AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಶ್ರೀ, ರೋಷನ್ ಮದುವೆ: ಲವ್ ಸ್ಟೋರಿ ಬಗ್ಗೆ ಮೊದಲ ಬಾರಿ ಮಾತಾಡಿದ ಜೋಡಿ

ಜನಪ್ರಿಯ ನಿರೂಪಕಿ ಅನುಶ್ರೀ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರೋಷನ್ ರಾಮಮೂರ್ತಿ ಜೊತೆ ಅನುಶ್ರೀ ಮದುವೆ ನೆರೆವೇರಿದೆ. ಅನೇಕ ಸೆಲೆಬ್ರಿಟಿಗಳು ಬಂದು ದಂಪತಿಗೆ ಆಶೀರ್ವಾದ ಮಾಡಿದ್ದಾರೆ. ಮದುವೆ ಬಳಿಕ ಮಾಧ್ಯಮಗಳ ಜೊತೆ ಅನುಶ್ರೀ ಅವರು ಮಾತನಾಡಿದರು. ತಮ್ಮ ಲವ್ ಸ್ಟೋರಿ ಬಗ್ಗೆಯೂ ಅವರು ಹೇಳಿದರು.

ಅನುಶ್ರೀ, ರೋಷನ್ ಮದುವೆ: ಲವ್ ಸ್ಟೋರಿ ಬಗ್ಗೆ ಮೊದಲ ಬಾರಿ ಮಾತಾಡಿದ ಜೋಡಿ
Roshan, Anushree
ಮದನ್​ ಕುಮಾರ್​
|

Updated on: Aug 28, 2025 | 3:18 PM

Share

ಬೆಂಗಳೂರಿನ ಹೊರವಲಯದಲ್ಲಿ ಆ್ಯಂಕರ್ ಅನುಶ್ರೀ (Anchor Anushree) ಅವರ ಮದುವೆ ನಡೆದಿದೆ. ಅನುಶ್ರೀ ಅವರನ್ನು ರೋಷನ್ ರಾಮಮೂರ್ತಿ (Roshan) ವರಿಸಿದ್ದಾರೆ. ಇವರಿಬ್ಬರದ್ದು ಲವ್ ಮ್ಯಾರೇಜ್. ಶಿವರಾಜ್​​ಕುಮಾರ್, ತಾರಾ, ಪ್ರೇಮಾ, ತರುಣ್ ಸುಧೀರ್, ಹಂಸಲೇಖ, ಶರಣ್ ಸೇರಿದಂತೆ ಹಲವು ಸೆಲೆಬ್ರಿಟಿಗಳು ಮದುವೆಯಲ್ಲಿ ಭಾಗಿ ಆಗಿದ್ದಾರೆ. ರೋಷನ್ ಅವರು ತಾಳಿ ಕಟ್ಟುವಾಗ ಅನುಶ್ರೀ ಎಮೋಷನಲ್ ಆದರು. ಸಿಂಪಲ್ ಆಗಿ ಮದುವೆ ಆಗಬೇಕು ಎಂಬುದು ಅನುಶ್ರೀ ಆಸೆ ಆಗಿತ್ತು. ಅದರಂತೆಯೇ ಮದುವೆ (Anushree Marriage) ನೆರವೇರಿದೆ. ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

‘ಮದುವೆ ಬಹಳ ಸುಂದರವಾಗಿ, ಸರಳವಾಗಿ ನಡೆದಿದೆ. ಬಹಳ ಕಡಿಮೆ ಜನರ ಎದುರು ನಮ್ಮಿಬ್ಬರ ವಿವಾಹ ಆಗಬೇಕು ಎಂಬುದು ಆಸೆ ಆಗಿತ್ತು. ಇವರ ಹೆಸರು ರೋಷನ್ ರಾಮಮೂರ್ತಿ. ಕುಶಾಲ ನಗರದಲ್ಲಿ ಇರುವವರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಾ ಇದ್ದಾರೆ. ಈಗ ನನ್ನ ಮದುವೆ ಆಗಿದ್ದಾರೆ. ಮದುವೆಗೆ ಬಂದಿರುವ ಎಲ್ಲರಿಗೂ ಧನ್ಯವಾದಗಳು’ ಎಂದಿದ್ದಾರೆ ಅನುಶ್ರೀ.

‘ನಮ್ಮದು ಸಿಂಪಲ್ ಲವ್ ಸ್ಟೋರಿ. ಅದನ್ನು ಯಾರು ಹೇಳಿದರೂ ನಂಬುತ್ತಾ ಇರಲಿಲ್ಲ. ನಾವಿಬ್ಬರು ಫ್ರೆಂಡ್ಸ್ ಆದೆವು. ಕಾಫಿ ಕುಡಿದೆವು. ನನಗೆ ಅವರು ಇಷ್ಟ ಆದರು. ಅವರಿಗೆ ನಾನು ಇಷ್ಟ ಆದೆ. ಲವ್ ಆಯಿತು. ಮದುವೆ ಆದೆವು. ರೋಷನ್ ಕೂಡ ಅಪ್ಪು ಸರ್ ಅವರನ್ನು ಬಹಳ ಇಷ್ಟಪಡುವವರು. ಪುನೀತ ಪರ್ವ ಕಾರ್ಯಕ್ರಮದಲ್ಲಿ ನಾವು ಭೇಟಿ ಮಾಡಿದ್ದು. ಒಂದು ಲೆಕ್ಕದಲ್ಲಿ ಅಪ್ಪು ಸರ್ ಅವರೇ ನಮ್ಮನ್ನು ಸೇರಿಸಿದ್ದಾರೆ’ ಎಂದು ಅನುಶ್ರೀ ಹೇಳಿದ್ದಾರೆ.

‘5 ವರ್ಷದಿಂದ ಅನುಶ್ರೀ ಪರಿಚಯ. ಕಳೆದ 3 ವರ್ಷದಿಂದ ಹೆಚ್ಚು ಆಪ್ತರಾದೆವು. ಶ್ರೀದೇವಿ ಬೈರಪ್ಪ ನನ್ನ ಬಾಲ್ಯದ ಸ್ನೇಹಿತೆ. ಅವರಿಂದಾಗಿ ಅನು ಪರಿಚಯ ಆಯಿತು. ಅನುಶ್ರೀ ಸಿಂಪಲ್ ಹುಡುಗಿ. ನನಗೆ ಎಂದಿಗೂ ಅವರೊಬ್ಬ ಸೆಲೆಬ್ರಿಟಿ ಅಂತ ಅನಿಸಿಯೇ ಇಲ್ಲ. ಆ ಗುಣವೇ ನನಗೆ ತುಂಬ ಇಷ್ಟ ಆಯಿತು. ನಾನು ಚೆನ್ನಾಗಿ ಅಡುಗೆ ಮಾಡುತ್ತೇವೆ’ ಎಂದು ರೋಷನ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಅನುಶ್ರೀ ಮದುವೆಗೆ ಆಗಮಿಸಿ ಹರಸಿದ ಶಿವಣ್ಣ-ಗೀತಕ್ಕ: ವಿಡಿಯೋ ನೋಡಿ

‘ನಾವಿಬ್ಬರು ಜೀವನವನ್ನು ತುಂಬ ಸರಳವಾಗಿ ನೋಡುವವರು. ಚಿಕ್ಕ ಚಿಕ್ಕ ಸಂತೋಷಗಳನ್ನು ತುಂಬ ಇಷ್ಟಪಡುತ್ತೇವೆ. ಅವರಿಗೆ ಸಹಾಯ ಮಾಡುವ ಮನೋಭಾವ ಇದೆ. ಅದು ನನಗೆ ಬಹಳ ಇಷ್ಟ ಆಗಿದೆ. ನಮ್ಮ ಅಮ್ಮನಿಗೆ ತುಂಬ ಖುಷಿ ಆಗಿದೆ. ಮದುವೆ ಮಾಡಿಸಿದ್ದು, ಅರೇಂಜ್​​ಮೆಂಟ್ ಮಾಡಿದ್ದು, ಅಪ್ಪು ಸರ್ ಪರವಾಗಿ ಇದನ್ನೆಲ್ಲ ಮಾಡಿದ್ದು ವರುಣ್. ಅವರಿಗೆ ನನ್ನ ಧನ್ಯವಾದಗಳು’ ಎಂದು ಅನುಶ್ರೀ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್