AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anant Nag Birthday: ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್​; ಹುಟ್ಟುಹಬ್ಬಕ್ಕೆ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ

Happy Birthday Anant Nag: ಉದ್ಯಮಿ ವಿಜಯ ಸಂಕೇಶ್ವರ ಅವರ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ವಿಜಯಾನಂದ’ ಚಿತ್ರದಲ್ಲಿ ಅನಂತ್ ನಾಗ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಫಸ್ಟ್​ಲುಕ್​ ಬಿಡುಗಡೆ ಮಾಡುವ ಮೂಲಕ ಅವರಿಗೆ ಬರ್ತ್​ಡೇ ವಿಶ್​ ಮಾಡಲಾಗಿದೆ.

Anant Nag Birthday: ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್​; ಹುಟ್ಟುಹಬ್ಬಕ್ಕೆ ಫಸ್ಟ್​ಲುಕ್​ ಪೋಸ್ಟರ್​ ಬಿಡುಗಡೆ
ವಿಜಯ ಸಂಕೇಶ್ವರ ಬಯೋಪಿಕ್​ನಲ್ಲಿ ಅನಂತ್​ ನಾಗ್
TV9 Web
| Edited By: |

Updated on: Sep 04, 2021 | 12:16 PM

Share

ಭಾರತೀಯ ಚಿತ್ರರಂಗದ ಹಿರಿಯ ನಟ ಅನಂತ್​ ನಾಗ್​ ಅವರಿಗೆ ಇಂದು (ಸೆ.4) ಜನ್ಮದಿನದ ಸಂಭ್ರಮ. ಅಪಾರ ಸಂಖ್ಯೆಯ ಅಭಿಮಾನಿಗಳು ಅವರಿಗೆ ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. 74ರ ಪ್ರಾಯದಲ್ಲೂ ಅನಂತ್​ ನಾಗ್​ ಹಲವು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಸಾಲಿಗೆ ಈಗ ಇನ್ನೊಂದು ಬಹುನಿರೀಕ್ಷಿತ ಚಿತ್ರ ಕೂಡ ಸೇರ್ಪಡೆ ಆಗಿದೆ. ಖ್ಯಾತ ಉದ್ಯಮಿ ವಿಜಯ ಸಂಕೇಶ್ವರ ಅವರ ಬಯೋಪಿಕ್​ ಆಗಿ ಮೂಡಿಬರುತ್ತಿರುವ ‘ವಿಜಯಾನಂದ’ ಚಿತ್ರದಲ್ಲಿ ಅನಂತ್ ನಾಗ್​ ಕೂಡ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಅವರ ಫಸ್ಟ್​ಲುಕ್​ ಪೋಸ್ಟ್​ ರಿಲೀಸ್​ ಮಾಡಲಾಗಿದೆ.

ಸಾರಿಗೆ ಉದ್ಯಮದಲ್ಲಿ ವಿಜಯ ಸಂಕೇಶ್ವರ ಅವರ ಸಾಧನೆ ಅಪಾರ. ಅವರ ಪಾತ್ರದಲ್ಲಿ ನಿಹಾಲ್​ ನಟಿಸುತ್ತಿದ್ದಾರೆ. ಹಾಗಾದರೆ ಈ ಸಿನಿಮಾದಲ್ಲಿ ಅನಂತ್​ ನಾಗ್​ಗೆ ಯಾವ ಪಾತ್ರ? ಅದಕ್ಕೂ ಉತ್ತರವಿದೆ. ವಿಜಯ ಸಂಕೇಶ್ವರ ಅವರ ತಂದೆ ಬಿ.ಜಿ. ಸಂಕೇಶ್ವರ್​ ಪಾತ್ರದಲ್ಲಿ ಅನಂತ್​ ನಾಗ್​ ಕಾಣಿಸಿಕೊಳ್ಳಲಿದ್ದಾರೆ. ಫಸ್ಟ್​ಲುಕ್​ ಬಿಡುಗಡೆ ಮಾಡುವ ಮೂಲಕ ಅವರಿಗೆ ‘ವಿಜಯಾನಂದ’ ಸಿನಿಮಾ ತಂಡ ಬರ್ತ್​ಡೇ ವಿಶ್​ ಮಾಡಿದೆ.

ಈ ಚಿತ್ರಕ್ಕೆ ನಿರ್ದೇಶಕಿ ರಿಷಿಕಾ ಶರ್ಮಾ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಗೋಪಿ ಸುಂದರ್​ ಸಂಗೀತ ನಿರ್ದೇಶನ, ಕೀರ್ತನ್​ ಪೂಜಾರಿ ಛಾಯಾಗ್ರಹಣ, ಹೇಮಂತ್​ ಕುಮಾರ್​ ಡಿ. ಸಂಕಲನ, ರಘು ನಿಡುವಳ್ಳಿ ಸಂಭಾಷಣೆ, ಇಮ್ರಾನ್​ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರತಂಡಕ್ಕೆ ಅನಂತ್​ ನಾಗ್​ ಸೇರ್ಪಡೆ ಆಗಿರುವುದರಿಂದ ‘ವಿಜಯಾನಂದ’ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಅನಂತ್​ ನಾಗ್​ ಅವರಿಗೆ ಜನ್ಮದಿನದ ಶುಭ ಕೋರುತ್ತಿದ್ದಾರೆ. ಅನಂತ್​ ನಾಗ್​ಗೆ ಪದ್ಮ ಪ್ರಶಸ್ತಿ ಲಭಿಸಬೇಕು ಎಂಬುದು ಕನ್ನಡ ಅಭಿಮಾನಿಗಳ ಬಯಕೆ. ಅದಕ್ಕಾಗಿ ಇತ್ತೀಚೆಗೆ ‘ಅನಂತ್ ಫಾರ್ ಪದ್ಮ’ ಎಂಬ ಅಭಿಯಾನವನ್ನೂ ಹಮ್ಮಿಕೊಳ್ಳಲಾಗಿತ್ತು. ಇದಕ್ಕೆ ಕನ್ನಡ ಚಿತ್ರರಂಗ ಅಭೂತಪೂರ್ವವಾಗಿ ಬೆಂಬಲಿಸಿತ್ತು. ಅದರ ಭಾಗವಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಯುಟ್ಯೂಬ್ ಚಾನಲ್​ನಲ್ಲಿ ಅನಂತ್ ನಾಗ್ ಕುರಿತಂತೆ ಸಾಕ್ಷ್ಯಚಿತ್ರವೊಂದನ್ನು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ:

ಮತ್ತೆ ಒಂದಾದ ರಕ್ಷಿತ್​ ಶೆಟ್ಟಿ-ಅನಂತ್​ ನಾಗ್​; ಈ ಬಾರಿ ನಡೆಯಲಿದೆ ‘ಆಬ್ರಕಡಾಬ್ರ’

Anant Nag: ಅನಂತ್​ ನಾಗ್​ ಬಗ್ಗೆ ನಿಮಗೆಷ್ಟು ಗೊತ್ತು? ಲೆಜೆಂಡರಿ ನಟನ ಬಗ್ಗೆ ರಿಷಬ್​ ಶೆಟ್ಟಿ ಟೀಮ್​ ಮಾಡಿದ ಡಾಕ್ಯುಮೆಂಟರಿ ಇಲ್ಲಿದೆ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ