AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anant Nag Birthday: ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್​; ಹುಟ್ಟುಹಬ್ಬಕ್ಕೆ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ

Happy Birthday Anant Nag: ಉದ್ಯಮಿ ವಿಜಯ ಸಂಕೇಶ್ವರ ಅವರ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ವಿಜಯಾನಂದ’ ಚಿತ್ರದಲ್ಲಿ ಅನಂತ್ ನಾಗ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಫಸ್ಟ್​ಲುಕ್​ ಬಿಡುಗಡೆ ಮಾಡುವ ಮೂಲಕ ಅವರಿಗೆ ಬರ್ತ್​ಡೇ ವಿಶ್​ ಮಾಡಲಾಗಿದೆ.

Anant Nag Birthday: ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್​; ಹುಟ್ಟುಹಬ್ಬಕ್ಕೆ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ
ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್
TV9 Web
| Edited By: |

Updated on: Sep 04, 2021 | 12:16 PM

Share

ಭಾರತೀಯ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್​ ಅವರಿಗೆ ಇಂದು (ಸೆ.4) ಜನ್ಮದಿನದ ಸಂಭ್ರಮ. ಅಪಾರ ಸಂಖ್ಯೆಯ ಅಭಿಮಾನಿಗಳು ಅವರಿಗೆ ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. 74ರ ಪ್ರಾಯದಲ್ಲೂ ಅನಂತ್​ ನಾಗ್​ ಹಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಸಾಲಿಗೆ ಈಗ ಇನ್ನೊಂದು ಬಹುನಿರೀಕ್ಷಿತ ಚಿತ್ರ ಕೂಡ ಸೇರ್ಪಡೆ ಆಗಿದೆ. ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ವಿಜಯಾನಂದ’ ಚಿತ್ರದಲ್ಲಿ ಅನಂತ್ ನಾಗ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಅವರ ಫಸ್ಟ್​ಲುಕ್​ ಪೋಸ್ಟ್​ ರಿಲೀಸ್​ ಮಾಡಲಾಗಿದೆ.

ಸಾರಿಗೆ ಉದ್ಯಮದಲ್ಲಿ ವಿಜಯ ಸಂಕೇಶ್ವರ ಅವರ ಸಾಧನೆ ಅಪಾರ. ಅವರ ಪಾತ್ರದಲ್ಲಿ ನಿಹಾಲ್​ ನಟಿಸುತ್ತಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅನಂತ್​ ನಾಗ್​ಗೆ ಯಾವ ಪಾತ್ರ? ಅದಕ್ಕೂ ಉತ್ತರವಿದೆ. ವಿಜಯ ಸಂಕೇಶ್ವರ ಅವರ ತಂದೆ ಬಿ.ಜಿ. ಸಂಕೇಶ್ವರ್​ ಪಾತ್ರದಲ್ಲಿ ಅನಂತ್​ ನಾಗ್​ ಕಾಣಿಸಿಕೊಳ್ಳಲಿದ್ದಾರೆ. ಫಸ್ಟ್​ಲುಕ್​ ಬಿಡುಗಡೆ ಮಾಡುವ ಮೂಲಕ ಅವರಿಗೆ ‘ವಿಜಯಾನಂದ’ ಸಿನಿಮಾ ತಂಡ ಬರ್ತ್​ಡೇ ವಿಶ್​ ಮಾಡಿದೆ.

ಈ ಚಿತ್ರಕ್ಕೆ ನಿರ್ದೇಶಕಿ ರಿಷಿಕಾ ಶರ್ಮಾ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಗೋಪಿ ಸುಂದರ್​ ಸಂಗೀತ ನಿರ್ದೇಶನ, ಕೀರ್ತನ್​ ಪೂಜಾರಿ ಛಾಯಾಗ್ರಹಣ, ಹೇಮಂತ್​ ಕುಮಾರ್​ ಡಿ. ಸಂಕಲನ, ರಘು ನಿಡುವಳ್ಳಿ ಸಂಭಾಷಣೆ, ಇಮ್ರಾನ್​ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರತಂಡಕ್ಕೆ ಅನಂತ್​ ನಾಗ್​ ಸೇರ್ಪಡೆ ಆಗಿರುವುದರಿಂದ ‘ವಿಜಯಾನಂದ’ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಅನಂತ್​ ನಾಗ್​ ಅವರಿಗೆ ಜನ್ಮದಿನದ ಶುಭ ಕೋರುತ್ತಿದ್ದಾರೆ. ಅನಂತ್​ ನಾಗ್​ಗೆ ಪದ್ಮ ಪ್ರಶಸ್ತಿ ಲಭಿಸಬೇಕು ಎಂಬುದು ಕನ್ನಡ ಅಭಿಮಾನಿಗಳ ಬಯಕೆ. ಅದಕ್ಕಾಗಿ ಇತ್ತೀಚೆಗೆ ‘ಅನಂತ್ ಫಾರ್ ಪದ್ಮ’ ಎಂಬ ಅಭಿಯಾನವನ್ನೂ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಕನ್ನಡ ಚಿತ್ರರಂಗ ಅಭೂತಪೂರ್ವವಾಗಿ ಬೆಂಬಲಿಸಿತ್ತು. ಅದರ ಭಾಗವಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಯುಟ್ಯೂಬ್ ಚಾನಲ್​ನಲ್ಲಿ ಅನಂತ್ ನಾಗ್ ಕುರಿತಂತೆ ಸಾಕ್ಷ್ಯಚಿತ್ರವೊಂದನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ:

ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’

Anant Nag: ಅನಂತ್​ ನಾಗ್​ ಬಗ್ಗೆ ನಿಮಗೆಷ್ಟು ಗೊತ್ತು? ಲೆಜೆಂಡರಿ ನಟನ ಬಗ್ಗೆ ರಿಷಬ್​ ಶೆಟ್ಟಿ ಟೀಮ್​ ಮಾಡಿದ ಡಾಕ್ಯುಮೆಂಟರಿ ಇಲ್ಲಿದೆ

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು