್ಟ್​ನಲ್ಲಿ ರಿಪೋರ್ಟನ್ನು ಹರಿಬಿಟ್ಟವರ ವಿರುದ್ಧ ಕಿಡಿ ಕಾರಿರುವ ಅಮೃತಾ, ತನ್ನಕ್ಕ ಸೆಲೆಬ್ರಿಟಿಯಾಗಿರುವುದಕ್ಕೆ ದಂಡ ತೆರಬೇಕಾಗಿದೆ ಎಂದಿದ್ದಾರೆ. ‘‘ಹೊಸ ಪ್ರಕ್ರಿಯೊಂದು ಪ್ರಾರಂಭವಾಗಿರುವಂತಿದೆ. ನನ್ನ ಅಕ್ಕನ ರಿಸಲ್ಟ್ ಹಲವಾರು ವಾಟ್ಸ್ಯಾಪ್ […]

ಮಲೈಕಾಳ ರಿಪೋರ್ಟ್ ಹರಿಬಿಟ್ಟವರ ವಿರುದ್ಧ ಹರಿಹಾಯ್ದ ಅಮೃತಾ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Sep 08, 2020 | 9:40 PM

Share

ಸೋಮವಾರದಂದು ಖ್ಯಾತ ನಟಿ ಮತ್ತು ಡ್ಯಾನ್ಸರ್ ಮಲೈಕಾ ಅರೋರಾ, ತನ್ನ ಕೊವಿಡ್-19 ಲ್ಯಾಬ್ ರಿಪೋರ್ಟ್ ಪಾಸಿಟಿವ್ ಬಂದಿದೆ ಎಂದು ಹೇಳುವ ಮೊದಲೇ ಆಕೆಯ ಮೆಡಿಕಲ್ ರಿಪೋರ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಲು ಶುರುವಾಗಿದ್ದು ಮಲೈಕಾಳ ಸಹೋದರಿ ಮತ್ತು ನಟಿ ಅಮೃತಾ ಅರೋರಾಗೆ ಪಿತ್ತ ನೆತ್ತಿಗೇರುವಂತೆ ಮಾಡಿದೆ.

ತನ್ನ ಇನ್​ಸ್ಟಾಗ್ರಾಮ್ ಪೋಸ್ಟ್​ನಲ್ಲಿ ರಿಪೋರ್ಟನ್ನು ಹರಿಬಿಟ್ಟವರ ವಿರುದ್ಧ ಕಿಡಿ ಕಾರಿರುವ ಅಮೃತಾ, ತನ್ನಕ್ಕ ಸೆಲೆಬ್ರಿಟಿಯಾಗಿರುವುದಕ್ಕೆ ದಂಡ ತೆರಬೇಕಾಗಿದೆ ಎಂದಿದ್ದಾರೆ. ‘‘ಹೊಸ ಪ್ರಕ್ರಿಯೊಂದು ಪ್ರಾರಂಭವಾಗಿರುವಂತಿದೆ. ನನ್ನ ಅಕ್ಕನ ರಿಸಲ್ಟ್ ಹಲವಾರು ವಾಟ್ಸ್ಯಾಪ್ ಗ್ರೂಪ್​ಗಳಲ್ಲಿ, ಫೇಸ್​ಬುಕ್ ಅಕೌಂಟ್​ಗಳಲ್ಲಿ ಇನ್ನಿತರ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಲಾಗಿದೆ. ಆಕೆ ತನ್ನ ರಿಸಲ್ಟ್ ನೆಗೆಟಿವ್ ಬರಲಿ ಎಂಬ ನಿರೀಕ್ಷೆಯೊಂದಿಗೆ ದೇವರಿಗೆ ಪ್ರಾರ್ಥನೆ ಮಾಡುತ್ತಿರಬೇಕಾದರೆ, ಉಳಿದವರಿಗೇನು ಅದರಿಂದ ಸಮಸ್ಯೆ? ಅವರು ಮಾಡಿರೋದು ಸರಿಯಾ? ಮಾನವರಾಗಿ ನಾವು ಎತ್ತ ಸಾಗುತ್ತಿದ್ದೇವೆ ಅನ್ನೋದನ್ನ ಯೋಚನೆ ಮಾಡಿದರೆ, ಮನಸ್ಸು ಕ್ಷೋಬೆಗೊಳಗಾಗುತ್ತದೆ, ದುಖಃವಾಗುತ್ತದೆ’’ ಎಂದು ಅಮೃತಾ ಬರೆದುಕೊಂಡಿದ್ದಾರೆ.

ಮತ್ತೊಂದು ಪೋಸ್ಟ್​ನಲ್ಲಿ ಅಮೃತಾ, ‘‘ಮಲೈಕಾಳ ರಿಪೋರ್ಟ್ ಪೋಸ್ಟ್ ಮಾಡುವುದರಿಂದ ಅವರಿಗಾಗುವ ಪ್ರಯೋಜನವಾದರೂ ಏನು? ಒಬ್ಬ ಜವಾಬ್ದಾರಿಯುತ ಮಹಿಳೆಯಾಗಿ ಆಕೆಯೇ ಲ್ಯಾಬ್ ರಿಸಲ್ಟ್ ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದಳು. ಕೆಲವರಂತೂ ಯಾವ ಮಟ್ಟಕ್ಕೆ ಇಳಿದು ಪೋಸ್ಟ್ ಮಾಡಿದ್ದಾರೆಂದರೆ, ಅವಳಿಗೆ ತಕ್ಕ ಶಾಸ್ತಿ ಆಗಿದೆ, ಹಾಗೆಯೇ ಆಗಬೇಕಿತ್ತು ಎಂದಿದ್ದಾರೆ! ಇದರರ್ಥ ಏನು?’’ ಎಂದು ಬರೆದಿದ್ದಾರೆ.

Published On - 9:39 pm, Tue, 8 September 20

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು