Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Bhat: ‘ಪ್ರೀತಿ ಎಂದರೇನು’ ಮ್ಯೂಸಿಕ್​ ವಿಡಿಯೋ ಮೂಲಕ ಗಮನ ಸೆಳೆದ ಅನನ್ಯಾ ಭಟ್​, ಹೃದಯ ಶಿವ

ಹೃದಯ ಶಿವ ಅವರ ಯೂಟ್ಯೂಬ್​ ಚಾನೆಲ್​ನಲ್ಲಿ ಜೂ.8ರಂದು ‘ಪ್ರೀತಿ ಎಂದರೇನು..’ ಹಾಡು ರಿಲೀಸ್​ ಆಗಿದೆ. ‘ಸೋಜುಗಾದ ಸೂಜು ಮಲ್ಲಿಗೆ..’ ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಅನನ್ಯಾ ಭಟ್​ ಅವರ ಕಂಠದಲ್ಲಿ ಈ ಹೊಸ ಗೀತೆ ಮೂಡಿಬಂದಿದೆ.

Ananya Bhat: ‘ಪ್ರೀತಿ ಎಂದರೇನು’ ಮ್ಯೂಸಿಕ್​ ವಿಡಿಯೋ ಮೂಲಕ ಗಮನ ಸೆಳೆದ ಅನನ್ಯಾ ಭಟ್​, ಹೃದಯ ಶಿವ
ಗಾಯಕಿ ಅನನ್ಯಾ ಭಟ್​
Follow us
ಮದನ್​ ಕುಮಾರ್​
|

Updated on:Jun 08, 2021 | 6:47 PM

ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಮ್ಯೂಸಿಕ್​ ವಿಡಿಯೋಗಳು ದೊಡ್ಡ ಟ್ರೆಂಡ್​ ಸೆಟ್​ ಮಾಡಿವೆ. ಆದರೆ ಕನ್ನಡದಲ್ಲಿ ಅವುಗಳ ಸಂಖ್ಯೆ ಕಡಿಮೆ ಎನ್ನಬಹುದು. ಕೆಲವೇ ಕೆಲವು ಮಂದಿ ಮಾತ್ರ ಮ್ಯೂಸಿಕ್​ ವಿಡಿಯೋಗಳ ಮೂಲಕ ಜನಮನ ಗೆದ್ದಿದ್ದಾರೆ. ಅದೇ ಸಾಲಿನಲ್ಲಿ ಗೀತರಚನಾಕಾರ ಹೃದಯ ಶಿವ ಒಂದು ಪ್ರಯತ್ನ ಮಾಡಿದ್ದಾರೆ. ಅವರು ನಿರ್ಮಿಸಿ, ನಿರ್ದೇಶಿಸಿರುವ ‘ಪ್ರೀತಿ ಎಂದರೇನು..’ ಎಂಬ ಹೊಸ ಹಾಡು ಬಿಡುಗಡೆ ಆಗಿದೆ. ಈ ಗೀತೆಗೆ ಖ್ಯಾತ ಗಾಯಕಿ ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್​ ಹಿಟ್​ ಗೀತೆಗಳನ್ನು ನೀಡಿದವರು ಹೃದಯ ಶಿವ. ‘ಮುಂಗಾರು ಮಳೆ’ ಚಿತ್ರದ ‘ಇವನು ಗೆಳಯನಲ್ಲ..’ ಹಾಡಿನಿಂದ ಹಿಡಿದು ‘ರಾಜು ಕನ್ನಡ ಮೀಡಿಯಂ’ ಸಿನಿಮಾದ ‘ಕೊಡೆಯೊಂದರ ಅಡಿಯಲ್ಲಿ ನಿಮ್ಮಿಬ್ಬರ ಪಯಣ..’ ಹಾಡಿನವರೆಗೆ ಹಲವಾರು ಸುಮಧುರ ಗೀತೆಗಳಿಗೆ ಸಾಹಿತ್ಯ ಬರೆದ ಹೃದಯ ಶಿವ ಅವರು ಈಗ ಹೊಸ ಹಾಡು ಬಿಡುಗಡೆ ಮಾಡಿದ್ದಾರೆ.

‘ಹೃದಯ ಶಿವ’ ಯೂಟ್ಯೂಬ್​ ಚಾನೆಲ್​ನಲ್ಲಿ ಜೂ.8ರಂದು ‘ಪ್ರೀತಿ ಎಂದರೇನು’ ಹಾಡು ರಿಲೀಸ್​ ಆಗಿದೆ. ಇದರಲ್ಲಿ ಹೊಸ ಪ್ರತಿಭೆಗಳಾದ ಸಿತಾರಾ ರಾವಲ್​ ಮತ್ತು ನಿಶ್ಚಲ್​ ನಟಿಸಿದ್ದಾರೆ. ‘ಸೋಜುಗಾದ ಸೂಜು ಮಲ್ಲಿಗೆ’ ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಅನನ್ಯಾ ಭಟ್​ ಅವರ ಕಂಠದಲ್ಲಿ ಈ ‘ಪ್ರೀತಿ ಎಂದರೇನು’ ಗೀತೆ ಮೂಡಿಬಂದಿದೆ. ಹಿಂದಿ ಅವತರಣಿಕೆಯಲ್ಲೂ ಹಾಡು ಸಿದ್ಧವಾಗಿದ್ದು, ಅದನ್ನೂ ಅನನ್ಯಾ ಭಟ್​ ಹಾಡಿದ್ದಾರೆ. ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತವನ್ನು ಕೂಡ ಹೃದಯ ಶಿವ ಅವರೇ ನೀಡಿದ್ದಾರೆ.

‘ಒಂದಷ್ಟು ಹಾಡನ್ನು ಸೇರಿಸಿ ಒಂದು ಆಲ್ಬಂ ಮಾಡೋಣ ಅಂದುಕೊಂಡಿದ್ವಿ. ಕಡೆಗೆ ಸಿಂಗಲ್​ ಮ್ಯೂಸಿಕ್​ ವಿಡಿಯೋ ಮಾಡಲು ನಿರ್ಧರಿಸಿದೆವು. ಕನ್ನಡ ಮತ್ತು ಹಿಂದಿ ಎರಡೂ ವರ್ಷನ್​ನಲ್ಲಿ ಬಿಡುಗಡೆ ಮಾಡಿದ್ದೇವೆ. ನಟಿಸಿರುವ ಕಲಾವಿದರು ಇಬ್ಬರೂ ಹೊಸಬರು’ ಎಂದು ಹೇಳಿರುವ ಹೃದಯ ಶಿವ ಅವರು, ಈ ಸಿಂಗಲ್​ ಮ್ಯೂಸಿಕ್​ ವಿಡಿಯೋ ಮೂಲಕ ಒಂದು ಕಥೆ ಕಟ್ಟಿಕೊಟ್ಟಿದ್ದಾರೆ.

‘ಮೆಟಫರ್​ ಮೀಡಿಯಾ ಹೌಸ್​’ ಬ್ಯಾನರ್​ ಮೂಲಕ ಈ ಹಾಡನ್ನು ಹೃದಯ ಶಿವ ಅವರು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಇದೇ ಬ್ಯಾನರ್​ನಿಂದ ಇನ್ನಷ್ಟು ಹೊಸ ಪ್ರಯತ್ನಗಳನ್ನು ಮಾಡಲು ಅವರು ತಯಾರಿ ನಡೆಸಿದ್ದಾರೆ. ಸಿನಿಮಾ ನಿರ್ಮಾಣದ ಪ್ಲ್ಯಾನ್​ ಕೂಡ ಅವರಿಗಿದೆ.

ಇದನ್ನೂ ಓದಿ:

ಹರಾಜಾಗುತ್ತಿದೆ ಯಾರೂ ಕೇಳಿರದ ಪ್ರಭಾಸ್​ ಸಿನಿಮಾ ಹಾಡು; ಭಾರತಲ್ಲೇ ಇದು ಮೊದಲ ಪ್ರಯೋಗ

23 ವರ್ಷವಾದರೂ ಮಾಸದ ‘ಮಾಯಾಮೃಗ’ ಹಾಡು ಕಂಪೋಸ್​ ಆಗಿದ್ದು ಲಂಚ್​ ಬ್ರೇಕ್​ನ​ ಕೆಲವೇ ನಿಮಿಷಗಳಲ್ಲಿ; ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ

Published On - 6:47 pm, Tue, 8 June 21

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು