AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಸಿನಿಮಾಗಳನ್ನೂ ನಾನು ನೋಡುವುದಿಲ್ಲ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ಅನಂತ್ ನಾಗ್

ಅನಂತ್ ನಾಗ್ ವೃತ್ತಿ ಬದುಕಿಗೆ ಐದು ದಶಕ ತುಂಬಿದೆ. ಈ ಅವಧಿಯಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರನ್ನು ಅರಸಿ ಬಂದಿವೆ.

‘ನನ್ನ ಸಿನಿಮಾಗಳನ್ನೂ ನಾನು ನೋಡುವುದಿಲ್ಲ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ಅನಂತ್ ನಾಗ್
ಅನಂತ್ ನಾಗ್
ರಾಜೇಶ್ ದುಗ್ಗುಮನೆ
|

Updated on:May 30, 2023 | 7:52 AM

Share

ನಟ ಅನಂತ್ ನಾಗ್ (Anant Nag) ಅವರು ಚಿತ್ರರಂಗಕ್ಕೆ ಬಂದು ಬರೋಬ್ಬರಿ 50 ವರ್ಷ ಕಳೆದಿದೆ. ಇಷ್ಟಾದರೂ ಅವರು ತಮ್ಮ ಸೇವೆ ನಿಲ್ಲಿಸಿಲ್ಲ. ಒಳ್ಳೊಳ್ಳೆಯ ಪಾತ್ರಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರು ಮಾಡಿರುವ ಪಾತ್ರಗಳು ಈಗಲೂ ಗಮನ ಸೆಳೆಯುವಂಥದ್ದು. ಸಾಮಾನ್ಯವಾಗಿ ಸಿನಿಮಾ ರಿಲೀಸ್ ಆದ ಬಳಿಕ ಕಲಾವಿದರು ಸಿನಿಮಾ ನೋಡುತ್ತಾರೆ. ತೆರೆಮೇಲೆ ತಮ್ಮ ಪಾತ್ರ ಹೇಗೆ ಮೂಡಿ ಬಂದಿದೆ ಎಂಬುದನ್ನು ವಿಮರ್ಶೆ ಮಾಡುತ್ತಾರೆ. ಆದರೆ, ಅನಂತ್​ ನಾಗ್ ಅವರು ಈ ರೀತಿ ಮಾಡೋದಿಲ್ಲ. ಅವರು ಸಿನಿಮಾಗಳನ್ನು ನೋಡುವುದೇ ಇಲ್ಲ.

1973ರಲ್ಲಿ ರಿಲೀಸ್ ಆದ ‘ಸಂಕಲ್ಪ’ ಸಿನಿಮಾ ಅನಂತ್ ನಾಗ್ ನಟನೆಯ ಮೊದಲ ಸಿನಿಮಾ. ಈ ಚಿತ್ರ ರಿಲೀಸ್ ಆಗಿ ಬರೋಬ್ಬರಿ 50 ವರ್ಷ ಕಳೆದಿದೆ. ಅದೇ ರೀತಿ ಅನಂತ್ ನಾಗ್ ವೃತ್ತಿ ಬದುಕಿಗೂ ಐದು ದಶಕ ತುಂಬಿದೆ. ಈ ಅವಧಿಯಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರನ್ನು ಅರಸಿ ಬಂದಿವೆ. ಈ ಮಧ್ಯೆ ಅವರು ತಾವು ಸಿನಿಮಾಗಳನ್ನೇ ನೋಡುವುದಿಲ್ಲ ಎನ್ನುವ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರೋ ಅನಂತ್ ನಾಗ್, ‘ನಾನು ಸಿನಿಮಾಗಳನ್ನು ನೋಡುವುದೇ ಇಲ್ಲ. ನಾನು ನಟಿಸಿದ ಚಿತ್ರಗಳನ್ನೂ ಅಷ್ಟೇ. ನಾನು ಮಾಡಿದ ಕೆಲಸದ ತೀರ್ಪನ್ನು ನಾನೇ ನೀಡಲು ಸಾಧ್ಯವಿಲ್ಲ. ಪ್ರೇಕ್ಷಕರು ನನ್ನ ನಟನೆ ಹೇಗಿದೆ ಎಂಬುದನ್ನು ಅಳೆಯುತ್ತಾರೆ. ಅದು ನನಗೆ ಬೇಕಾಗಿರುವುದು. ಒಂದು ಪಾತ್ರದ ಮೂಲಕ ತಿಂಗಳುಗಟ್ಟಲೆ ಬದುಕಿರುವ ನನಗೆ, ಚಲನಚಿತ್ರವನ್ನು ನೋಡುವ ಮೂಲಕ ಅದನ್ನು ಮರುಪರಿಶೀಲಿಸುವ ಅವಶ್ಯಕತೆಯಿಲ್ಲ’ ಎನ್ನುತ್ತಾರೆ ಅನಂತ್ ನಾಗ್.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಎವರ್​ಗ್ರೀನ್ ಹೀರೋ ಅನಂತ್ ನಾಗ್ ನಡೆದು ಬಂದ ಹಾದಿ; ವಿಶೇಷ ಸಂದರ್ಶನ ಇಲ್ಲಿದೆ

2022ರಲ್ಲಿ ಅನಂತ್ ನಾಗ್ ನಟನೆಯ ‘ಗಾಳಿಪಟ 2’, ‘ತಿಮ್ಮಯ್ಯ & ತಿಮ್ಮಯ್ಯ’ ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅನಂತ್ ನಾಗ್ ಅವರು ‘ಮೈಸೂರು ಮಸಾಲ: ದಿ ಯುಎಫ್​ಒ ಇನ್ಸಿಡೆನ್ಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹಬ್ಬಿತ್ತು. ಆದರೆ ಅದು ನಿಜ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Tue, 30 May 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ