‘ನನ್ನ ಸಿನಿಮಾಗಳನ್ನೂ ನಾನು ನೋಡುವುದಿಲ್ಲ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ಅನಂತ್ ನಾಗ್

ಅನಂತ್ ನಾಗ್ ವೃತ್ತಿ ಬದುಕಿಗೆ ಐದು ದಶಕ ತುಂಬಿದೆ. ಈ ಅವಧಿಯಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರನ್ನು ಅರಸಿ ಬಂದಿವೆ.

‘ನನ್ನ ಸಿನಿಮಾಗಳನ್ನೂ ನಾನು ನೋಡುವುದಿಲ್ಲ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ಅನಂತ್ ನಾಗ್
ಅನಂತ್ ನಾಗ್
Follow us
|

Updated on:May 30, 2023 | 7:52 AM

ನಟ ಅನಂತ್ ನಾಗ್ (Anant Nag) ಅವರು ಚಿತ್ರರಂಗಕ್ಕೆ ಬಂದು ಬರೋಬ್ಬರಿ 50 ವರ್ಷ ಕಳೆದಿದೆ. ಇಷ್ಟಾದರೂ ಅವರು ತಮ್ಮ ಸೇವೆ ನಿಲ್ಲಿಸಿಲ್ಲ. ಒಳ್ಳೊಳ್ಳೆಯ ಪಾತ್ರಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರು ಮಾಡಿರುವ ಪಾತ್ರಗಳು ಈಗಲೂ ಗಮನ ಸೆಳೆಯುವಂಥದ್ದು. ಸಾಮಾನ್ಯವಾಗಿ ಸಿನಿಮಾ ರಿಲೀಸ್ ಆದ ಬಳಿಕ ಕಲಾವಿದರು ಸಿನಿಮಾ ನೋಡುತ್ತಾರೆ. ತೆರೆಮೇಲೆ ತಮ್ಮ ಪಾತ್ರ ಹೇಗೆ ಮೂಡಿ ಬಂದಿದೆ ಎಂಬುದನ್ನು ವಿಮರ್ಶೆ ಮಾಡುತ್ತಾರೆ. ಆದರೆ, ಅನಂತ್​ ನಾಗ್ ಅವರು ಈ ರೀತಿ ಮಾಡೋದಿಲ್ಲ. ಅವರು ಸಿನಿಮಾಗಳನ್ನು ನೋಡುವುದೇ ಇಲ್ಲ.

1973ರಲ್ಲಿ ರಿಲೀಸ್ ಆದ ‘ಸಂಕಲ್ಪ’ ಸಿನಿಮಾ ಅನಂತ್ ನಾಗ್ ನಟನೆಯ ಮೊದಲ ಸಿನಿಮಾ. ಈ ಚಿತ್ರ ರಿಲೀಸ್ ಆಗಿ ಬರೋಬ್ಬರಿ 50 ವರ್ಷ ಕಳೆದಿದೆ. ಅದೇ ರೀತಿ ಅನಂತ್ ನಾಗ್ ವೃತ್ತಿ ಬದುಕಿಗೂ ಐದು ದಶಕ ತುಂಬಿದೆ. ಈ ಅವಧಿಯಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರನ್ನು ಅರಸಿ ಬಂದಿವೆ. ಈ ಮಧ್ಯೆ ಅವರು ತಾವು ಸಿನಿಮಾಗಳನ್ನೇ ನೋಡುವುದಿಲ್ಲ ಎನ್ನುವ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರೋ ಅನಂತ್ ನಾಗ್, ‘ನಾನು ಸಿನಿಮಾಗಳನ್ನು ನೋಡುವುದೇ ಇಲ್ಲ. ನಾನು ನಟಿಸಿದ ಚಿತ್ರಗಳನ್ನೂ ಅಷ್ಟೇ. ನಾನು ಮಾಡಿದ ಕೆಲಸದ ತೀರ್ಪನ್ನು ನಾನೇ ನೀಡಲು ಸಾಧ್ಯವಿಲ್ಲ. ಪ್ರೇಕ್ಷಕರು ನನ್ನ ನಟನೆ ಹೇಗಿದೆ ಎಂಬುದನ್ನು ಅಳೆಯುತ್ತಾರೆ. ಅದು ನನಗೆ ಬೇಕಾಗಿರುವುದು. ಒಂದು ಪಾತ್ರದ ಮೂಲಕ ತಿಂಗಳುಗಟ್ಟಲೆ ಬದುಕಿರುವ ನನಗೆ, ಚಲನಚಿತ್ರವನ್ನು ನೋಡುವ ಮೂಲಕ ಅದನ್ನು ಮರುಪರಿಶೀಲಿಸುವ ಅವಶ್ಯಕತೆಯಿಲ್ಲ’ ಎನ್ನುತ್ತಾರೆ ಅನಂತ್ ನಾಗ್.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಎವರ್​ಗ್ರೀನ್ ಹೀರೋ ಅನಂತ್ ನಾಗ್ ನಡೆದು ಬಂದ ಹಾದಿ; ವಿಶೇಷ ಸಂದರ್ಶನ ಇಲ್ಲಿದೆ

2022ರಲ್ಲಿ ಅನಂತ್ ನಾಗ್ ನಟನೆಯ ‘ಗಾಳಿಪಟ 2’, ‘ತಿಮ್ಮಯ್ಯ & ತಿಮ್ಮಯ್ಯ’ ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅನಂತ್ ನಾಗ್ ಅವರು ‘ಮೈಸೂರು ಮಸಾಲ: ದಿ ಯುಎಫ್​ಒ ಇನ್ಸಿಡೆನ್ಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹಬ್ಬಿತ್ತು. ಆದರೆ ಅದು ನಿಜ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Tue, 30 May 23

ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ರಾಜೀನಾಮೆ ಬಗ್ಗೆ ಕಡ್ಡಿ ಮುರಿದಂತೆ ಮಾತನಾಡಿದ ಸಿದ್ದರಾಮಯ್ಯ
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರ ಲೋಕಾರ್ಪಣೆ, ನೌಕರರಿಗೆ ಬೋನಸ್
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ನಾನಿನ್ನೂ ಮಾತು ನಿಲ್ಲಿಸಿಲ್ಲ..ಸಡನ್ ಸಿಟ್ಟಾದ ಸಿದ್ರಾಮಯ್ಯ ನೋಡಿ DCM ಶಾಕ್​
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
ಜಾಮೀನಿಗೆ ಹೈಕೋರ್ಟ್​ನಲ್ಲಿ ದರ್ಶನ್ ಅರ್ಜಿ ಹಾಕೋದು ಯಾವಾಗ? ವಿವರಿಸಿದ ಲಾಯರ್
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
‘ಪಾಠ ಕಲಿಯಿರಿ’: ಪ್ರಕಾಶ್ ರೈ ವಿರುದ್ಧ ಪವನ್ ಕಲ್ಯಾಣ್ ತೀವ್ರ ಆಕ್ರೋಶ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
ಮುಂಬೈನಲ್ಲಿ ಆರ್ಭಟಿಸಿದ ಮಿಂಚು ಸಹಿತ ಭಾರೀ ಮಳೆ; ಭಯಾನಕ ದೃಶ್ಯ ಸೆರೆ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
‘ದರ್ಶನ್ ಮಾತ್ರವಲ್ಲ, ಬೇರೆ ಖೈದಿಗಳಿಗೂ ಮೂಲಸೌಕರ್ಯ ನೀಡಬೇಕು’: ಲಾಯರ್​ ಗರಂ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಸಿಎಂ ಪ್ರಾಸಿಕ್ಯೂಷನ್​ಗೆ ಹೈಕೋರ್ಟ್ ಅನುಮತಿ: ಹೆಚ್​ಡಿಕೆ ಅಚ್ಚರಿಯ ಹೇಳಿಕೆ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಅಮೆರಿಕ ಪ್ರವಾಸ ಫಲಪ್ರದವಾಗಿದೆ; ಯುಎಸ್​ ಭೇಟಿಯ ನೆನಪುಗಳ ಹಂಚಿಕೊಂಡ ಮೋದಿ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ
ಮಹಿಳಾ ಟಿ20 ವಿಶ್ವಕಪ್ 2024ರ ಆ್ಯಂಥಮ್ ಸಾಂಗ್ ಬಿಡುಗಡೆ