ಅಮೃತಾ ಪ್ರೇಮ್ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು ‘ಟಗರು ಪಲ್ಯ’ ಚಿತ್ರದ ಹೊಸ ಪೋಸ್ಟರ್

Tagaru Palya Movie: ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ಟಗರು ಪಲ್ಯ’ ಸಿದ್ಧಗೊಳ್ಳುತ್ತಿದೆ. ಉಮೇಶ್ ಕೆ ಕೃಪ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ನಟಿಯಾಗಿ ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ

ಅಮೃತಾ ಪ್ರೇಮ್ ಹುಟ್ಟುಹಬ್ಬಕ್ಕೆ ರಿಲೀಸ್ ಆಯ್ತು ‘ಟಗರು ಪಲ್ಯ’ ಚಿತ್ರದ ಹೊಸ ಪೋಸ್ಟರ್
ಅಮೃತಾ ಪ್ರೇಮ್ ಅವರ ‘ಟಗರು ಪಲ್ಯ’ ಪೋಸ್ಟರ್
Follow us
|

Updated on: Jan 23, 2023 | 3:40 PM

ನೆನಪಿರಲಿ ಪ್ರೇಮ್ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಮಗಳು ಅಮೃತಾ ಪ್ರೇಮ್ (Amrutha Prem) ಅವರು ಈಗ ‘ಟಗರು ಪಲ್ಯ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಇಂದು (ಜನವರಿ 23) ಅಮೃತಾ ಪ್ರೇಮ್ ಅವರ ಜನ್ಮದಿನ. ಈ ವಿಶೇಷ ದಿನಕ್ಕೆ ‘ಟಗರು ಪಲ್ಯ’ ಚಿತ್ರದ (Tagaru Palya Movie) ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್​ನಲ್ಲಿ ಸೀರೆ ಉಟ್ಟು ಅಮೃತಾ ಗಮನ ಸೆಳೆದಿದ್ದಾರೆ.

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ಟಗರು ಪಲ್ಯ’ ಸಿದ್ಧಗೊಳ್ಳುತ್ತಿದೆ. ಉಮೇಶ್ ಕೆ ಕೃಪ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ನಟಿಯಾಗಿ ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಅವರು ಈ ಬಾರಿ ಕಲಾವಿದೆಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವುದು ವಿಶೇಷ. ಚಿತ್ರತಂಡದವರು ಹೊಸ ಪೋಸ್ಟರ್ ಮೂಲಕ ಅಮೃತಾಗೆ ಶುಭಕೋರಿದ್ದಾರೆ. ಅನೇಕರು ನಟಿಗೆ ಶುಭಕೋರುತ್ತಿದ್ದಾರೆ.

‘ಟಗರು ಪಲ್ಯ’ ಚಿತ್ರದಲ್ಲಿ ಅಮೃತಾ ಪ್ರೇಮ್ ಅವರು ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಆ ಪಾತ್ರವನ್ನು ಪ್ರತಿನಿಧಿಸುವಂತಿದೆ ಹೊಸ ಪೋಸ್ಟರ್​. ಹಳದಿ ಬಣ್ಣದ ಸೀರೆ ಉಟ್ಟು ಅವರು ಗಮನ ಸೆಳೆದಿದ್ದಾರೆ. ಈ ಪಾತ್ರಕ್ಕಾಗಿ ಅವರು ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಮಂಡ್ಯ ಭಾಗದಲ್ಲಿ ಕಥೆ ಸಾಗುತ್ತದೆ. ಮಂಡ್ಯ ಭಾಗದ ಭಾಷೆಯನ್ನು ಅಮೃತಾ ಕಲಿತಿದ್ದಾರೆ.

ಇದನ್ನೂ ಓದಿ
Image
Nepotism: ಡಾಲಿ ಮೇಲೆ ನೆಪೋಟಿಸಂ ಆರೋಪ; ಪ್ರೇಮ್​ ಪುತ್ರಿಗೆ ಚಾನ್ಸ್​ ನೀಡಿದ್ದಕ್ಕೆ ನೆಟ್ಟಿಗರ ಟೀಕೆ
Image
Nenapirali Prem: ‘ನಾನು ಟ್ರೆಂಡ್​ನಲ್ಲಿ ಇರುವಾಗ ಮಗಳು ಹೀರೋಯಿನ್​ ಆಗಿದ್ದು ಖುಷಿ ನೀಡಿದೆ’: ‘ನೆನಪಿರಲಿ’ ಪ್ರೇಮ್​
Image
Amrutha Prem: ಚಿತ್ರರಂಗಕ್ಕೆ ‘ನೆನಪಿರಲಿ’ ಪ್ರೇಮ್​ ಪುತ್ರಿ ಎಂಟ್ರಿ; ಡಾಲಿ ನಿರ್ಮಾಣದ ಸಿನಿಮಾದಲ್ಲಿ ಅಮೃತಾ ನಟನೆ

ಡಾಲಿ ಧನಂಜಯ್ ಅವರು ತಮ್ಮ ‘ಡಾಲಿ ಪಿಕ್ಚರ್ಸ್​’ ಮೂಲಕ ಹೊಸಬರಿಗೆ ಅವಕಾಶ ನೀಡುತ್ತಿದ್ದಾರೆ. ಅವರು ನಿರ್ಮಾಪಕರಾಗಿ ಯಶಸ್ಸು ಕಂಡಿದ್ದಾರೆ. ಈಗ ಡಾಲಿ ಪಿಕ್ಚರ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಮೂರನೇ ಸಿನಿಮಾ ‘ಟಗರು ಪಲ್ಯ’. ಈ ಬಾರಿ ಹೊಸ ಪ್ರತಿಭೆಗಳಿಗೆ ಡಾಲಿ ಪಿಕ್ಚರ್ಸ್ ವೇದಿಕೆಯಾಗಿದೆ. ‘ಇಕ್ಕಟ್’ ಖ್ಯಾತಿಯ ನಾಗಭೂಷಣ್ ಕೂಡ ಈ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ.

‘ಟಗರು ಪಲ್ಯ’ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದು, ಎಸ್. ಕೆ. ರಾವ್ ಛಾಯಾಗ್ರಹಣ ಚಿತ್ರಕ್ಕಿದೆ. ನಾಗಭೂಷಣ್-ಅಮೃತಾ ಜತೆಗೆ, ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ
ವಾರ ಭವಿಷ್ಯ: ಅಕ್ಟೋಬರ್ 14 ರಿಂದ 20 ರವರೆಗೆ ವಾರ ಭವಿಷ್ಯ ಹೀಗಿದೆ