AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಮಿ ಜಾಕ್ಸನ್​ ಸಂಸಾರದಲ್ಲಿ ಬಿರುಕು? ಸೂಚನೆ ಕೊಟ್ಟ ‘ದಿ ವಿಲನ್​’ ನಟಿ

Amy Jackson: ಬ್ರಿಟಿಷ್​ ಉದ್ಯಮಿ ಮ್ಯಾಗ್ನೇಜ್ ಜಾರ್ಜ್ ಜತೆ ಆ್ಯಮಿ ರಿಲೇಶನ್​ಶಿಪ್​ನಲ್ಲಿದ್ದರು. ಆ್ಯಮಿ ಗರ್ಭ ಧರಿಸಿದ ನಂತರದಲ್ಲಿ ಇಬ್ಬರೂ ಎಂಗೇಜ್​ಮೆಂಟ್​ ಮಾಡಿಕೊಂಡರು. 2019ರಲ್ಲಿ ಆ್ಯಮಿಗೆ ಗಂಡು ಮಗು ಜನಿಸಿತು.

ಆ್ಯಮಿ ಜಾಕ್ಸನ್​ ಸಂಸಾರದಲ್ಲಿ ಬಿರುಕು? ಸೂಚನೆ ಕೊಟ್ಟ ‘ದಿ ವಿಲನ್​’ ನಟಿ
ಆ್ಯಮಿ ಜಾಕ್ಸನ್​ ಸಂಸಾರದಲ್ಲಿ ಬಿರುಕು? ಇನ್​ಸ್ಟಾಗ್ರಾಮ್​ನಲ್ಲಿ ಸೂಚನೆ ಕೊಟ್ಟ ‘ದಿ ವಿಲನ್​’ ನಟಿ
TV9 Web
| Edited By: |

Updated on:Jul 29, 2021 | 9:15 AM

Share

ನಟಿ ಆ್ಯಮಿ ಜಾಕ್ಸನ್​ ಕನ್ನಡದ ‘ದಿ ವಿಲನ್’​ ಸಿನಿಮಾದಲ್ಲಿ ಸುದೀಪ್​ಗೆ ಜತೆಯಾಗಿ ಕಾಣಿಸಿಕೊಂಡಿದ್ದರು. 8 ವರ್ಷಗಳ ಕಾಲ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದ ಅವರು ಸಾಕಷ್ಟು ಹಿಟ್​ ಚಿತ್ರಗಳಲ್ಲಿ ನಟಿಸಿದರು. ಈಗ ಅವರ ಸಂಸಾರದಲ್ಲಿ ಬಿರುಗಾಳಿ ಬೀಸುವ ಸೂಚನೆ ಸಿಕ್ಕಿದೆ. ಇನ್​ಸ್ಟಾಗ್ರಾಮ್​ನಲ್ಲಿ ಆ್ಯಮಿ ಹೀಗೊಂದು ಸೂಚನೆ ನೀಡಿದ್ದಾರೆ.  

ಬ್ರಿಟಿಷ್​ ಉದ್ಯಮಿ ಮ್ಯಾಗ್ನೇಜ್ ಜಾರ್ಜ್ ಜತೆ ಆ್ಯಮಿ ರಿಲೇಶನ್​ಶಿಪ್​ನಲ್ಲಿದ್ದರು. ಗರ್ಭಿಣಿ ಆದ  ನಂತರದಲ್ಲಿ ಇಬ್ಬರೂ ಎಂಗೇಜ್​ಮೆಂಟ್​ ಮಾಡಿಕೊಂಡರು. 2019ರಲ್ಲಿ ಆ್ಯಮಿಗೆ ಗಂಡು ಮಗು ಜನಿಸಿತು. ಇದಾದ ನಂತರದಲ್ಲಿ ಆ್ಯಮಿ ಮಗುವಿನ ಜತೆ ಇರುವ ಸಾಕಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. ಆದರೆ, ಈಗ ಮ್ಯಾಗ್ನೇಜ್​ ಜತೆ ಆ್ಯಮಿ ಬ್ರೇಕಪ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಅಂದಹಾಗೆ, ಈ ಸುದ್ದಿ ಹುಟ್ಟಿಕೊಳ್ಳೋಕು ಒಂದು ಕಾರಣ ಇದೆ. ಮ್ಯಾಗ್ನೇಜ್ ಜತೆ ಇರುವ ಸಾಕಷ್ಟು ಫೋಟೋಗಳನ್ನು ಆ್ಯಮಿ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಆದರೆ, ಈಗ ಯಾವ ಫೋಟೋಗಳು ಅಲ್ಲಿಲ್ಲ. ಆ ಫೋಟೋಗಳನ್ನು ಆ್ಯಮಿ ಡಿಲೀಟ್​ ಮಾಡಿದ್ದಾರೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಇದು ಆ್ಯಮಿ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ಅವರು ಸಂಬಂಧ ಕಡಿದುಕೊಳ್ಳೋಕೆ ಕಾರಣ ಏನು ಎನ್ನುವ ಪ್ರಶ್ನೆಯೂ ಕಾಡುತ್ತಿದೆ.

2010ರಲ್ಲಿ ತೆರೆಗೆ ಬಂದ ತಮಿಳಿನ ‘ಮದ್ರಾಸಪಟ್ಟಿಣಂ​’​ ಸಿನಿಮಾ ಮೂಲಕ ಆ್ಯಮಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಐ’, ‘ಥೆರಿ’ ಅಂಥ ಹಿಟ್​ ಚಿತ್ರಗಳಲ್ಲಿ ಆ್ಯಮಿ ನಟಿಸಿದರು. 2018ರಲ್ಲಿ ತೆರೆಗೆ ಬಂದ ಪ್ರೇಮ್​ ನಿರ್ದೇಶನದ ದಿ ವಿಲನ್​ ಸಿನಿಮಾಗೂ ಆ್ಯಮಿ ನಾಯಕಿಯಾದರು. ಅದೇ ವರ್ಷ ತೆರೆಗೆ ಬಂದ ‘2.0’ ಅವರ ಕೊನೆಯ ಚಿತ್ರ. ಇದಾದ ನಂತರದಲ್ಲಿ ಅವರು ಸಂಸಾರದಲ್ಲಿ ಬ್ಯುಸಿಯಾದರು. ಮತ್ತೆ ಚಿತ್ರರಂಗಕ್ಕೆ ಬರುವ ಇಚ್ಛೆಯನ್ನು ಇತ್ತೀಚೆಗೆ ಅವರು ವ್ಯಕ್ತಪಡಿಸಿದ್ದರು. ಸದ್ಯ, ಆ್ಯಮಿ ಬ್ರಿಟನ್​ನಲ್ಲಿಯೇ ಸೆಟಲ್​ ಆಗಿದ್ದಾರೆ.

ಇದನ್ನೂ ಓದಿ: ನನ್ನ ಕರೀಯರ್, ಬದುಕು ಮತ್ತು ವ್ಯವಹಾರವನ್ನು ಮಣ್ಣು ಪಾಲು ಮಾಡಿಬಿಟ್ಟೆ ಅಂತ ಕುಂದ್ರಾ ಮೇಲೆ ಕೂಗಾಡಿದರು ಶಿಲ್ಪಾ ಶೆಟ್ಟಿ

‘ಅಶ್ಲೀಲ ಸಿನಿಮಾದಲ್ಲಿ ನಟಿಸೋದು ತಪ್ಪು ಎಂದಿದ್ದು ಯಾರು?’ ಸಲ್ಮಾನ್​ ಖಾನ್​ ಮಾಜಿ ಪ್ರೇಯಸಿಯ ಖಡಕ್​ ಪ್ರಶ್ನೆ  

Published On - 6:39 pm, Wed, 28 July 21

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು