AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಚ್ಛೇದನದ ಬಗ್ಗೆ ಹಲವಾರು ತಿಂಗಳು ಯೋಚಿಸಿ ಹೇಳುತ್ತಿದ್ದೇನೆ’; ಚೈತ್ರಾ ವಾಸುದೇವನ್ ಭಾವುಕ ಪೋಸ್ಟ್​

Chaitra Vasudevan Divorce: ಚೈತ್ರಾ ಹಾಗೂ ಸತ್ಯ ಮದುವೆ ಆದರು. ಇವರು ಯಾವುದೇ ವಿವಾದದ ಮೂಲಕ ಸುದ್ದಿ ಆಗಿಲ್ಲ. ಆದಾಗ್ಯೂ ಇವರು ಸೈಲೆಂಟ್ ಆಗಿ ಈ ಘೋಷಣೆ ಮಾಡಿರುವುದು ಅನೇಕರಿಗೆ ಶಾಕ್ ತಂದಿದೆ.

‘ವಿಚ್ಛೇದನದ ಬಗ್ಗೆ ಹಲವಾರು ತಿಂಗಳು ಯೋಚಿಸಿ ಹೇಳುತ್ತಿದ್ದೇನೆ’;  ಚೈತ್ರಾ ವಾಸುದೇವನ್ ಭಾವುಕ ಪೋಸ್ಟ್​
ಚೈತ್ರಾ ವಾಸುದೇವನ್
ರಾಜೇಶ್ ದುಗ್ಗುಮನೆ
|

Updated on:Jul 28, 2023 | 6:57 AM

Share

ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ (Chaitra Vasudevan) ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿ, ಜೀವನದ ಆಗುಹೋಗುಗಳ ಬಗ್ಗೆ ಅವರು ಅಪ್​ಡೇಟ್ ನೀಡುತ್ತಾರೆ. ಈಗ ಅವರ ಕಡೆಯಿಂದ ಶಾಕಿಂಗ್ ಸುದ್ದಿ ಒಂದು ಹೊರಬಿದ್ದಿದೆ. ಅವರು ಸತ್ಯ ನಾಯ್ಡು ಅವರಿಂದ ವಿಚ್ಛೇದನ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ವಿಚಾರ ತಿಳಿದು ಚೈತ್ರಾ ಅಭಿಮಾನಿಗಳಿಗೆ ಬೇಸರ ಆಗಿದೆ. ಚೈತ್ರಾ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ. ಈ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಅವರು ತಿಳಿಸಿಲ್ಲ.

ಚೈತ್ರಾ ಹಾಗೂ ಸತ್ಯ ಸರಳವಾಗಿ ಮದುವೆ ಆಗಿದ್ದರು. ಅವರು ಸಾರ್ವಜನಿಕವಾಗಿ ಒಬ್ಬರನ್ನೊಬ್ಬರು ದೂರಿಕೊಂಡಿಲ್ಲ. ಇವರು ಯಾವುದೇ ವಿವಾದದ ಮೂಲಕ ಸುದ್ದಿ ಆಗಿಲ್ಲ. ಆದಾಗ್ಯೂ ಇವರು ಸೈಲೆಂಟ್ ಆಗಿ ಈ ಘೋಷಣೆ ಮಾಡಿರುವುದು ಅನೇಕರಿಗೆ ಶಾಕ್ ತಂದಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನುಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಐಷಾರಾಮಿ ಕಾರು ಖರೀದಿಸಿದ ‘ಬಿಗ್ ಬಾಸ್’ ಸ್ಪರ್ಧಿ ಚೈತ್ರಾ ವಾಸುದೇವನ್; ಇಲ್ಲಿವೆ ಫೋಟೋಗಳು

ಚೈತ್ರಾ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್ ಆಗಿರುವುದು ಮಾತ್ರವಲ್ಲ ತಮ್ಮದೇ ಉದ್ಯಮ ಹೊಂದಿದ್ದಾರೆ. ಅವರು ಈವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ನಡೆಸುತ್ತಿದ್ದಾರೆ. ಅವರಿಗೆ ಸಿನಿಮಾ ಆಫರ್​ಗಳು ಬಂದರೂ ಅದನ್ನು ಒಪ್ಪಿಲ್ಲ ಎನ್ನಲಾಗಿದೆ. ಕಳೆದ ವರ್ಷ ಆಗಸ್ಟ್​ ತಿಂಗಳಲ್ಲಿ ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದರು. ಈ ಕಾರಿನ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:35 am, Fri, 28 July 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು