ಅನಂತ್ ನಾಗ್​ಗೆ ಎಂದೆಂದಿಗೂ ಮರೆಯದಂಥ ಬರ್ತ್​ಡೇ; ಈ ಜನ್ಮದಿನ ಅವರಿಗೆ ಸಖತ್ ಸ್ಪೆಷಲ್

Anant Nag Birthday: 1979ರಲ್ಲಿ ಬಂದ ‘ನಾನಿನ್ನ ಬಿಡಲಾರೆ’ ಚಿತ್ರ ಸೂಪರ್ ಹಿಟ್ ಆಯಿತು. ಹಾರರ್ ಶೈಲಿಯಲ್ಲಿ ಮೂಡಿಬಂದ ಈ ಸಿನಿಮಾ ಜನಮೆಚ್ಚುಗೆ ಪಡೆಯಿತು. ಹೀರೋ ಆಗಿ ಮಿಂಚಿದ್ದ ಅನಂತ್ ನಾಗ್ ಅವರು ಇತ್ತೀಚೆಗೆ ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ‘ಕೆಜಿಎಫ್’ ಚಿತ್ರದಲ್ಲಿ ಅವರು ಮಾಡಿದ್ದ ಕಥೆಯ ನಿರೂಪಣೆ ಗಮನ ಸೆಳೆಯಿತು.

ಅನಂತ್ ನಾಗ್​ಗೆ ಎಂದೆಂದಿಗೂ ಮರೆಯದಂಥ ಬರ್ತ್​ಡೇ; ಈ ಜನ್ಮದಿನ ಅವರಿಗೆ ಸಖತ್ ಸ್ಪೆಷಲ್
ಅನಂತ್ ನಾಗ್
Follow us
|

Updated on:Sep 04, 2023 | 10:08 AM

ನಟ ಅನಂತ್ ನಾಗ್ (Anant Nag) ಅವರಿಗೆ ಇಂದು (ಸೆಪ್ಟೆಂಬರ್ 4) ಜನ್ಮದಿನ. ಎಲ್ಲರೂ ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರುತ್ತಿದ್ದಾರೆ. ಈ ವರ್ಷ ಅವರಿಗೆ ಜನ್ಮದಿನೋತ್ಸವ ಸಖತ್ ವಿಶೇಷ ಎನಿಸಿಕೊಂಡಿದೆ. ಇದಕ್ಕೆ ಕಾರಣ ಅವರು ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷ ಕಳೆದಿರುವುದು. ಹೀಗಾಗಿ, ಅವರಿಗೆ ಇದು ಎಂದೂ ಮರೆಯಲಾರದ ಜನ್ಮದಿನ ಆಗಿದೆ. ನಟನಿಗೆ ಆಯಸ್ಸು ಹಾಗೂ ಆರೋಗ್ಯವನ್ನು ದೇವರು ನೀಡಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಅನಂತ್ ನಾಗ್ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1973ರಲ್ಲಿ. ‘ಸಂಕಲ್ಪ’ ಅವರ ನಟನೆಯ ಮೊದಲ ಸಿನಿಮಾ. ಈ ಚಿತ್ರ ತೆರೆಗೆ ಬಂದು 50 ವರ್ಷ ಕಳೆದಿದೆ. ಐದು ದಶಕಗಳಲ್ಲಿ ನೂರಾರು ರೀತಿಯ ಪಾತ್ರಗಳನ್ನು ಮಾಡಿ ಅನಂತ್ ನಾಗ್ ಜನಮೆಚ್ಚುಗೆ ಪಡೆದಿದ್ದಾರೆ. ಹಾಸ್ಯ, ಗಂಭೀರ, ಪ್ರೇಮಕಥೆ, ಹಾರರ್, ಕಲಾತ್ಮಕ ಸಿನಿಮಾ ಸೇರಿ ಎಲ್ಲಾ ವಿಧದ ಚಿತ್ರಗಳಲ್ಲಿ ಅವರು ನಟಿಸಿ ಜನಮನ ಗೆದ್ದಿದ್ದಾರೆ.

1979ರಲ್ಲಿ ಬಂದ ‘ನಾನಿನ್ನ ಬಿಡಲಾರೆ’ ಚಿತ್ರ ಸೂಪರ್ ಹಿಟ್ ಆಯಿತು. ಹಾರರ್ ಶೈಲಿಯಲ್ಲಿ ಮೂಡಿಬಂದ ಈ ಸಿನಿಮಾ ಜನಮೆಚ್ಚುಗೆ ಪಡೆಯಿತು. ಹೀರೋ ಆಗಿ ಮಿಂಚಿದ್ದ ಅನಂತ್ ನಾಗ್ ಅವರು ಇತ್ತೀಚೆಗೆ ಪೋಷಕ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ‘ಕೆಜಿಎಫ್’ ಚಿತ್ರದಲ್ಲಿ ಅವರು ಮಾಡಿದ್ದ ಕಥೆಯ ನಿರೂಪಣೆ ಗಮನ ಸೆಳೆಯಿತು. ‘ಕೆಜಿಎಫ್’ ಚಿತ್ರ ಹಿಟ್ ಆಗಲು ಅವರ ನಿರೂಪಣೆಯೂ ಕಾರಣವಾಗಿತ್ತು. ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅವರು ಮಾಡಿದ ಅನಂತ್ ಪದ್ಮನಾಭ ಪಿ. ಪಾತ್ರ ಅನೇಕರಿಗೆ ಇಷ್ಟವಾಗಿದೆ. ಕವಲು ದಾರಿ ಚಿತ್ರದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯಾಗಿ ಅವರು ಗಮನ ಸೆಳೆದರು.

ಅನಂತ್ ನಾಗ್ ಅವರು ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಅನೇಕರು ಅವರಿಗೆ ಶುಭಾಶಯ ಕೋರುತ್ತಿದ್ದಾರೆ. ಹಲವು ಕಡೆಗಳಲ್ಲಿ ಅವರನ್ನು ಕರೆದು ಸನ್ಮಾನಿಸುವ ಕೆಲಸ ಕೂಡ ಆಗುತ್ತಿದೆ. ಅನಂತ್ ನಾಗ್ ಅವರು ಸದ್ಯ ಒಂದೆರಡು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರು ಎಲ್ಲರೊಂದಿಗೆ ಬೆರೆಯುವ ಗುಣ ಅನೇಕರಿಗೆ ಇಷ್ಟವಾಗುತ್ತದೆ.

ಇದನ್ನೂ ಓದಿ: ಹೆಂಡತಿ ಹೇಳಿದ್ದು ನಿಜ, ಹೌದು ನನಗೆ ಸಿಟ್ಟು ಜಾಸ್ತಿ: ಅನಂತ್ ನಾಗ್

ಅನಂತ್ ನಾಗ್ ಅವರು 1987ರಲ್ಲಿ ಗಾಯತ್ರಿ ಅವರನ್ನು ಮದುವೆ ಆದರು. ಗಾಯತ್ರಿ ಕೂಡ ಚಿತ್ರರಂಗದಲ್ಲಿ ಗುರುತಿಸಿಕೊಂಡವರು. ಮದುವೆ ಆದ ಬಳಿಕ ಅವರು ಸಿನಿಮಾ ಕೆಲಸಗಳಿಂದ ದೂರವೇ ಉಳಿದುಕೊಂಡಿದ್ದಾರೆ. ಪತಿಗೆ ಬೆಂಬಲವಾಗಿ ಅವರು ನಿಂತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:56 am, Mon, 4 September 23

CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
CM ಅರ್ಜಿ ಹೈಕೋರ್ಟ್‌ ವಜಾ; ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಮುಡಾ ತೀರ್ಪು: ಸಿಎಂ ಮನೆ ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತೆ ಲೈವ್​
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಫ್ಲಿಪ್​ಕಾರ್ಟ್​ ಬಿಗ್ ಬಿಲಿಯನ್ ಡೇ ಸೇಲ್​ ₹49,999ಕ್ಕೆ ಆ್ಯಪಲ್ ಐಫೋನ್ 15
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ