AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಮಿ ಜಾಕ್ಸನ್​ ಸಂಸಾರದಲ್ಲಿ ಬಿರುಕು? ಸೂಚನೆ ಕೊಟ್ಟ ‘ದಿ ವಿಲನ್​’ ನಟಿ

Amy Jackson: ಬ್ರಿಟಿಷ್​ ಉದ್ಯಮಿ ಮ್ಯಾಗ್ನೇಜ್ ಜಾರ್ಜ್ ಜತೆ ಆ್ಯಮಿ ರಿಲೇಶನ್​ಶಿಪ್​ನಲ್ಲಿದ್ದರು. ಆ್ಯಮಿ ಗರ್ಭ ಧರಿಸಿದ ನಂತರದಲ್ಲಿ ಇಬ್ಬರೂ ಎಂಗೇಜ್​ಮೆಂಟ್​ ಮಾಡಿಕೊಂಡರು. 2019ರಲ್ಲಿ ಆ್ಯಮಿಗೆ ಗಂಡು ಮಗು ಜನಿಸಿತು.

ಆ್ಯಮಿ ಜಾಕ್ಸನ್​ ಸಂಸಾರದಲ್ಲಿ ಬಿರುಕು? ಸೂಚನೆ ಕೊಟ್ಟ ‘ದಿ ವಿಲನ್​’ ನಟಿ
ಆ್ಯಮಿ ಜಾಕ್ಸನ್​ ಸಂಸಾರದಲ್ಲಿ ಬಿರುಕು? ಇನ್​ಸ್ಟಾಗ್ರಾಮ್​ನಲ್ಲಿ ಸೂಚನೆ ಕೊಟ್ಟ ‘ದಿ ವಿಲನ್​’ ನಟಿ
TV9 Web
| Edited By: |

Updated on:Jul 29, 2021 | 9:15 AM

Share

ನಟಿ ಆ್ಯಮಿ ಜಾಕ್ಸನ್​ ಕನ್ನಡದ ‘ದಿ ವಿಲನ್’​ ಸಿನಿಮಾದಲ್ಲಿ ಸುದೀಪ್​ಗೆ ಜತೆಯಾಗಿ ಕಾಣಿಸಿಕೊಂಡಿದ್ದರು. 8 ವರ್ಷಗಳ ಕಾಲ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದ ಅವರು ಸಾಕಷ್ಟು ಹಿಟ್​ ಚಿತ್ರಗಳಲ್ಲಿ ನಟಿಸಿದರು. ಈಗ ಅವರ ಸಂಸಾರದಲ್ಲಿ ಬಿರುಗಾಳಿ ಬೀಸುವ ಸೂಚನೆ ಸಿಕ್ಕಿದೆ. ಇನ್​ಸ್ಟಾಗ್ರಾಮ್​ನಲ್ಲಿ ಆ್ಯಮಿ ಹೀಗೊಂದು ಸೂಚನೆ ನೀಡಿದ್ದಾರೆ.  

ಬ್ರಿಟಿಷ್​ ಉದ್ಯಮಿ ಮ್ಯಾಗ್ನೇಜ್ ಜಾರ್ಜ್ ಜತೆ ಆ್ಯಮಿ ರಿಲೇಶನ್​ಶಿಪ್​ನಲ್ಲಿದ್ದರು. ಗರ್ಭಿಣಿ ಆದ  ನಂತರದಲ್ಲಿ ಇಬ್ಬರೂ ಎಂಗೇಜ್​ಮೆಂಟ್​ ಮಾಡಿಕೊಂಡರು. 2019ರಲ್ಲಿ ಆ್ಯಮಿಗೆ ಗಂಡು ಮಗು ಜನಿಸಿತು. ಇದಾದ ನಂತರದಲ್ಲಿ ಆ್ಯಮಿ ಮಗುವಿನ ಜತೆ ಇರುವ ಸಾಕಷ್ಟು ಫೋಟೋಗಳನ್ನು ಹಂಚಿಕೊಂಡಿದ್ದರು. ಆದರೆ, ಈಗ ಮ್ಯಾಗ್ನೇಜ್​ ಜತೆ ಆ್ಯಮಿ ಬ್ರೇಕಪ್​ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಅಂದಹಾಗೆ, ಈ ಸುದ್ದಿ ಹುಟ್ಟಿಕೊಳ್ಳೋಕು ಒಂದು ಕಾರಣ ಇದೆ. ಮ್ಯಾಗ್ನೇಜ್ ಜತೆ ಇರುವ ಸಾಕಷ್ಟು ಫೋಟೋಗಳನ್ನು ಆ್ಯಮಿ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಆದರೆ, ಈಗ ಯಾವ ಫೋಟೋಗಳು ಅಲ್ಲಿಲ್ಲ. ಆ ಫೋಟೋಗಳನ್ನು ಆ್ಯಮಿ ಡಿಲೀಟ್​ ಮಾಡಿದ್ದಾರೆ. ಇದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆ ಆಗಿಲ್ಲ. ಇದು ಆ್ಯಮಿ ಅಭಿಮಾನಿಗಳಿಗೆ ಬೇಸರ ತರಿಸಿದೆ. ಅಲ್ಲದೆ, ಅವರು ಸಂಬಂಧ ಕಡಿದುಕೊಳ್ಳೋಕೆ ಕಾರಣ ಏನು ಎನ್ನುವ ಪ್ರಶ್ನೆಯೂ ಕಾಡುತ್ತಿದೆ.

2010ರಲ್ಲಿ ತೆರೆಗೆ ಬಂದ ತಮಿಳಿನ ‘ಮದ್ರಾಸಪಟ್ಟಿಣಂ​’​ ಸಿನಿಮಾ ಮೂಲಕ ಆ್ಯಮಿ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಂತರ ‘ಐ’, ‘ಥೆರಿ’ ಅಂಥ ಹಿಟ್​ ಚಿತ್ರಗಳಲ್ಲಿ ಆ್ಯಮಿ ನಟಿಸಿದರು. 2018ರಲ್ಲಿ ತೆರೆಗೆ ಬಂದ ಪ್ರೇಮ್​ ನಿರ್ದೇಶನದ ದಿ ವಿಲನ್​ ಸಿನಿಮಾಗೂ ಆ್ಯಮಿ ನಾಯಕಿಯಾದರು. ಅದೇ ವರ್ಷ ತೆರೆಗೆ ಬಂದ ‘2.0’ ಅವರ ಕೊನೆಯ ಚಿತ್ರ. ಇದಾದ ನಂತರದಲ್ಲಿ ಅವರು ಸಂಸಾರದಲ್ಲಿ ಬ್ಯುಸಿಯಾದರು. ಮತ್ತೆ ಚಿತ್ರರಂಗಕ್ಕೆ ಬರುವ ಇಚ್ಛೆಯನ್ನು ಇತ್ತೀಚೆಗೆ ಅವರು ವ್ಯಕ್ತಪಡಿಸಿದ್ದರು. ಸದ್ಯ, ಆ್ಯಮಿ ಬ್ರಿಟನ್​ನಲ್ಲಿಯೇ ಸೆಟಲ್​ ಆಗಿದ್ದಾರೆ.

ಇದನ್ನೂ ಓದಿ: ನನ್ನ ಕರೀಯರ್, ಬದುಕು ಮತ್ತು ವ್ಯವಹಾರವನ್ನು ಮಣ್ಣು ಪಾಲು ಮಾಡಿಬಿಟ್ಟೆ ಅಂತ ಕುಂದ್ರಾ ಮೇಲೆ ಕೂಗಾಡಿದರು ಶಿಲ್ಪಾ ಶೆಟ್ಟಿ

‘ಅಶ್ಲೀಲ ಸಿನಿಮಾದಲ್ಲಿ ನಟಿಸೋದು ತಪ್ಪು ಎಂದಿದ್ದು ಯಾರು?’ ಸಲ್ಮಾನ್​ ಖಾನ್​ ಮಾಜಿ ಪ್ರೇಯಸಿಯ ಖಡಕ್​ ಪ್ರಶ್ನೆ  

Published On - 6:39 pm, Wed, 28 July 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ