Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು

Anchor Anushree | Puneeth Rajkumar: ‘ಗಂಧದ ಗುಡಿ’ ವೀಕ್ಷಿಸಿ ನಿರೂಪಕಿ ಅನುಶ್ರೀ ತುಂಬ ಎಮೋಷನಲ್​ ಆಗಿದ್ದಾರೆ. ‘ಇದನ್ನು ನೋಡಲು ಖುಷಿ ಮತ್ತು ಸಂಕಟ ಎರಡೂ ಆಗುತ್ತದೆ’ ಎಂದು ಅವರು ಹೇಳಿದ್ದಾರೆ.

Gandhada Gudi: ಗಳಗಳನೆ ಕಣ್ಣೀರು ಹಾಕಿದ ಅನುಶ್ರೀ; ‘ಗಂಧದ ಗುಡಿ’ಯಲ್ಲಿ ಅಪ್ಪು​ ನೋಡಿದ ಬಳಿಕ ನಿರೂಪಕಿ ಭಾವುಕ ಮಾತು
ನಿರೂಪಕಿ ಅನುಶ್ರೀ
Follow us
| Updated By: ಮದನ್​ ಕುಮಾರ್​

Updated on:Oct 28, 2022 | 7:35 AM

ತುಂಬ ಅದ್ದೂರಿಯಾಗಿ ‘ಗಂಧದ ಗುಡಿ’ (Gandhada Gudi) ಸಾಕ್ಷ್ಯಚಿತ್ರ ರಿಲೀಸ್​ ಆಗಿದೆ. ಈ ಡಾಕ್ಯುಮೆಂಟರಿ ಎಲ್ಲರಿಗೂ ಭಾವುಕವಾಗಿ ಕನೆಕ್ಟ್​ ಆಗುತ್ತಿದೆ. ನಿರೂಪಕಿ ಅನುಶ್ರೀ (Anchor Anushree) ಅವರು ಗುರುವಾರ ರಾತ್ರಿಯೇ ಇದನ್ನು ಕಣ್ತುಂಬಿಕೊಂಡಿದ್ದಾರೆ. ನೋಡಿ ಹೊರಬಂದ ಬಳಿಕ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಈ ವೇಳೆ ಅವರು ಸಖತ್​ ಎಮೋಷನಲ್​ ಆಗಿ ಕಣ್ಣೀರು ಹಾಕಿದ್ದಾರೆ. ಇದು ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಕನಸಿನ ಪ್ರಾಜೆಕ್ಟ್​. ಇಡೀ ಕರ್ನಾಟಕದ ಪ್ರಕೃತಿ ಸೌಂದರ್ಯವನ್ನು ಅವರು ತೋರಿಸಿದ್ದಾರೆ. ಅದನ್ನು ನೋಡಲು ಎರಡು ಕಣ್ಣುಗಳು ಸಾಲದು ಅಂತ ಫ್ಯಾನ್ಸ್​ ಹೊಗಳುತ್ತಿದ್ದಾರೆ. ಅನುಶ್ರೀ ಅವರಿಗೂ ಇದು ಸಖತ್​ ಇಷ್ಟವಾಗಿದೆ.

‘ಈ ಸಿನಿಮಾದಲ್ಲಿ ಅವರು ಹೇಳಿರುವ ಒಂದೊಂದು ಮಾತು ಕೂಡ ಕಾಡುತ್ತದೆ. ಅವರಿಗೆ ಎಲ್ಲವೂ ಮೊದಲೇ ಗೊತ್ತಿತ್ತಾ ಎಂಬ ಪ್ರಶ್ನೆ ಮೂಡುತ್ತದೆ. ನಾವು ಈ ಭೂಮಿಗೆ ಬಂದಾಗ ಮಗುವಾಗಿ ಬರುತ್ತೇವೆ. ಹೋಗುವಾಗಲೂ ಮಗುವಿನ ಮನಸ್ಥಿತಿಯಲ್ಲೇ ಎಲ್ಲವನ್ನೂ ಅನುಭವಿಸಿ ಅಪ್ಪು ಹೋಗಿದ್ದಾರೆ. ಅಪ್ಪು ರೀತಿ ಬಾಳುವ ಅವಕಾಶ ಎಷ್ಟು ಜನಕ್ಕೆ ಸಿಗುತ್ತೆ? ಇದನ್ನು ನೋಡಲು ಖುಷಿ ಮತ್ತು ಸಂಕಟ ಎರಡೂ ಆಗುತ್ತದೆ. ಪರಮಾತ್ಮನು ಪ್ರಾಣಿ, ಪಕ್ಷಿ, ಮನುಷ್ಯ, ನಿಸರ್ಗ ಹೀಗೆ ಎಲ್ಲವನ್ನೂ ಸೃಷ್ಟಿ ಮಾಡುತ್ತಾನೆ. ಆತ ಸೃಷ್ಟಿ ಮಾಡಿದ ಎಲ್ಲವನ್ನೂ ಸ್ಪರ್ಶಿಸಿ ಹೋಗೋಕೆ ಅಪ್ಪು ಅವರು ಜನ್ಮ ತಾಳಿದ್ದರು ಅಂತ ನನಗೆ ‘ಗಂಧದ ಗುಡಿ’ ನೋಡಿದ ಬಳಿಕ ಅನಿಸಿದು’ ಎಂದು ಅನುಶ್ರೀ ಹೇಳಿದ್ದಾರೆ.

ಸರಳವಾಗಿ ಸಂದೇಶ ನೀಡಿದ ಪುನೀತ್:

ಇದನ್ನೂ ಓದಿ
Image
Gandhada Gudi: ‘ಗಂಧದ ಗುಡಿ’ ಗೆಲುವಿಗೆ ಪ್ರಾರ್ಥನೆ; ದೊಡ್ಡ ಗಣಪತಿ ದೇವಸ್ಥಾನದಲ್ಲಿ ಟಿಕೆಟ್​ ಇಟ್ಟು ಅಮೋಘವರ್ಷ ಪೂಜೆ
Image
Gandhada Gudi: ರಿಲೀಸ್​ಗೂ ಮುನ್ನವೇ ದಾಖಲೆ ಬರೆದ ‘ಗಂಧದ ಗುಡಿ’: ಅಪ್ಪು ಕನಸನ್ನು ನನಸು ಮಾಡುತ್ತಿರುವ ಫ್ಯಾನ್ಸ್​
Image
Gandhada Gudi: ಅಂತೂ ಮೌನ ಮುರಿದ ಅಶ್ವಿನಿ ಪುನೀತ್​ ರಾಜ್​ಕುಮಾರ್​; ‘ಗಂಧದ ಗುಡಿ’ ಬಗ್ಗೆ ಇಲ್ಲಿದೆ ಮೊದಲ ಸಂದರ್ಶನ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

‘ಪುನೀತ್​ ರಾಜ್​ಕುಮಾರ್​ ಅವರು ‘ಪವರ್​ ಸ್ಟಾರ್​’. ಆದರೆ ಕಾಡಿಗೆ ಹೋಗಿ ಅಲ್ಲಿನ ಜನರ ಜೊತೆ ಬೆರೆತಿದ್ದರು. ಅಲ್ಲಿನ ಮಕ್ಕಳಿಗೆ ಪುನೀತ್​ ಯಾರೆಂಬುದೇ ಗೊತ್ತಿಲ್ಲ. ಅದಕ್ಕೆ ಅವರು ಬೇಸರ ಮಾಡಿಕೊಳ್ಳದೇ, ‘ಓಹ್​.. ಇಲ್ಲಿ ಕರೆಂಟ್​ ಇಲ್ಲ, ಇಲ್ಲೆಲ್ಲ ಪ್ಲಾಸ್ಟಿಕ್​ ಹಾಕಬಾರದು’ ಎಂಬಂತಹ ವಿಷಯಗಳನ್ನು ತುಂಬ ಸರಳವಾಗಿ ಹೇಳಿದ್ದಾರೆ. ಎಲ್ಲಾದರೂ ಇರು ಎಂಥಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಅಂತ ಅವರು ಹಾಡಿದ್ದು ಮನಸ್ಸಿಗೆ ಬಹಳ ಹತ್ತಿರ ಆಯ್ತು’ ಎಂದು ಅನುಶ್ರೀ ಹೇಳಿದ್ದಾರೆ.

ಎಲ್ಲರೂ ಇದನ್ನು ನೋಡಬೇಕು:

‘ಎಲ್ಲರೂ ಸಿನಿಮಾವನ್ನು ನೋಡಬೇಕು. ಪುನೀತ್​ ರಾಜ್​ಕುಮಾರ್​ ಅವರ ಅಭಿಮಾನಿಯಾಗಿ ಈ ಮಾತನ್ನು ಹೇಳುತ್ತಿದ್ದೇನೆ ಅಂತಲ್ಲ. ಒಬ್ಬ ಮಾನವನಾಗಿ ಇನ್ನೊಬ್ಬ ವಿಶ್ವ ಮಾನವ ಅಲ್ಲಿ ಬದುಕಿರುವ ಬದುಕನ್ನು ನೋಡಿ ಕಲಿಯುವ ಸಲುವಾಗಿಯಾದರೂ ನೀವೆಲ್ಲರೂ ಇದನ್ನು ನೋಡಬೇಕು’ ಎಂದಿದ್ದಾರೆ ಅನುಶ್ರೀ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Fri, 28 October 22

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ