AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿ ನಾಡು ಚಂದು ಹೇಳಿದ ಬರ್ತ್​ಡೇ ವಿಶ್​​ಗೆ ಅಮೃತಾ ಅಯ್ಯಂಗಾರ್ ರಿಯಾಕ್ಷನ್ ಹೇಗಿತ್ತು? ಇಲ್ಲಿದೆ ವಿಡಿಯೋ

ಕಾಫಿ ನಾಡು ಚಂದು ಅವರು ಅನೇಕ ಸೆಲೆಬ್ರಿಟಿಗಳಿಗೆ ಬರ್ತ್​ಡೇ ವಿಶ್ ಮಾಡಿದ್ದಾರೆ. ಶಿವರಾಜ್​ಕುಮಾರ್ ಹಾಗೂ ಪುನೀತ್ ಅಭಿಮಾನಿ ಆಗಿರುವ ಅವರು, ಪ್ರತಿ ವಿಡಿಯೋ ಆರಂಭದಲ್ಲಿ ಈ ಮಾತನ್ನು ತಪ್ಪದೇ ಹೇಳುತ್ತಾರೆ. ಈ ಕಾರಣಕ್ಕೂ ಅವರು ಅನೇಕರಿಗೆ ಇಷ್ಟವಾಗಿದ್ದಾರೆ.

ಕಾಫಿ ನಾಡು ಚಂದು ಹೇಳಿದ ಬರ್ತ್​ಡೇ ವಿಶ್​​ಗೆ ಅಮೃತಾ ಅಯ್ಯಂಗಾರ್ ರಿಯಾಕ್ಷನ್ ಹೇಗಿತ್ತು? ಇಲ್ಲಿದೆ ವಿಡಿಯೋ
ಚಂದು-ಅಮೃತಾ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jul 27, 2022 | 6:31 PM

Share

ಕಾಫಿ ನಾಡು ಚಂದು (Coffe Nadu Chandu) ಸದ್ಯ ಸಖತ್ ಟ್ರೆಂಡ್​ನಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ () ಅವರದ್ದೇ ಚರ್ಚೆ ಆಗುತ್ತಿದೆ. ಚಿಕ್ಕಮಗಳೂರಿನ ಈ ಯುವಕ ವೃತ್ತಿಯಲ್ಲಿ ಆಟೋ ಡ್ರೈವರ್​. ಸಮಯ ಸಿಕ್ಕಾಗ ರೀಲ್ಸ್ ಮಾಡುತ್ತಾರೆ. ಬರ್ತ್​ಡೇ ವಿಶ್ ಮಾಡುವುದರಲ್ಲಿ ಅವರು ಎತ್ತಿದ ಕೈ. ಸೆಲೆಬ್ರಿಟಿಗಳು ಹಾಗೂ ಜನಸಾಮಾನ್ಯರಿಗೆ ತಮ್ಮದೇ ಶೈಲಿಯಲ್ಲಿ ಹುಟ್ಟುಹಬ್ಬದ ವಿಶ್ ಮಾಡುತ್ತಾರೆ. ಅವರ ಬಳಿ ಬರ್ತ್​ಡೇ ವಿಶ್ ಹೇಳಿಸಿಕೊಳ್ಳಬೇಕು ಎಂದು ಅನೇಕರು ಪ್ರಯತ್ನಿಸಿದ್ದಿದೆ. ಜುಲೈ 26ರಂದು ಅಮೃತಾ ಅಯ್ಯಂಗಾರ್ (Amrutha Iyengar) ತಮ್ಮ ಬರ್ತ್​ಡೇ ಆಚರಿಸಿಕೊಂಡಿದರು. ಅವರ ಬರ್ತ್​​ಡೇಗೆ ಕಾಫಿ ನಾಡು ಚಂದು ಅವರು ವಿಶ್ ಮಾಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಅಮೃತಾ ಕೂಡ ಈ ವಿಡಿಯೋ ನೋಡಿದ್ದಾರೆ.

ಕಾಫಿ ನಾಡು ಚಂದು ಅವರು ಅನೇಕ ಸೆಲೆಬ್ರಿಟಿಗಳಿಗೆ ಬರ್ತ್​ಡೇ ವಿಶ್ ಮಾಡಿದ್ದಾರೆ. ಶಿವರಾಜ್​ಕುಮಾರ್ ಹಾಗೂ ಪುನೀತ್ ಅಭಿಮಾನಿ ಆಗಿರುವ ಅವರು, ಪ್ರತಿ ವಿಡಿಯೋ ಆರಂಭದಲ್ಲಿ ಈ ಮಾತನ್ನು ತಪ್ಪದೇ ಹೇಳುತ್ತಾರೆ. ಈ ಕಾರಣಕ್ಕೂ ಅವರು ಅನೇಕರಿಗೆ ಇಷ್ಟವಾಗಿದ್ದಾರೆ. ಇನ್ನೂ ಕೆಲವರು ಇವರನ್ನು ಟ್ರೋಲ್ ಮಾಡುತ್ತಿದ್ದಾರೆ. ಟ್ರೋಲ್​ ಬಗ್ಗೆ ಚಂದು ಅವರು ಹೆಚ್ಚು ತಲೆಕೆಡಿಸಿಕೊಂಡಿಲ್ಲ.

ಇದನ್ನೂ ಓದಿ
Image
BBK 9: ಈ ಬಾರಿ ಕನ್ನಡ ಬಿಗ್​ ಬಾಸ್​ನಲ್ಲಿ ಯಾರೆಲ್ಲ ಇರಬೇಕು? ಈಗಲೇ ಶುರುವಾಗಿದೆ ಚರ್ಚೆ
Image
BBK 9: ‘ಕನ್ನಡ ಬಿಗ್​ ಬಾಸ್​’ 9ನೇ ಸೀಸನ್​ ಕೆಲಸ ಶುರು; ಬಿಗ್​ ಅಪ್​ಡೇಟ್​ ನೀಡಿದ ಪರಮೇಶ್ವರ್​ ಗುಂಡ್ಕಲ್​
Image
‘ಬಿಗ್​ ಬಾಸ್​’ನಲ್ಲಿ ಮದುವೆ ಆದ ಜೋಡಿಗೆ ಚಾನೆಲ್​ನವರಿಂದ ಸಿಕ್ಕಿತ್ತು 50 ಲಕ್ಷ ರೂ.; ಎರಡೇ ತಿಂಗಳಿಗೆ ಡಿವೋರ್ಸ್​
Image
ಬಿಗ್​ ಬಾಸ್​ ಗೆದ್ದವರ ಹಿಂದೆ ಲಾಬಿ ಇದೆಯೋ ಇಲ್ಲವೋ? ನೇರವಾಗಿ ಮಾತಾಡಿದ ಸ್ಪರ್ಧಿ ಕರಣ್​ ಕುಂದ್ರಾ

ಅಮೃತಾ ಅಯ್ಯಂಗಾರ್​ಗೆ ‘ಹ್ಯಾಪಿ ಬರ್ತ್​​ಡೇ’ ಎಂದು ಹಾಡು ಹೇಳುತ್ತಾ ವಿಶ್ ಮಾಡಿದ್ದಾರೆ ಚಂದು. ಈ ವಿಡಿಯೋವನ್ನು ಚಂದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದರು. ಈ ವಿಡಿಯೋ ನೋಡಿ ಅಮೃತಾ ಅಯ್ಯಂಗಾರ್ ಸಾಕಷ್ಟು ನಕ್ಕಿದ್ದಾರೆ. ಈ ವಿಡಿಯೋಗಳನ್ನು ಟ್ರೋಲ್ ಪೇಜ್​ಗಳಲ್ಲಿ ವೈರಲ್ ಮಾಡಲಾಗುತ್ತಿದೆ.

ಇದನ್ನೂ ಓದಿ:  ‘ಕಾಫಿ ನಾಡು ಚಂದು ಬಿಗ್​ ಬಾಸ್​ಗೆ ಬರಲಿ’: ಪರಮೇಶ್ವರ್​ ಗುಂಡ್ಕಲ್​ ಬಳಿ ಬೇಡಿಕೆ ಇಟ್ಟ ಫ್ಯಾನ್ಸ್​

ಶೀಘ್ರವೇ ‘ಬಿಗ್ ಬಾಸ್ ಒಟಿಟಿ’ ಆರಂಭ ಆಗುತ್ತಿದೆ. ಇದಕ್ಕೆ ಕಾಫಿ ನಾಡು ಚಂದು ಕೂಡ ಬರಲಿ ಎಂಬುದು ಅನೇಕರ ಆಗ್ರಹ. ಕಳೆದ ಸೀಸನ್​ಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆದ ಅನೇಕರನ್ನು ಬಿಗ್ ಬಾಸ್​ಗೆ ಕರೆಸಲಾಗಿತ್ತು. ಅದೇ ರೀತಿ ಕಾಫಿ ನಾಡು ಚಂದುಗೆ ಅವಕಾಶ ನೀಡಲಿ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಗ್ರಹಿಸುತ್ತಿದ್ದಾರೆ.

Published On - 6:30 pm, Wed, 27 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!