AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿ: ಮಲ್ಲಿ ವಿವಾಹ ನಡೆಯೋದೆ ಅನುಮಾನ?

Amruthadhare Serial: ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮದುವೆ ನಡೆಯುತ್ತಿದ್ದು, ಜಯದೇವ್‌ನ ಕುತಂತ್ರ ಬಯಲಾಗುವ ಹಂತದಲ್ಲಿದೆ. ಮಲ್ಲಿ ವಿವಾಹ ನಿಲ್ಲಿಸಲು ಜಯದೇವ್ ಸುನಿಯನ್ನು ಬಳಸಿಕೊಂಡಿದ್ದ. ಆದರೆ, ಭೂಮಿಕಾ ಸುನಿಯ ಹಿನ್ನೆಲೆ ತಿಳಿದುಕೊಂಡು ಮದುವೆ ನಿಲ್ಲಿಸಲು ಸಿದ್ಧವಾಗಿದ್ದಾಳೆ. ಇದರಿಂದ ಜಯದೇವ್‌ಗೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದೆ.

‘ಅಮೃತಧಾರೆ’ ಧಾರಾವಾಹಿ: ಮಲ್ಲಿ ವಿವಾಹ ನಡೆಯೋದೆ ಅನುಮಾನ?
ಅಮೃತಧಾರೆImage Credit source: Zee Kannada
 ಶ್ರೀಲಕ್ಷ್ಮೀ ಎಚ್
| Edited By: |

Updated on:Mar 24, 2026 | 7:59 AM

Share

‘ಅಮೃತಧಾರೆ’ (Amruthadhare) ಧಾರಾವಾಹಿಯಲ್ಲಿ ಈಗ ಒಂದು ಪ್ರಮುಖ ಬೆಳವಣಿಗೆ ನಡೆದಿದೆ ಎಂದೇ ಹೇಳಬಹುದು. ಏಕೆಂದರೆ, ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಮದುವೆ ಸಂಭ್ರಮ ನಡೆಯುತ್ತಿದೆ. ಈ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಮಯ ಕೂಡ ಬಂದಿದೆ. ಹೌದು, ಅಮೃತಧಾರೆ ಧಾರಾವಾಹಿಯಲ್ಲಿ ಈಗ ದೊಡ್ಡ ಟ್ವಿಸ್ಟ್ ಇದೆ. ಜಯದೇವ್ ಕಳ್ಳಾಟವು ಬಯಲಾಗುವ ಸಮಯವು ಸಮೀಪಿಸಿದೆ .

‘ಅಮೃತಧಾರೆ’ ಧಾರಾವಾಹಿಯ ಜಯದೇವ್ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಆತ ತುಂಬಾನೇ ಖಿಲಾಡಿ. ಆತ ನಿಜವಾಗಿಯೂ ಕೆಟ್ಟವನು ಮತ್ತು ಈ ವಿಷಯ ಎಲ್ಲರಿಗೂ ತಿಳಿದಿದೆ. ಆದರೆ, ಯಾರಿಂದಲೂ ಆತನನ್ನು ಹಾಗೂ ಆತ ಮಾಡುವ ಕೆಟ್ಟ ಕೆಲಸವನ್ನು ತಡೆಯಲು ಸಾಧ್ಯವಾಗಲೇ ಇಲ್ಲ. ಹೀಗಿರುವಾಗಲೇ ಜಯದೇವ್ ಒಂದು ದೊಡ್ಡ ನಿರ್ಧಾರ ಮಾಡಿದ್ದಾನೆ.

ಆತ ಮಲ್ಲಿ ವಿರುದ್ಧ ಸಂಚು ರೂಪಿಸುತ್ತಿದ್ದಾನೆ. ಮೊದಲು ತನ್ನ ಬಲಗೈ ಬಂಟ ಸುನಿಯನ್ನು ಅವನ ಹಿಂದೆ ಬಿಟ್ಟಿದ್ದಾನೆ. ಇದಕ್ಕೆ ಸರಿಯಾದ ಸಮಯಕ್ಕೆ ಆತ ಕಾಯುತ್ತಿದ್ದ. ಈಗ ಅಂತಹ ಸಮಯ ಬಂದಿದೆ. ಹೌದು, ಸುನಿಯನ್ನು ಮಲ್ಲಿ ಹಿಂದೆ ಬಿಟ್ಟಿರೋ ಜಯದೇವ್ ಮಜಾ ತೆಗೆದುಕೊಳ್ಳುತ್ತಿದ್ದಾನೆ. ಮುಂದೊಂದು ದಿನ ಎಲ್ಲವನ್ನೂ ಬದಲಿಸಬೇಕು ಎಂಬುದು ಆತನ ಉದ್ದೇಶ. ಮದುವೆ ಆಗದಂತೆ ಕೊನೆ ಕ್ಷಣದಲ್ಲಿ ನಿಲ್ಲಿಸಬೇಕು ಎಂಬುದು ಆತನ ಉದ್​ದೇಶ ಆಗಿತ್ತು. ಆದರೆ, ಭೂಮಿಕಾಳೇ ಮದುವೆ ನಿಲ್ಲಿಸುತ್ತೇನೆ ಎಂದು ಹೊರಟಿದ್ದಾಳೆ.

ಇದನ್ನೂ ಓದಿ:  ‘ಅಮೃತಧಾರೆ’:ಕಳೆದುಕೊಂಡಿದ್ದಕ್ಕಿಂತ 10 ಪಟ್ಟು ಹೆಚ್ಚು ಗಳಿಸ್ತೀನಿ; ಗೌತಮ್ ಚಾಲೆಂಜ್

ಆದರೆ, ಈ ಪ್ಲ್ಯಾನ್ ಫ್ಲಾಪ್ ಆಗುವ ಸೂಚನೆ ಸಿಕ್ಕಿದೆ. ಸುನಿ ಯಾರು ಹಾಗೂ ಆತನ ಹಿನ್ನೆಲೆ ಏನು ಎಂಬುದು ಭೂಮಿಕಾಗೆ ಗೊತ್ತಾಗಿ ಹೋಗಿದೆ. ಈ ಕಾರಣಕ್ಕೆ ಯಾವುದೇ ಕಾರಣಕ್ಕೂ ಇಬ್ಬರ ಮದುವೆ ನಡೆಯದಂತೆ ನೋಡಿಕೊಳ್ಳುವ ಪ್ಲ್ಯಾನ್ ಅಲ್ಲಿದ್ದಾಳೆ. ಇದರಿಂದ ಆತನಿಗೆ ಸಾಕಷ್ಟು ಹಿನ್ನಡೆ ಆಗುವ ಎಲ್ಲಾ ಲಕ್ಷಣ ಇದೆ. ಒಂದೊಮ್ಮೆ ಈ ಮದುವೆ ನಡೆದು ಹೋದರೆ ಜಯದೇವ್​​ಗೆ ದೊಡ್ಡ ಹಿನ್ನಡೆ ಆಗೋದು ಪಕ್ಕಾ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:58 am, Tue, 24 March 26

Follow Us
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್: