AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anekal Balaraj Death: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಇನ್ನಿಲ್ಲ; ಬೆಂಗಳೂರಿನಲ್ಲಿ ಅಪಘಾತದಿಂದ ನಿಧನ

Anekal Balaraj: ಬೆಂಗಳೂರಿನ ಜೆ.ಪಿ. ನಗರದಲ್ಲಿ ನಿರ್ಮಾಪಕ ಆನೇಕಲ್​ ಬಾಲರಾಜ್​ ಅವರು ನಿಧನರಾಗಿದ್ದಾರೆ. ಭಾನುವಾರ ಬೆಳಗ್ಗೆ ವಾಕಿಂಗ್​ಗೆ ತೆರಳಿದ್ದಾಗ ಸಂಭವಿಸಿದ ಅಪಘಾತದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ.

Anekal Balaraj Death: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಇನ್ನಿಲ್ಲ; ಬೆಂಗಳೂರಿನಲ್ಲಿ ಅಪಘಾತದಿಂದ ನಿಧನ
ಆನೇಕಲ್ ಬಾಲರಾಜ್
TV9 Web
| Edited By: |

Updated on:May 15, 2022 | 12:33 PM

Share

ಕನ್ನಡ ಚಿತ್ರರಂಗದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಆನೇಕಲ್​ ಬಾಲರಾಜ್​ (Anekal Balaraj) ಅವರು ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ‘ಕರಿಯ’ ಸಿನಿಮಾ ನಿರ್ಮಾಣ ಮಾಡಿ ಬಾಲರಾಜ್​ ಅವರು ಯಶಸ್ಸು ಕಂಡಿದ್ದರು. ಅವರ ನಿಧನದ (Anekal Balaraj Death) ಸುದ್ದಿ ಕೇಳಿ ಸ್ಯಾಂಡಲ್​ವುಡ್​ನ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಭಾನುವಾರ (ಮೇ 15) ಬೆಳಗ್ಗೆ ಜೆ.ಪಿ. ನಗರದ ಅವರ ನಿವಾಸದ ಬಳಿ ವಾಕಿಂಗ್​ಗೆ ತೆರಳಿದ್ದಾಗ ಅಪಘಾತ (Bengaluru Accident) ಆಯಿತು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿ ಆಗದೇ ಅವರು ನಿಧನರಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆನೇಕಲ್​ ಬಾಲರಾಜ್ ಅವರಿಗೆ 58 ವರ್ಷ ವಯಸ್ಸಾಗಿತ್ತು.

ಆನೇಕಲ್​ ಬಾಲರಾಜ್​ ಅವರು ವಾಕಿಂಗ್​ ಮಾಡಲು ತೆರಳುತ್ತಿದ್ದಾಗ ಅವರಿಗೆ ವಾಹನವೊಂದು ಡಿಕ್ಕಿ ಹೊಡೆಯಿತು. ಫುಟ್​ ಪಾತ್​ ಮೇಲೆ ಬಿದ್ದ ಅವರಿಗೆ ಗಂಭೀರವಾಗಿ ಪೆಟ್ಟಾಯಿತು. ಇದರಿಂದ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ. ಘಟನೆ ಬಗ್ಗೆ ತನಿಖೆ ಆಗಬೇಕಿದೆ. ಕನ್ನಡ ಚಿತ್ರರಂಗದಲ್ಲಿ ಅನೇಕಲ್​ ಬಾಲರಾಜ್​ ಅವರು ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದರು. ಪ್ರೇಮ್​ ನಿರ್ದೇಶನದ ‘ಕರಿಯಾ’, ಶ್ರೀನಿವಾಸ್​ ಪ್ರಭು ನಿರ್ದೇಶನ ಮಾಡಿದ್ದ ‘ಕರಿಯಾ 2’, ‘ಗಣಪ’ ಸೇರಿದಂತೆ ಅನೇಕ ಸಿನಿಮಾಗಳನ್ನು ಆನೇಕಲ್​ ಬಾಲರಾಜ್​ ಅವರು ನಿರ್ಮಾಣ ಮಾಡಿದ್ದರು.

ಪುತ್ರನ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಆನೇಕಲ್​ ಬಾಲರಾಜ್​:

ಇದನ್ನೂ ಓದಿ
Image
ಕಿರುತೆರೆ ನಟಿ ಸುನೇತ್ರಾ ಅಪಘಾತಕ್ಕೆ ಒಳಗಾದ ಘಟನೆಯ ಸಿಸಿಟಿವಿ ದೃಶ್ಯ ಇಲ್ಲಿದೆ
Image
ರಸ್ತೆ ಅಪಘಾತದ ಬಳಿಕ ಸುನೇತ್ರಾ ಪಂಡಿತ್​ ಆರೋಗ್ಯ ಸ್ಥಿತಿ ಹೇಗಿದೆ? ಮಾಹಿತಿ ಹಂಚಿಕೊಂಡ ಪುತ್ರಿ ಶ್ರೇಯಾ
Image
ರಸ್ತೆ ಅಪಘಾತದಲ್ಲಿ ಖ್ಯಾತ ನಟಿ ಸುನೇತ್ರಾ ಪಂಡಿತ್​ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
Image
ಬೆಂಗಳೂರಿನ ಪ್ಯಾಲೇಸ್ ರಸ್ತೆಯಲ್ಲಿ ಭೀಕರ ಅಪಘಾತ; ಕೆಎಸ್ಆರ್‌ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವು

‘ಕರಿಯ’ ಸಿನಿಮಾದಿಂದ ಗೆಲುವು ಕಂಡ ಆನೇಕಲ್​ ಬಾಲರಾಜ್​ ಅವರು ನಂತರ ಅನೇಕ ಸಿನಿಮಾಗಳಿಗೆ ಬಂಡವಾಳ ಹೂಡಿದರು. ಅವರ ಪುತ್ರ ಸಂತೋಷ್​ ಕೂಡ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸಂತೋಷ್​ ನಟಿಸಿದ್ದ ‘ಕರಿಯ 2’ ಮತ್ತು ‘ಗಣಪ’ ಸಿನಿಮಾಗಳನ್ನು ಅನೇಕಲ್​ ಬಾಲರಾಜ್​ ನಿರ್ಮಾಣ ಮಾಡಿದರು. ಈ ಎರಡೂ ಸಿನಿಮಾಗಳು ಉತ್ತಮ ವಿಮರ್ಶೆ ಪಡೆದುಕೊಂಡಿದ್ದವು. ಇನ್ನೂ ಅನೇಕ ಚಿತ್ರಗಳನ್ನು ನಿರ್ಮಿಸುವ ಆಲೋಚನೆಯಲ್ಲಿದ್ದ ಅವರು ಈಗ ಇಹಲೋಕ ತ್ಯಜಿಸಿರುವುದು ನೋವಿನ ಸಂಗತಿ. ಅವರ ಅಗಲಿಕೆಗೆ ಸ್ಯಾಂಡಲ್​ವುಡ್​ ಕಲಾವಿದರು ಮತ್ತು ತಂತ್ರಜ್ಞರು ಕಂಬಿನಿ ಮಿಡಿಯುತ್ತಿದ್ದಾರೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

Published On - 11:45 am, Sun, 15 May 22

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು