AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಸಿನಿಮಾಗಳನ್ನೂ ನಾನು ನೋಡುವುದಿಲ್ಲ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ಅನಂತ್ ನಾಗ್

ಅನಂತ್ ನಾಗ್ ವೃತ್ತಿ ಬದುಕಿಗೆ ಐದು ದಶಕ ತುಂಬಿದೆ. ಈ ಅವಧಿಯಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರನ್ನು ಅರಸಿ ಬಂದಿವೆ.

‘ನನ್ನ ಸಿನಿಮಾಗಳನ್ನೂ ನಾನು ನೋಡುವುದಿಲ್ಲ’; ಅಚ್ಚರಿಯ ವಿಚಾರ ಬಿಚ್ಚಿಟ್ಟ ಅನಂತ್ ನಾಗ್
ಅನಂತ್ ನಾಗ್
ರಾಜೇಶ್ ದುಗ್ಗುಮನೆ
|

Updated on:May 30, 2023 | 7:52 AM

Share

ನಟ ಅನಂತ್ ನಾಗ್ (Anant Nag) ಅವರು ಚಿತ್ರರಂಗಕ್ಕೆ ಬಂದು ಬರೋಬ್ಬರಿ 50 ವರ್ಷ ಕಳೆದಿದೆ. ಇಷ್ಟಾದರೂ ಅವರು ತಮ್ಮ ಸೇವೆ ನಿಲ್ಲಿಸಿಲ್ಲ. ಒಳ್ಳೊಳ್ಳೆಯ ಪಾತ್ರಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರು ಮಾಡಿರುವ ಪಾತ್ರಗಳು ಈಗಲೂ ಗಮನ ಸೆಳೆಯುವಂಥದ್ದು. ಸಾಮಾನ್ಯವಾಗಿ ಸಿನಿಮಾ ರಿಲೀಸ್ ಆದ ಬಳಿಕ ಕಲಾವಿದರು ಸಿನಿಮಾ ನೋಡುತ್ತಾರೆ. ತೆರೆಮೇಲೆ ತಮ್ಮ ಪಾತ್ರ ಹೇಗೆ ಮೂಡಿ ಬಂದಿದೆ ಎಂಬುದನ್ನು ವಿಮರ್ಶೆ ಮಾಡುತ್ತಾರೆ. ಆದರೆ, ಅನಂತ್​ ನಾಗ್ ಅವರು ಈ ರೀತಿ ಮಾಡೋದಿಲ್ಲ. ಅವರು ಸಿನಿಮಾಗಳನ್ನು ನೋಡುವುದೇ ಇಲ್ಲ.

1973ರಲ್ಲಿ ರಿಲೀಸ್ ಆದ ‘ಸಂಕಲ್ಪ’ ಸಿನಿಮಾ ಅನಂತ್ ನಾಗ್ ನಟನೆಯ ಮೊದಲ ಸಿನಿಮಾ. ಈ ಚಿತ್ರ ರಿಲೀಸ್ ಆಗಿ ಬರೋಬ್ಬರಿ 50 ವರ್ಷ ಕಳೆದಿದೆ. ಅದೇ ರೀತಿ ಅನಂತ್ ನಾಗ್ ವೃತ್ತಿ ಬದುಕಿಗೂ ಐದು ದಶಕ ತುಂಬಿದೆ. ಈ ಅವಧಿಯಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರನ್ನು ಅರಸಿ ಬಂದಿವೆ. ಈ ಮಧ್ಯೆ ಅವರು ತಾವು ಸಿನಿಮಾಗಳನ್ನೇ ನೋಡುವುದಿಲ್ಲ ಎನ್ನುವ ಅಚ್ಚರಿಯ ವಿಚಾರ ಬಿಚ್ಚಿಟ್ಟಿದ್ದಾರೆ.

ಬೆಂಗಳೂರು ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರೋ ಅನಂತ್ ನಾಗ್, ‘ನಾನು ಸಿನಿಮಾಗಳನ್ನು ನೋಡುವುದೇ ಇಲ್ಲ. ನಾನು ನಟಿಸಿದ ಚಿತ್ರಗಳನ್ನೂ ಅಷ್ಟೇ. ನಾನು ಮಾಡಿದ ಕೆಲಸದ ತೀರ್ಪನ್ನು ನಾನೇ ನೀಡಲು ಸಾಧ್ಯವಿಲ್ಲ. ಪ್ರೇಕ್ಷಕರು ನನ್ನ ನಟನೆ ಹೇಗಿದೆ ಎಂಬುದನ್ನು ಅಳೆಯುತ್ತಾರೆ. ಅದು ನನಗೆ ಬೇಕಾಗಿರುವುದು. ಒಂದು ಪಾತ್ರದ ಮೂಲಕ ತಿಂಗಳುಗಟ್ಟಲೆ ಬದುಕಿರುವ ನನಗೆ, ಚಲನಚಿತ್ರವನ್ನು ನೋಡುವ ಮೂಲಕ ಅದನ್ನು ಮರುಪರಿಶೀಲಿಸುವ ಅವಶ್ಯಕತೆಯಿಲ್ಲ’ ಎನ್ನುತ್ತಾರೆ ಅನಂತ್ ನಾಗ್.

ಇದನ್ನೂ ಓದಿ: ಕನ್ನಡ ಚಿತ್ರರಂಗದ ಎವರ್​ಗ್ರೀನ್ ಹೀರೋ ಅನಂತ್ ನಾಗ್ ನಡೆದು ಬಂದ ಹಾದಿ; ವಿಶೇಷ ಸಂದರ್ಶನ ಇಲ್ಲಿದೆ

2022ರಲ್ಲಿ ಅನಂತ್ ನಾಗ್ ನಟನೆಯ ‘ಗಾಳಿಪಟ 2’, ‘ತಿಮ್ಮಯ್ಯ & ತಿಮ್ಮಯ್ಯ’ ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅನಂತ್ ನಾಗ್ ಅವರು ‘ಮೈಸೂರು ಮಸಾಲ: ದಿ ಯುಎಫ್​ಒ ಇನ್ಸಿಡೆನ್ಸ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹಬ್ಬಿತ್ತು. ಆದರೆ ಅದು ನಿಜ ಆಗಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:33 am, Tue, 30 May 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ