AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೇ ಅವಾರ್ಡ್ ಸಿಕ್ಕಷ್ಟು ಖುಷಿ ಇದೆ’; ಬಿಗ್ ಬಾಸ್ ವೇದಿಕೆ ಮೇಲೆ ಅನಂತ್ ನಾಗ್​ ನೆನೆದ ಸುದೀಪ್

ಭಾರತೀಯ ಸಿನಿಮಾ ರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡ ಚಿತ್ರರಂಗದಲ್ಲಿ ಸಂಭ್ರಮ ಮನೆ ಮಾಡಿದೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ವೇದಿಕೆಯಲ್ಲಿ ಅನಂತ್ ನಾಗ್ ಅವರಿಗೆ ಅಭಿನಂದನೆ ಸಲ್ಲಿಸಿದ್ದು, ಅವರ ಸಾಧನೆಗೆ ಗೌರವ ಸೂಚಿಸಿದ್ದಾರೆ. ಹಲವು ವರ್ಷಗಳ ಕಾಲ ನಡೆದ ಈ ಬೇಡಿಕೆ ಈಗ ಈಡೇರಿದೆ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

‘ನನಗೇ ಅವಾರ್ಡ್ ಸಿಕ್ಕಷ್ಟು ಖುಷಿ ಇದೆ’; ಬಿಗ್ ಬಾಸ್ ವೇದಿಕೆ ಮೇಲೆ ಅನಂತ್ ನಾಗ್​ ನೆನೆದ ಸುದೀಪ್
ಅನಂತ್ ನಾಗ್-ಸುದೀಪ್
TV9 Web
| Edited By: |

Updated on:Jan 26, 2025 | 6:40 PM

Share

ಅನಂತ್ ನಾಗ್ ಅವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಗೌರವ ನೀಡಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಾ ಇದ್ದಾರೆ. ಕಿಚ್ಚ ಸುದೀಪ್ ಅರು ಕೂಡ ಬಿಗ್ ಬಾಸ್ ವೇದಿಕೆ ಮೇಲೆ ಅನಂತ್ ನಾಗ್ ಅವರನ್ನು ನೆನಪಿಸಿಕೊಂಡರು. ಅವರಿಗೆ ಅವಾರ್ಡ್ ಸಿಕ್ಕಿದ್ದಕ್ಕೆ ತುಂಬಾನೇ ಖುಷಿ ಇದೆ ಎಂದು ಸುದೀಪ್ ಅವರು ಹೇಳಿದ್ದಾರೆ. ಲೇಟ್ ಆಗಿ ಬಂದರೂ ಲೇಟೆಸ್ಟ್ ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಿಚ್ಚ ಸುದೀಪ್ ಅವರಿಗೆ ಅನಂತ್ ನಾಗ್ ಎಂದರೆ ವಿಶೇಷ ಗೌರವ ಹಾಗೂ ಪ್ರೀತಿ ಇದೆ. ಸುದೀಪ್ ಅವರು ಅನಂತ್ ನಾಗ್ ಅವರನ್ನು ಸ್ಫೂರ್ತಿ ಆಗಿ ಇಟ್ಟುಕೊಂಡಿದ್ದಾರೆ. ಅನಂತ್ ನಾಗ್ ಅವರಿಗೆ ಪದ್ಮಭೂಷಣ ಸಿಗಬೇಕು ಎಂಬುದು ಈ ಮೊದಲಿನಿಂದಲೂ ಬರುತ್ತಿದ್ದ ಕೋರಿಕೆಗಳಲ್ಲಿ ಒಂದಾಗಿತ್ತು. ಇದಕ್ಕೆ ಈ ಮೊದಲು ಸುದೀಪ್ ಕೂಡ ಧ್ವನಿ ಗೂಡಿಸಿದ್ದರು. ಕೊನೆಗೂ ಕೋರಿಕೆ ಈಡೇರಿದೆ ಎಂದು ಸುದೀಪ್ ಹೇಳಿದ್ದಾರೆ.

‘ಅನಂತ್ ನಾಗ್ ಅವರಿಗೆ ಪದ್ಮಭೂಷಣ ಬಂದಿದೆ. ಇದು ಹಲವು ವರ್ಷಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ. ಬಹಳ ಲೇಟ್ ಆಗಿ ಬಂದಿದೆ. ಲೇಟ್ ಆಗ್ ಬಂದ್ರೂ ಲೇಟೆಸ್ಟ್ ಆಗಿದೆ’ ಎಂದು ಸುದೀಪ್ ಅವರು ಬಿಗ್ ಬಾಸ್ ವೇದಿಕೆ ಮೇಲೆ ಅನಂತ್ ನಾಗ್ ಅವರಿಗೆ ಅಭಿನಂದನೆ ತಿಳಿಸಿದರು.

‘ಅನಂತ್ ನಾಗ್ ಅವರಿಗೆ ಪದ್ಮಭೂಷಣ ಸಿಕ್ಕಿದ್ದು, ನನಗೆ ಸಿಕ್ಕಷ್ಟು ಖುಷಿ ಇದೆ. ವೈಯಕ್ತಿಕವಾಗಿ, ಬಿಗ್ ಬಾಸ್ ತಂಡದ ಕಡೆಯಿಂದ, ಕನ್ನಡದ ಜನತೆಯಿಂದ ನಿಮಗೆ ಅಭಿನಂದನೆಗಳು. ಕನ್ನಡ ಚಿತ್ರರಂಗಕ್ಕೆ ನೀವು ಕೊಟ್ಟ ಕೊಡುಗೆಗೆ ಧನ್ಯವಾದಗಳು. ಲವ್ ಯೂ’ ಎಂದು ಸುದೀಪ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಪದ್ಮಭೂಷಣ ಪ್ರಶಸ್ತಿಯನ್ನು ಕರ್ನಾಟಕ ಜನರಿಗೆ ಅರ್ಪಿಸಿದ ಅನಂತ್ ನಾಗ್

ಅನಂತ್ ನಾಗ್ ಅವರು ಕನ್ನಡ ಚಿತ್ರರಂಗಕ್ಕೆ ಹಾಗೂ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಹಲವಾರು ದಶಕಗಳಿಂದ ಅವರು ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ಅವರಿಗೆ ಪದ್ಮ ಅವಾರ್ಡ್ ಸಿಗಬೇಕು ಎಂಬ ಕೋರಿಕೆ ಮೊದಲಿನಿಂದಲೂ ಇತ್ತು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಕೊನೆಗೂ ಅವಾರ್ಡ್ ನೀಡಿ ಗೌರವಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:40 pm, Sun, 26 January 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್