AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ananya Bhat: ‘ಪ್ರೀತಿ ಎಂದರೇನು’ ಮ್ಯೂಸಿಕ್​ ವಿಡಿಯೋ ಮೂಲಕ ಗಮನ ಸೆಳೆದ ಅನನ್ಯಾ ಭಟ್​, ಹೃದಯ ಶಿವ

ಹೃದಯ ಶಿವ ಅವರ ಯೂಟ್ಯೂಬ್​ ಚಾನೆಲ್​ನಲ್ಲಿ ಜೂ.8ರಂದು ‘ಪ್ರೀತಿ ಎಂದರೇನು..’ ಹಾಡು ರಿಲೀಸ್​ ಆಗಿದೆ. ‘ಸೋಜುಗಾದ ಸೂಜು ಮಲ್ಲಿಗೆ..’ ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಅನನ್ಯಾ ಭಟ್​ ಅವರ ಕಂಠದಲ್ಲಿ ಈ ಹೊಸ ಗೀತೆ ಮೂಡಿಬಂದಿದೆ.

Ananya Bhat: ‘ಪ್ರೀತಿ ಎಂದರೇನು’ ಮ್ಯೂಸಿಕ್​ ವಿಡಿಯೋ ಮೂಲಕ ಗಮನ ಸೆಳೆದ ಅನನ್ಯಾ ಭಟ್​, ಹೃದಯ ಶಿವ
ಗಾಯಕಿ ಅನನ್ಯಾ ಭಟ್​
ಮದನ್​ ಕುಮಾರ್​
|

Updated on:Jun 08, 2021 | 6:47 PM

Share

ಹಿಂದಿ ಮತ್ತು ಇಂಗ್ಲಿಷ್​ನಲ್ಲಿ ಮ್ಯೂಸಿಕ್​ ವಿಡಿಯೋಗಳು ದೊಡ್ಡ ಟ್ರೆಂಡ್​ ಸೆಟ್​ ಮಾಡಿವೆ. ಆದರೆ ಕನ್ನಡದಲ್ಲಿ ಅವುಗಳ ಸಂಖ್ಯೆ ಕಡಿಮೆ ಎನ್ನಬಹುದು. ಕೆಲವೇ ಕೆಲವು ಮಂದಿ ಮಾತ್ರ ಮ್ಯೂಸಿಕ್​ ವಿಡಿಯೋಗಳ ಮೂಲಕ ಜನಮನ ಗೆದ್ದಿದ್ದಾರೆ. ಅದೇ ಸಾಲಿನಲ್ಲಿ ಗೀತರಚನಾಕಾರ ಹೃದಯ ಶಿವ ಒಂದು ಪ್ರಯತ್ನ ಮಾಡಿದ್ದಾರೆ. ಅವರು ನಿರ್ಮಿಸಿ, ನಿರ್ದೇಶಿಸಿರುವ ‘ಪ್ರೀತಿ ಎಂದರೇನು..’ ಎಂಬ ಹೊಸ ಹಾಡು ಬಿಡುಗಡೆ ಆಗಿದೆ. ಈ ಗೀತೆಗೆ ಖ್ಯಾತ ಗಾಯಕಿ ಅನನ್ಯಾ ಭಟ್​ ಧ್ವನಿ ನೀಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಹಲವು ಸೂಪರ್​ ಹಿಟ್​ ಗೀತೆಗಳನ್ನು ನೀಡಿದವರು ಹೃದಯ ಶಿವ. ‘ಮುಂಗಾರು ಮಳೆ’ ಚಿತ್ರದ ‘ಇವನು ಗೆಳಯನಲ್ಲ..’ ಹಾಡಿನಿಂದ ಹಿಡಿದು ‘ರಾಜು ಕನ್ನಡ ಮೀಡಿಯಂ’ ಸಿನಿಮಾದ ‘ಕೊಡೆಯೊಂದರ ಅಡಿಯಲ್ಲಿ ನಿಮ್ಮಿಬ್ಬರ ಪಯಣ..’ ಹಾಡಿನವರೆಗೆ ಹಲವಾರು ಸುಮಧುರ ಗೀತೆಗಳಿಗೆ ಸಾಹಿತ್ಯ ಬರೆದ ಹೃದಯ ಶಿವ ಅವರು ಈಗ ಹೊಸ ಹಾಡು ಬಿಡುಗಡೆ ಮಾಡಿದ್ದಾರೆ.

‘ಹೃದಯ ಶಿವ’ ಯೂಟ್ಯೂಬ್​ ಚಾನೆಲ್​ನಲ್ಲಿ ಜೂ.8ರಂದು ‘ಪ್ರೀತಿ ಎಂದರೇನು’ ಹಾಡು ರಿಲೀಸ್​ ಆಗಿದೆ. ಇದರಲ್ಲಿ ಹೊಸ ಪ್ರತಿಭೆಗಳಾದ ಸಿತಾರಾ ರಾವಲ್​ ಮತ್ತು ನಿಶ್ಚಲ್​ ನಟಿಸಿದ್ದಾರೆ. ‘ಸೋಜುಗಾದ ಸೂಜು ಮಲ್ಲಿಗೆ’ ಹಾಡಿನ ಮೂಲಕ ದೇಶಾದ್ಯಂತ ಜನಪ್ರಿಯತೆ ಗಳಿಸಿದ ಅನನ್ಯಾ ಭಟ್​ ಅವರ ಕಂಠದಲ್ಲಿ ಈ ‘ಪ್ರೀತಿ ಎಂದರೇನು’ ಗೀತೆ ಮೂಡಿಬಂದಿದೆ. ಹಿಂದಿ ಅವತರಣಿಕೆಯಲ್ಲೂ ಹಾಡು ಸಿದ್ಧವಾಗಿದ್ದು, ಅದನ್ನೂ ಅನನ್ಯಾ ಭಟ್​ ಹಾಡಿದ್ದಾರೆ. ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತವನ್ನು ಕೂಡ ಹೃದಯ ಶಿವ ಅವರೇ ನೀಡಿದ್ದಾರೆ.

‘ಒಂದಷ್ಟು ಹಾಡನ್ನು ಸೇರಿಸಿ ಒಂದು ಆಲ್ಬಂ ಮಾಡೋಣ ಅಂದುಕೊಂಡಿದ್ವಿ. ಕಡೆಗೆ ಸಿಂಗಲ್​ ಮ್ಯೂಸಿಕ್​ ವಿಡಿಯೋ ಮಾಡಲು ನಿರ್ಧರಿಸಿದೆವು. ಕನ್ನಡ ಮತ್ತು ಹಿಂದಿ ಎರಡೂ ವರ್ಷನ್​ನಲ್ಲಿ ಬಿಡುಗಡೆ ಮಾಡಿದ್ದೇವೆ. ನಟಿಸಿರುವ ಕಲಾವಿದರು ಇಬ್ಬರೂ ಹೊಸಬರು’ ಎಂದು ಹೇಳಿರುವ ಹೃದಯ ಶಿವ ಅವರು, ಈ ಸಿಂಗಲ್​ ಮ್ಯೂಸಿಕ್​ ವಿಡಿಯೋ ಮೂಲಕ ಒಂದು ಕಥೆ ಕಟ್ಟಿಕೊಟ್ಟಿದ್ದಾರೆ.

‘ಮೆಟಫರ್​ ಮೀಡಿಯಾ ಹೌಸ್​’ ಬ್ಯಾನರ್​ ಮೂಲಕ ಈ ಹಾಡನ್ನು ಹೃದಯ ಶಿವ ಅವರು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಇದೇ ಬ್ಯಾನರ್​ನಿಂದ ಇನ್ನಷ್ಟು ಹೊಸ ಪ್ರಯತ್ನಗಳನ್ನು ಮಾಡಲು ಅವರು ತಯಾರಿ ನಡೆಸಿದ್ದಾರೆ. ಸಿನಿಮಾ ನಿರ್ಮಾಣದ ಪ್ಲ್ಯಾನ್​ ಕೂಡ ಅವರಿಗಿದೆ.

ಇದನ್ನೂ ಓದಿ:

ಹರಾಜಾಗುತ್ತಿದೆ ಯಾರೂ ಕೇಳಿರದ ಪ್ರಭಾಸ್​ ಸಿನಿಮಾ ಹಾಡು; ಭಾರತಲ್ಲೇ ಇದು ಮೊದಲ ಪ್ರಯೋಗ

23 ವರ್ಷವಾದರೂ ಮಾಸದ ‘ಮಾಯಾಮೃಗ’ ಹಾಡು ಕಂಪೋಸ್​ ಆಗಿದ್ದು ಲಂಚ್​ ಬ್ರೇಕ್​ನ​ ಕೆಲವೇ ನಿಮಿಷಗಳಲ್ಲಿ; ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ

Published On - 6:47 pm, Tue, 8 June 21

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು