Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವಿಲ್ಲದೆ…. ಅಪ್ಪು ನೆನೆದು ಭಾವುಕ ಸಾಲು ಹಂಚಿಕೊಂಡ ಅನುಶ್ರೀ

Anchor Anushree: ಪುನೀತ್ ರಾಜ್​ಕುಮಾರ್ ಅವರ ದೊಡ್ಡ ಅಭಿಮಾನಿ ನಿರೂಪಕಿ ಅನುಶ್ರೀ, ಅಪ್ಪು ಅಗಲಿದ ದಿನವಾದ ಇಂದು ಅಪ್ಪು ಅವರನ್ನು ನೆನೆದು ಭಾವುಕ ಪೋಸ್ಟ್ ಒಂದನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನೀವಿಲ್ಲದೆ.... ಅಪ್ಪು ನೆನೆದು ಭಾವುಕ ಸಾಲು ಹಂಚಿಕೊಂಡ ಅನುಶ್ರೀ
Follow us
ಮಂಜುನಾಥ ಸಿ.
|

Updated on:Oct 29, 2024 | 5:05 PM

ನಟಿ, ನಿರೂಪಕಿ ಅನುಶ್ರೀ, ಪುನೀತ್ ರಾಜ್​​ಕುಮಾರ್ ಅವರ ದೊಡ್ಡ ಅಭಿಮಾನಿಗಳಲ್ಲಿ ಒಬ್ಬರು. ಅಪ್ಪು ಬದುಕಿದ್ದಾಗಲೂ ಸಹ ಹಲವು ಬಾರಿ ಈ ವಿಷಯವನ್ನು ಅವರು ಹೇಳಿಕೊಂಡಿದ್ದರು. ಅಪ್ಪು ಹೇಗೆ ತಮ್ಮ ವ್ಯಕ್ತಿತ್ವದಿಂದ ತಮ್ಮನ್ನು ಸೆಳೆದಿದ್ದಾರೆ ಎಂದು ಹೇಳಿದ್ದರು, ಅಪ್ಪು ತಮಗೆ ನೀಡಿದ ನೆರವು, ತುಂಬಿದ ಸ್ಪೂರ್ತಿಯ ಬಗ್ಗೆಯೂ ಅನುಶ್ರೀ ಮಾತನಾಡಿದ್ದರು. ಅನುಶ್ರೀ, ಅಪ್ಪು ಅವರ ಅಭಿಮಾನಿ ಆಗಿರುವ ಜೊತೆಗೆ ಅವರ ಹತ್ತಿರದ ಗೆಳೆಯರೂ ಆಗಿದ್ದರು. ಅನುಶ್ರೀ ಅವರ ಯೂಟ್ಯೂಬ್ ಚಾನೆಲ್​ನಲ್ಲಿ ಇರುವುದು ಅಪ್ಪು ಅವರ ಚಿತ್ರವೇ. ಇದೀಗ ಅಪ್ಪು ಅವರ ಪುಣ್ಯಸ್ಮರಣೆಯ ದಿನ ಅನುಶ್ರೀ, ಅಪ್ಪು ಅವರನ್ನು ನೆನದು ಭಾವುಕ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಪುನೀತ್ ಅವರು ಹಾಡಿದ್ದ ‘ನಿನ್ನ ಕಂಗಳ ಬಿಸಿಯ ಹನಿಗಳು’ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಅದೇ ಸಾಲುಗಳನ್ನು ತುಸು ಆಚೆ ಈಚೆ ಮಾಡಿ ಅಪ್ಪುಗಾಗಿ ಅನುಶ್ರೀ ತಮ್ಮ ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ‘ನಮ್ಮ ಕಂಗಳ ಬಿಸಿಯ ಹನಿಗಳು ನೂರು ಬಾರಿ ಕೂಗಿವೆ, ನಿಮ್ಮ ನಗುವ ಮೊಗವ ಮೋಡಲು ಕೋಟಿ ಕಂಗಳು ಕಾದಿವೆ. ಮಿಸ್ ಯೂ ಸರ್, ನೀವಿಲ್ಲದೆ ಅಭಿಮಾನ ಇಲ್ಲ, ನೀವಿಲ್ಲದೆ ಅಭಿಮಾನಕೆ ಬೆಲೆ ಇಲ್ಲ, ನೀವಿಲ್ಲದ ಬದುಕಿಗೆ ಕಳೆ ಇಲ್ಲ…’ ಎಂದು ಅನುಶ್ರೀ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ನವಿಲಿನಂತೆ ರೆಡಿಯಾದ ಆ್ಯಂಕರ್​ ಅನುಶ್ರೀಗೆ ಲೈಕ್ಸ್ ಸುರಿಮಳೆ

ನಿರೂಪಕಿ ಅನುಶ್ರೀ, ಅಪ್ಪು ಅವರ ಬಹುದೊಡ್ಡ ಅಭಿಮಾನಿ. ಅಪ್ಪು ಬಗ್ಗೆ ತಮಗಿರುವ ಅಪಾರ ಪ್ರೀತಿ, ಗೌರವ ಮತ್ತು ಅಭಿಮಾನವನ್ನು ಹಲವು ವೇದಿಕೆಳಲ್ಲಿ ಅನುಶ್ರೀ ಹೇಳಿಕೊಂಡಿದ್ದಾರೆ. ಅಪ್ಪು ನಿಧನ ಹೊಂದಿದ ಬಳಿಕ ಅವರು ನಡೆಸಿಕೊಟ್ಟ ರಿಯಾಲಿಟಿ ಶೋನಲ್ಲಿಯೂ ಸಹ ಅಪ್ಪು ಬಗ್ಗೆ ಸಾಕಷ್ಟು ಮಾತನಾಡಿ ಕಣ್ಣೀರ ಧಾರೆಯೇ ಹರಿಸಿದ್ದರು. ಅಪ್ಪು ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯಂದು ಸಮಾಧಿಗೆ ಭೇಟಿ ನೀಡುವ ವ್ಯಕ್ತಿಗಳಲ್ಲಿ ಅನುಶ್ರೀ ಸಹ ಒಬ್ಬರು.

ಅಪ್ಪು ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಇಂದಾಗಿದ್ದು, ಇಂದು ಬೆಳಿಗ್ಗೆಯೇ ಅಶ್ವಿನಿ ಪುನೀತ್ ರಾಜ್​ಕುಮಾರ್ ಅವರ ಪುತ್ರಿ ಬಂದು ಪುನೀತ್ ಸಮಾಧಿಗೆ ಪೂಜೆ ಮಾಡಿದರು. ರಾಘವೇಂದ್ರ ರಾಜ್​ಕುಮಾರ್, ಯುವ ರಾಜ್​ಕುಮಾರ್, ನಿರ್ಮಾಪಕ ಕಾರ್ತಿಕ್ ಗೌಡ ಇನ್ನೂ ಹಲವರು ಇಂದು ಬೆಳಿಗ್ಗೆ ಆಗಮಿಸಿ ಸಮಾಧಿಗೆ ಪೂಜೆ ಮಾಡಿದರು. ಸಂಜೆ ವೇಳೆಗೆ ಶಿವರಾಜ್ ಕುಮಾರ್ ಆಗಮಿಸಿ ಅಪ್ಪು ಸಮಾಧಿಗೆ ಪೂಜೆ ಮಾಡಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Tue, 29 October 24

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು