AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡುಗಡೆಗೆ ಸಜ್ಜಾಯಿತು ಕಿಶೋರ್ ನಟನೆಯ ‘ಅನಾಮಧೇಯ ಅಶೋಕ್ ಕುಮಾರ್’ ಸಿನಿಮಾ

ಟೈಟಲ್ ಕಾರಣದಿಂದಲೇ ‘ಅನಾಮಧೇಯ ಅಶೋಕ್ ಕುಮಾರ್’ ಸಿನಿಮಾ ಕೌತುಕ ಮೂಡಿಸಿದೆ. ಈ ಚಿತ್ರದಲ್ಲಿ ಕಿಶೋರ್​ ಕುಮಾರ್​, ಹರ್ಷಿಲ್ ಕೌಶಿಕ್ ಮುಂತಾದವರು ನಟಿಸಿದ್ದಾರೆ. ಸಾಗರ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಕಿಶೋರ್​ ಅವರು ಈ ಚಿತ್ರದಲ್ಲಿ ಪತ್ರಕರ್ತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯದಲ್ಲೇ ‘ಅನಾಮಧೇಯ ಅಶೋಕ್ ಕುಮಾರ್’ ಬಿಡುಗಡೆ ಆಗಲಿದೆ.

ಬಿಡುಗಡೆಗೆ ಸಜ್ಜಾಯಿತು ಕಿಶೋರ್ ನಟನೆಯ ‘ಅನಾಮಧೇಯ ಅಶೋಕ್ ಕುಮಾರ್’ ಸಿನಿಮಾ
Kishore Kumar, Harshil Koushik
ಮದನ್​ ಕುಮಾರ್​
|

Updated on: Jan 23, 2025 | 9:36 PM

Share

ಬಹುಭಾಷೆಯ ಸಿನಿಮಾಗಳ ಮೂಲಕ ದೇಶಾದ್ಯಂತ ಜನಪ್ರಿಯತೆ ಪಡೆದಿರುವ ಖ್ಯಾತ ಕಲಾವಿದ ಕಿಶೋರ್ ಕುಮಾರ್ ಮತ್ತು ‘ಆಚಾರ್ ಆ್ಯಂಡ್ ಕೋ’ ಸಿನಿಮಾದ ಮೂಲಕ ಗಮನ ಸೆಳೆದಿರುವ ಹರ್ಷಿಲ್ ಕೌಶಿಕ್ ಅವರು ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿರುವ ‘ಅನಾಮಧೇಯ ಅಶೋಕ್ ಕುಮಾರ್‌’ ಸಿನಿಮಾ ಬಗ್ಗೆ ಒಂದು ಅಪ್​ಡೇಟ್​ ಸಿಕ್ಕಿದೆ. ಸಾಗರ್ ಕುಮಾರ್ ಅವರು ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಈ ಸಿನಿಮಾ ಶೂಟಿಂಗ್ ಮುಕ್ತಾಯ ಆಗಿದೆ. ಅಲ್ಲದೇ, ಪೋಸ್ಟ್ ಪ್ರೊಡಕ್ಷನ್​ ಚಟುವಟಿಕೆಗಳು ಕೂಡ ಪೂರ್ಣವಾಗಿವೆ. ‘ಅನಾಮಧೇಯ ಅಶೋಕ್ ಕುಮಾರ್‌’ ಚಿತ್ರ ಈಗ ಬಿಡುಗಡೆಗೆ ಸಜ್ಜಾಗಿದೆ.

ಈ ಸಿನಿಮಾದಲ್ಲಿ ವಿಭಿನ್ನ ಕಥಾಹಂದರ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಮೋಷನ್ ಪೋಸ್ಟರ್ ಮೂಲಕ ಮೋಡಿ ಮಾಡಿರುವ ಈ ಸಿನಿಮಾ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಡೈರೆಕ್ಟರ್ ಸಾಗರ್ ಕುಮಾರ್ ಅವರೇ ಈ ಸಿನಿಮಾಗೆ ಕಥೆ ಬರೆದಿದ್ದಾರೆ. ಬೆನ್ನಿ ಥಾಮಸ್ ಮತ್ತು ಸಾಗರ್ ಕುಮಾರ್ ಅವರು ಚಿತ್ರಕಥೆ ಬರೆದಿದ್ದಾರೆ. ಮೂಲತಃ ಐಟಿ ಉದ್ಯೋಗಿ ಆಗಿರುವ ಸಾಗರ್ ಕುಮಾರ್ ಅವರಿಗೆ‌ ನಿರ್ದೇಶನದಲ್ಲಿ ಇದು ಮೊದಲ ಸಿನಿಮಾ.

‘ಅನಾಮಧೇಯ ಅಶೋಕ್ ಕುಮಾರ್‌’ ಸಿನಿಮಾದಲ್ಲಿ ಪತ್ರಕರ್ತನ ಪಾತ್ರವನನ್ನು ಕಿಶೋರ್ ಅವರು ನಿಭಾಯಿಸಿದ್ದಾರೆ. ಹರ್ಷಿಲ್ ಕೌಶಿಕ್ ಅವರು ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸುಧೀಂದ್ರನ್ ನಾಯರ್, ಕಾಂತರಾಜ್ ಕಡ್ಡಿಪುಡಿ ಮುಂತಾದ ಕಲಾವಿದರು ಪಾತ್ರವರ್ಗದಲ್ಲಿ ಇದ್ದಾರೆ. ಸುನೀಲ್ ಹೊನಳ್ಳಿ ಅವರು ಛಾಯಾಗ್ರಹಣ ಮಾಡಿದ್ದಾರೆ. ಕೆ. ಯೇಸು ಅವರು ಸಂಕಲನ ಮಾಡಿದ್ದಾರೆ.

ಇದನ್ನೂ ಓದಿ: ‘ತಾಯವ್ವ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ; ಹಾಡು ಬಿಡುಗಡೆ ಮಾಡಿದ ಸುದೀಪ್

ಈ ಸಿನಿಮಾದಲ್ಲಿನ ತಮ್ಮ ಪಾತ್ರದ ಕುರಿತು ಕಿಶೋರ್ ಕುಮಾರ್ ಅವರು ಮೆಚ್ಚುಗೆ ಸೂಚಿಸಿದ್ದಾರೆ‌. ‘ಈ ಸಿನಿಮಾ ನನ್ನ ಪಾತ್ರ ಕೂಡ ವಿಭಿನ್ನವಾಗಿದೆ’ ಎಂದು ನಟ ಹರ್ಷಿಲ್ ಕೌಶಿಕ್ ಹೇಳಿದ್ದಾರೆ. ಅವರು ನಟಿಸಿರುವ ಇನ್ನೆರಡು ಸಿನಿಮಾಗಳ ಚಿತ್ರೀಕರಣ ನಡೆಯುತ್ತಿದೆ. ‘ಅನಾಮಧೇಯ ಅಶೋಕ್ ಕುಮಾರ್‌’ ಸಿನಿಮಾವನ್ನು ಎಸ್‌.ಕೆ.ಎನ್. ಫಿಲ್ಮ್ಸ್ ಮೂಲಕ ನಿರ್ಮಲಾ ಕುಮಾರ್ ಮತ್ತು ರಮ್ಯಾ ಸಾಗರ್ ಕುಮಾರ್ ಅವರು ನಿರ್ಮಾಣ ಮಾಡಿದ್ದಾರೆ. ಕಿಶೋರ್ ಕುಮಾರ್ ಕೂಡ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಚಿತ್ರದಲ್ಲಿ 2 ಹಾಡುಗಳಿವೆ. ಆಜಾದ್ ಅವರು ಸಂಗೀತ ಸಂಯೋಜಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?