AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anil Kumble: ‘ವಿಕ್ರಾಂತ್​ ರೋಣ’ ಚಿತ್ರ ವೀಕ್ಷಿಸಿ, ಸುದೀಪ್​ ನಟನೆ ಬಗ್ಗೆ ವಿಮರ್ಶೆ ತಿಳಿಸಿದ ಅನಿಲ್​ ಕುಂಬ್ಳೆ

Vikrant Rona | Kichcha Sudeep: ಅನಿಲ್​ ಕುಂಬ್ಳೆ ಅವರು ‘ವಿಕ್ರಾಂತ್​ ರೋಣ’ ನೋಡಿ ಅಭಿಪ್ರಾಯ ತಿಳಿಸಿದ್ದಾರೆ. ‘ಸಮಯ ಮಾಡಿಕೊಂಡು ನಮ್ಮ ಸಿನಿಮಾ ನೋಡಿದ್ದಕ್ಕೆ ಧನ್ಯವಾದಗಳು ಸರ್​’ ಎಂದು ಕಿಚ್ಚ ಸುದೀಪ್​ ಪ್ರತಿಕ್ರಿಯಿಸಿದ್ದಾರೆ.

Anil Kumble: ‘ವಿಕ್ರಾಂತ್​ ರೋಣ’ ಚಿತ್ರ ವೀಕ್ಷಿಸಿ, ಸುದೀಪ್​ ನಟನೆ ಬಗ್ಗೆ ವಿಮರ್ಶೆ ತಿಳಿಸಿದ ಅನಿಲ್​ ಕುಂಬ್ಳೆ
ಅನಿಲ್ ಕುಂಬ್ಳೆ, ಕಿಚ್ಚ ಸುದೀಪ್
TV9 Web
| Edited By: |

Updated on:Sep 08, 2022 | 7:28 AM

Share

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆಗಿದ್ದ ‘ವಿಕ್ರಾಂತ್​ ರೋಣ’ (Vikrant Rona) ಸಿನಿಮಾವನ್ನು ನೋಡಿ ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಫ್ಯಾನ್ಸ್​ ಮಾತ್ರವಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಸಿನಿಮಾ ನೋಡಿ ಎಂಜಾಯ್​ ಮಾಡಿದ್ದಾರೆ. ಭಾರತ ಕ್ರಿಕೆಟ್​ ತಂಡದ ಮಾಜಿ ಸ್ಪಿನ್ನರ್​ ಅನಿಲ್ ಕುಂಬ್ಳೆ (Anil Kumble) ಸಹ ‘ವಿಕ್ರಾಂತ್​ ರೋಣ’ ಚಿತ್ರವನ್ನು ವೀಕ್ಷಿಸಿದ್ದಾರೆ. ಸಿನಿಮಾ ನೋಡಿ ಮೆಚ್ಚಿಕೊಂಡಿರುವ ಅವರು ತಮ್ಮ ವಿಮರ್ಶೆ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದ ಜೊತೆ ಅನಿಲ್​ ಕುಂಬ್ಳೆ ಅವರು ಮೊದಲಿನಿಂದಲೂ ನಂಟು ಹೊಂದಿದ್ದಾರೆ. ಅವರ ಮತ್ತು ಸುದೀಪ್​ (Kichcha Sudeep) ನಡುವೆ ಉತ್ತಮ ಸ್ನೇಹ ಇದೆ. ಈಗ ಸ್ನೇಹಿತನ ಚಿತ್ರಕ್ಕೆ ಅವರು ಭೇಷ್​ ಎಂದಿದ್ದಾರೆ. ಅನೂಪ್​ ಭಂಡಾರಿ ನಿರ್ದೇಶನದ ಈ ಸಿನಿಮಾಗೆ ಜಾಕ್​ ಮಂಜು ಬಂಡವಾಳ ಹೂಡಿದ್ದಾರೆ. ಒಟಿಟಿಯಲ್ಲೂ ‘ವಿಕ್ರಾಂತ್​ ರೋಣ’ ಚಿತ್ರ ಧೂಳೆಬ್ಬಿಸುತ್ತಿದೆ.

‘ವಿಕ್ರಾಂತ್​ ರೋಣ’ ಸಿನಿಮಾದಲ್ಲಿ ಒಂದು ಸಸ್ಪೆನ್ಸ್​ ಕಥೆ ಇದೆ. ಅದೇ ಈ ಚಿತ್ರದ ಜೀವಾಳ. ಸಿನಿಮಾದ ಆ ಗುಣ ಅನಿಲ್​ ಕುಂಬ್ಳೆ ಅವರಿಗೆ ಇಷ್ಟ ಆಗಿದೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದಾರೆ. ‘ವಿಕ್ರಾಂತ್​ ರೋಣ ಸಿನಿಮಾ ನೋಡಿದೆ. ನನ್ನ ಪ್ರೀತಿಯ ಸ್ನೇಹಿತ ಕಿಚ್ಚ ಸುದೀಪ್​ ಅವರ ನಟನೆ ಆಕರ್ಷಕವಾಗಿದೆ. ಕೊನೆವರೆಗೂ ಈ ಸಿನಿಮಾ ಸಸ್ಪೆನ್ಸ್​ ಕಾಯ್ದುಕೊಂಡಿದೆ. ವಿಜಯ್​ ಪ್ರಕಾಶ್​ ಅವರ ಹಾಡು ಅದ್ಭುತವಾಗಿದೆ. ಅನೂಪ್​ ಭಂಡಾರಿ ಮತ್ತು ಅವರ ಇಡೀ ತಂಡಕ್ಕೆ ಅಭಿನಂದನೆಗಳು’ ಎಂದು ಅನಿಲ್​ ಕುಂಬ್ಳೆ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Kiccha Sudeep: ಜೋಸ್ ಬಟ್ಲರ್​ನಿಂದ ಸುದೀಪ್​ಗೆ ಬಂತು ಸರ್​​ಪ್ರೈಸ್ ಗಿಫ್ಟ್: ಥ್ರಿಲ್ ಆದ ಕಿಚ್ಚ
Image
‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​
Image
ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ
Image
Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​

‘ಸಮಯ ಮಾಡಿಕೊಂಡು ನಮ್ಮ ಸಿನಿಮಾ ನೋಡಿದ್ದಕ್ಕೆ ಧನ್ಯವಾದಗಳು ಸರ್​’ ಎಂದು ಕಿಚ್ಚ ಸುದೀಪ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಜೀ 5’ ಒಟಿಟಿ ಮೂಲಕ ‘ವಿಕ್ರಾಂತ್​ ರೋಣ’ ಚಿತ್ರ ವೀಕ್ಷಣೆಗೆ ಲಭ್ಯವಾಗಿದೆ. ದಾಖಲೆ ಪ್ರಮಾಣದಲ್ಲಿ ವೀಕ್ಷಣೆ ಕಂಡಿರುವುದು ಚಿತ್ರತಂಡದ ಖುಷಿಗೆ ಕಾರಣ ಆಗಿದೆ. ಚಿತ್ರಮಂದಿರದಲ್ಲಿ ಅಬ್ಬರಿಸಿದ ಬಳಿಕ ಒಟಿಟಿಯಲ್ಲಿ 500 ಮಿಲಿಯನ್​ ನಿಮಿಷಗಳಷ್ಟು ವೀಕ್ಷಣೆ ಕಂಡಿದ್ದು ಇಡೀ ತಂಡಕ್ಕೆ ಹೆಮ್ಮೆ ತಂದಿದೆ. ‘ಜೀ 5’ನಲ್ಲಿ ಚಿತ್ರದ ನಾಗಾಲೋಟ ಮುಂದುವರಿದಿದೆ.

ಈ ಸಿನಿಮಾದಲ್ಲಿ ಕಿಚ್ಚ ಸುದೀಪ್​ ಜೊತೆಗೆ ನೀತಾ ಅಶೋಕ್​, ಜಾಕ್ವೆಲಿನ್​ ಫರ್ನಾಂಡಿಸ್​, ನಿರೂಪ್​ ಭಂಡಾರಿ, ಮಿಲನಾ ನಾಗರಾಜ್​ ಮುಂತಾದವರು ನಟಿಸಿದ್ದಾರೆ. ಅಜನೀಶ್​ ಬಿ. ಲೋಕನಾಥ್​ ಸಂಗೀತ ನೀಡಿರುವ ಹಾಡುಗಳು ಜನಮನ ಗೆದ್ದಿವೆ. ಅದರಲ್ಲೂ ‘ರಾ ರಾ ರಕ್ಕಮ್ಮ..’ ಹಾಡು ಸೆನ್ಸೇಷನಲ್​ ಹಿಟ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:28 am, Thu, 8 September 22

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!