AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಜಮಾನ’ ಮುಹೂರ್ತ ನಡೆದ ದೈವಿ ಸ್ಥಳದಲ್ಲೇ ಸೆಟ್ಟೇರಿತು ಅನಿರುದ್ಧ್​ ಹೊಸ ಸಿನಿಮಾ ‘ಶೆಫ್​ ಚಿದಂಬರ’

Chef Chidambara Kannada Movie: ಅನಿರುದ್ಧ್​ ನಟನೆಯ ‘ಶೆಫ್​ ಚಿದಂಬರ’ ಸಿನಿಮಾಗೆ ಎಂ. ಆನಂದರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಗುರುವಾರ (ಆಗಸ್ಟ್​ 10) ಈ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ. ಉಪೇಂದ್ರ, ಭಾರತಿ ವಿಷ್ಣುವರ್ಧನ್​ ಅವರು ಅತಿಥಿಗಳಾಗಿ ಬಂದು ಚಿತ್ರತಂಡಕ್ಕೆ ವಿಶ್​ ಮಾಡಿದ್ದಾರೆ.

‘ಯಜಮಾನ’ ಮುಹೂರ್ತ ನಡೆದ ದೈವಿ ಸ್ಥಳದಲ್ಲೇ ಸೆಟ್ಟೇರಿತು ಅನಿರುದ್ಧ್​ ಹೊಸ ಸಿನಿಮಾ ‘ಶೆಫ್​ ಚಿದಂಬರ’
‘ಶೆಫ್​ ಚಿದಂಬರ’ ಸಿನಿಮಾ ಮುಹೂರ್ತ ಸಮಾರಂಭ
ಮದನ್​ ಕುಮಾರ್​
|

Updated on: Aug 10, 2023 | 8:53 PM

Share

ಕನ್ನಡ ಚಿತ್ರರಂಗಕ್ಕೆ ಡಾ. ವಿಷ್ಣುವರ್ಧನ್​ ಮತ್ತು ಅವರ ಕುಟುಂಬದವರು ನೀಡಿದ ಕೊಡುಗೆ ಅಪಾರ. 200 ಸಿನಿಮಾಗಳ ಮೂಲಕ ವಿಷ್ಣುವರ್ಧನ್​ ಅವರು ಅಭಿಮಾನಿಗಳನ್ನು ಭರಪೂರ ರಂಜಿಸಿದ್ದರು. ಅವರ ಅಳಿಯ ಅನಿರುದ್ಧ್​ ಜತ್ಕರ್​ (Aniruddha Jatkar) ಕೂಡ ತಮ್ಮದೇ ಆದ ರೀತಿಯ ಗುರುತಿಸಿಕೊಂಡಿದ್ದಾರೆ. ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಅವರು ಸೈ ಎನಿಸಿಕೊಂಡಿದ್ದಾರೆ. ಇಂದು (ಆಗಸ್ಟ್​ 10) ಅವರ ಹೊಸ ಸಿನಿಮಾ ಸೆಟ್ಟೇರಿದೆ. ‘ಶೆಫ್​ ಚಿದಂಬರ’ (Chef Chidambara) ಎಂಬುದು ಈ ಸಿನಿಮಾದ ಶೀರ್ಷಿಕೆ. ವಿಷ್ಣುವರ್ಧನ್​ ನಟನೆಯ ಸೂಪರ್​ ಹಿಟ್​ ‘ಯಜಮಾನ’ ಸಿನಿಮಾಗೆ ಮುಹೂರ್ತ ನಡೆದಿದ್ದ ರಾಮಾಂಜನೇಯ ದೇವಸ್ಥಾನದಲ್ಲೇ ‘ಶೆಫ್​ ಚಿದಂಬರ’ ಚಿತ್ರಕ್ಕೆ ಮುಹೂರ್ತ ನೆರವೇರಿದೆ ಎಂಬುದು ವಿಶೇಷ. ಭಾರತಿ ವಿಷ್ಣುವರ್ಧನ್​ (Bharathi Vishnuvardhan), ಉಪೇಂದ್ರ ಮುಂತಾದವರು ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಕಿರುತೆರೆ ಸೀರಿಯಲ್​ಗಳಲ್ಲಿ ಬ್ಯುಸಿ ಆಗಿದ್ದ ಅನಿರುದ್ಧ್​ ಅವರು ಒಂದಷ್ಟು ವರ್ಷಗಳ ಕಾಲ ಸಿನಿಮಾದಿಂದ ದೂರ ಉಳಿದುಕೊಂಡಿದ್ದರು. ಈಗ ‘ಶೆಫ್​ ಚಿದಂಬರ’ ಮೂಲಕ ಅವರು ಮತ್ತೆ ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಬೆಂಗಳೂರಿನ ಹನುಮಂತ ನಗರದ ರಾಮಾಂಜನೇಯ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಚಿತ್ರದ ಮೊದಲ ದೃಶ್ಯಕ್ಕೆ ಉಪೇಂದ್ರ ಅವರು ಆರಂಭ ಫಲಕ ತೋರಿದರು. ಭಾರತಿ ವಿಷ್ಣುವರ್ಧನ್​ ಅವರು ಕ್ಯಾಮೆರಾ ಚಾಲನೆ ಮಾಡಿದರು. ‘ಈ ಜಾಗಕ್ಕೆ ಬಂದಾಗ ವಿಷ್ಣುವರ್ಧನ್​ ಅವರ ‘ಯಜಮಾನ’ ಸಿನಿಮಾ ಮುಹೂರ್ತ ಸಮಾರಂಭ ನೆನಪಾಯಿತು. ಆ ಸಿನಿಮಾದ ಮುಹೂರ್ತ ಸಹ ಇಲ್ಲಿಯೇ ನಡೆದಿತ್ತು. ಅದೇ ರೀತಿ ಶೆಫ್​ ಚಿದಂಬರ ಚಿತ್ರಕ್ಕೂ ಒಳ್ಳೆಯದಾಗಲಿ’ ಎಂದು ಭಾರತಿ ವಿಷ್ಣುವರ್ಧನ್ ಶುಭಕೋರಿದರು.

ರೂಪ ಡಿ.ಎನ್. ಅವರು ನಿರ್ಮಾಣ ಮಾಡುತ್ತಿರುವ ‘ಶೆಫ್​ ಚಿದಂಬರ’ ಸಿನಿಮಾಗೆ ಎಂ. ಆನಂದರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಡಾರ್ಕ್ ಕಾಮಿಡಿ ಕಥಾಹಂದರ ಇರಲಿದೆ. ಅನಿರುದ್ಧ್​ ಅವರಿಗೆ ನಾಯಕಿಯರಾಗಿ ರೇಚಲ್ ಡೇವಿಡ್ ಮತ್ತು ನಿಧಿ ಸುಬ್ಬಯ್ಯ ಅವರು ಅಭಿನಯಿಸುತ್ತಿದ್ದಾರೆ. ಶರತ್ ಲೋಹಿತಾಶ್ವ, ಶಿವಮಣಿ, ರಘು ರಮಣಕೊಪ್ಪ, ಕೆ.ಎಸ್. ಶ್ರೀಧರ್ ಸೇರಿದಂತೆ ಹಲವು ಕಲಾವಿದರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ.

ಹೇಗಿದೆ ನೋಡಿ ವಿಷ್ಣುವರ್ಧನ್​ ಹೊಸ ಮನೆ; ‘ವಲ್ಮೀಕ’ ಗೃಹ ಪ್ರವೇಶದಲ್ಲಿ ಅನಿರುದ್ಧ್​ ಕುಟುಂಬ

ಉದಯ್ ಲೀಲ ಅವರ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಅವರ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಅವರ ಸಂಕಲನದಲ್ಲಿ ‘ಶೆಫ್​ ಚಿದಂಬರ’ ಸಿನಿಮಾ ಮೂಡಿಬರಲಿದೆ. ಬಿ.ಆರ್. ನವೀನ್ ಕುಮಾರ್ ಅವರು ಸೌಂಡ್ ಡಿಸೈನ್ ಮಾಡುತ್ತಿದ್ದಾರೆ. ಈ ಸಿನಿಮಾದ ಕ್ಯಾರೆಕ್ಟರ್​ ಟೀಸರ್​ ಅನ್ನು ಉಪೇಂದ್ರ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಕಿಚ್ಚ ಸುದೀಪ್​ ಅವರು ಈ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಿದ್ದರು. ಈ ಎಲ್ಲ ಕಾರಣಗಳಿಂದಾಗಿ ‘ಶೆಫ್​ ಚಿದಂಬರ’ ಸಿನಿಮಾ ಸುದ್ದಿಯಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ