AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಜಮಾನ’ ಮುಹೂರ್ತ ನಡೆದ ದೈವಿ ಸ್ಥಳದಲ್ಲೇ ಸೆಟ್ಟೇರಿತು ಅನಿರುದ್ಧ್​ ಹೊಸ ಸಿನಿಮಾ ‘ಶೆಫ್​ ಚಿದಂಬರ’

Chef Chidambara Kannada Movie: ಅನಿರುದ್ಧ್​ ನಟನೆಯ ‘ಶೆಫ್​ ಚಿದಂಬರ’ ಸಿನಿಮಾಗೆ ಎಂ. ಆನಂದರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಗುರುವಾರ (ಆಗಸ್ಟ್​ 10) ಈ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ. ಉಪೇಂದ್ರ, ಭಾರತಿ ವಿಷ್ಣುವರ್ಧನ್​ ಅವರು ಅತಿಥಿಗಳಾಗಿ ಬಂದು ಚಿತ್ರತಂಡಕ್ಕೆ ವಿಶ್​ ಮಾಡಿದ್ದಾರೆ.

‘ಯಜಮಾನ’ ಮುಹೂರ್ತ ನಡೆದ ದೈವಿ ಸ್ಥಳದಲ್ಲೇ ಸೆಟ್ಟೇರಿತು ಅನಿರುದ್ಧ್​ ಹೊಸ ಸಿನಿಮಾ ‘ಶೆಫ್​ ಚಿದಂಬರ’
‘ಶೆಫ್​ ಚಿದಂಬರ’ ಸಿನಿಮಾ ಮುಹೂರ್ತ ಸಮಾರಂಭ
ಮದನ್​ ಕುಮಾರ್​
|

Updated on: Aug 10, 2023 | 8:53 PM

Share

ಕನ್ನಡ ಚಿತ್ರರಂಗಕ್ಕೆ ಡಾ. ವಿಷ್ಣುವರ್ಧನ್​ ಮತ್ತು ಅವರ ಕುಟುಂಬದವರು ನೀಡಿದ ಕೊಡುಗೆ ಅಪಾರ. 200 ಸಿನಿಮಾಗಳ ಮೂಲಕ ವಿಷ್ಣುವರ್ಧನ್​ ಅವರು ಅಭಿಮಾನಿಗಳನ್ನು ಭರಪೂರ ರಂಜಿಸಿದ್ದರು. ಅವರ ಅಳಿಯ ಅನಿರುದ್ಧ್​ ಜತ್ಕರ್​ (Aniruddha Jatkar) ಕೂಡ ತಮ್ಮದೇ ಆದ ರೀತಿಯ ಗುರುತಿಸಿಕೊಂಡಿದ್ದಾರೆ. ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಅವರು ಸೈ ಎನಿಸಿಕೊಂಡಿದ್ದಾರೆ. ಇಂದು (ಆಗಸ್ಟ್​ 10) ಅವರ ಹೊಸ ಸಿನಿಮಾ ಸೆಟ್ಟೇರಿದೆ. ‘ಶೆಫ್​ ಚಿದಂಬರ’ (Chef Chidambara) ಎಂಬುದು ಈ ಸಿನಿಮಾದ ಶೀರ್ಷಿಕೆ. ವಿಷ್ಣುವರ್ಧನ್​ ನಟನೆಯ ಸೂಪರ್​ ಹಿಟ್​ ‘ಯಜಮಾನ’ ಸಿನಿಮಾಗೆ ಮುಹೂರ್ತ ನಡೆದಿದ್ದ ರಾಮಾಂಜನೇಯ ದೇವಸ್ಥಾನದಲ್ಲೇ ‘ಶೆಫ್​ ಚಿದಂಬರ’ ಚಿತ್ರಕ್ಕೆ ಮುಹೂರ್ತ ನೆರವೇರಿದೆ ಎಂಬುದು ವಿಶೇಷ. ಭಾರತಿ ವಿಷ್ಣುವರ್ಧನ್​ (Bharathi Vishnuvardhan), ಉಪೇಂದ್ರ ಮುಂತಾದವರು ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಕಿರುತೆರೆ ಸೀರಿಯಲ್​ಗಳಲ್ಲಿ ಬ್ಯುಸಿ ಆಗಿದ್ದ ಅನಿರುದ್ಧ್​ ಅವರು ಒಂದಷ್ಟು ವರ್ಷಗಳ ಕಾಲ ಸಿನಿಮಾದಿಂದ ದೂರ ಉಳಿದುಕೊಂಡಿದ್ದರು. ಈಗ ‘ಶೆಫ್​ ಚಿದಂಬರ’ ಮೂಲಕ ಅವರು ಮತ್ತೆ ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಬೆಂಗಳೂರಿನ ಹನುಮಂತ ನಗರದ ರಾಮಾಂಜನೇಯ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಚಿತ್ರದ ಮೊದಲ ದೃಶ್ಯಕ್ಕೆ ಉಪೇಂದ್ರ ಅವರು ಆರಂಭ ಫಲಕ ತೋರಿದರು. ಭಾರತಿ ವಿಷ್ಣುವರ್ಧನ್​ ಅವರು ಕ್ಯಾಮೆರಾ ಚಾಲನೆ ಮಾಡಿದರು. ‘ಈ ಜಾಗಕ್ಕೆ ಬಂದಾಗ ವಿಷ್ಣುವರ್ಧನ್​ ಅವರ ‘ಯಜಮಾನ’ ಸಿನಿಮಾ ಮುಹೂರ್ತ ಸಮಾರಂಭ ನೆನಪಾಯಿತು. ಆ ಸಿನಿಮಾದ ಮುಹೂರ್ತ ಸಹ ಇಲ್ಲಿಯೇ ನಡೆದಿತ್ತು. ಅದೇ ರೀತಿ ಶೆಫ್​ ಚಿದಂಬರ ಚಿತ್ರಕ್ಕೂ ಒಳ್ಳೆಯದಾಗಲಿ’ ಎಂದು ಭಾರತಿ ವಿಷ್ಣುವರ್ಧನ್ ಶುಭಕೋರಿದರು.

ರೂಪ ಡಿ.ಎನ್. ಅವರು ನಿರ್ಮಾಣ ಮಾಡುತ್ತಿರುವ ‘ಶೆಫ್​ ಚಿದಂಬರ’ ಸಿನಿಮಾಗೆ ಎಂ. ಆನಂದರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಡಾರ್ಕ್ ಕಾಮಿಡಿ ಕಥಾಹಂದರ ಇರಲಿದೆ. ಅನಿರುದ್ಧ್​ ಅವರಿಗೆ ನಾಯಕಿಯರಾಗಿ ರೇಚಲ್ ಡೇವಿಡ್ ಮತ್ತು ನಿಧಿ ಸುಬ್ಬಯ್ಯ ಅವರು ಅಭಿನಯಿಸುತ್ತಿದ್ದಾರೆ. ಶರತ್ ಲೋಹಿತಾಶ್ವ, ಶಿವಮಣಿ, ರಘು ರಮಣಕೊಪ್ಪ, ಕೆ.ಎಸ್. ಶ್ರೀಧರ್ ಸೇರಿದಂತೆ ಹಲವು ಕಲಾವಿದರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ.

ಹೇಗಿದೆ ನೋಡಿ ವಿಷ್ಣುವರ್ಧನ್​ ಹೊಸ ಮನೆ; ‘ವಲ್ಮೀಕ’ ಗೃಹ ಪ್ರವೇಶದಲ್ಲಿ ಅನಿರುದ್ಧ್​ ಕುಟುಂಬ

ಉದಯ್ ಲೀಲ ಅವರ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಅವರ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಅವರ ಸಂಕಲನದಲ್ಲಿ ‘ಶೆಫ್​ ಚಿದಂಬರ’ ಸಿನಿಮಾ ಮೂಡಿಬರಲಿದೆ. ಬಿ.ಆರ್. ನವೀನ್ ಕುಮಾರ್ ಅವರು ಸೌಂಡ್ ಡಿಸೈನ್ ಮಾಡುತ್ತಿದ್ದಾರೆ. ಈ ಸಿನಿಮಾದ ಕ್ಯಾರೆಕ್ಟರ್​ ಟೀಸರ್​ ಅನ್ನು ಉಪೇಂದ್ರ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಕಿಚ್ಚ ಸುದೀಪ್​ ಅವರು ಈ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಿದ್ದರು. ಈ ಎಲ್ಲ ಕಾರಣಗಳಿಂದಾಗಿ ‘ಶೆಫ್​ ಚಿದಂಬರ’ ಸಿನಿಮಾ ಸುದ್ದಿಯಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?