‘ಯಜಮಾನ’ ಮುಹೂರ್ತ ನಡೆದ ದೈವಿ ಸ್ಥಳದಲ್ಲೇ ಸೆಟ್ಟೇರಿತು ಅನಿರುದ್ಧ್​ ಹೊಸ ಸಿನಿಮಾ ‘ಶೆಫ್​ ಚಿದಂಬರ’

Chef Chidambara Kannada Movie: ಅನಿರುದ್ಧ್​ ನಟನೆಯ ‘ಶೆಫ್​ ಚಿದಂಬರ’ ಸಿನಿಮಾಗೆ ಎಂ. ಆನಂದರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಗುರುವಾರ (ಆಗಸ್ಟ್​ 10) ಈ ಚಿತ್ರಕ್ಕೆ ಮುಹೂರ್ತ ನೆರವೇರಿಸಲಾಗಿದೆ. ಉಪೇಂದ್ರ, ಭಾರತಿ ವಿಷ್ಣುವರ್ಧನ್​ ಅವರು ಅತಿಥಿಗಳಾಗಿ ಬಂದು ಚಿತ್ರತಂಡಕ್ಕೆ ವಿಶ್​ ಮಾಡಿದ್ದಾರೆ.

‘ಯಜಮಾನ’ ಮುಹೂರ್ತ ನಡೆದ ದೈವಿ ಸ್ಥಳದಲ್ಲೇ ಸೆಟ್ಟೇರಿತು ಅನಿರುದ್ಧ್​ ಹೊಸ ಸಿನಿಮಾ ‘ಶೆಫ್​ ಚಿದಂಬರ’
‘ಶೆಫ್​ ಚಿದಂಬರ’ ಸಿನಿಮಾ ಮುಹೂರ್ತ ಸಮಾರಂಭ
Follow us
|

Updated on: Aug 10, 2023 | 8:53 PM

ಕನ್ನಡ ಚಿತ್ರರಂಗಕ್ಕೆ ಡಾ. ವಿಷ್ಣುವರ್ಧನ್​ ಮತ್ತು ಅವರ ಕುಟುಂಬದವರು ನೀಡಿದ ಕೊಡುಗೆ ಅಪಾರ. 200 ಸಿನಿಮಾಗಳ ಮೂಲಕ ವಿಷ್ಣುವರ್ಧನ್​ ಅವರು ಅಭಿಮಾನಿಗಳನ್ನು ಭರಪೂರ ರಂಜಿಸಿದ್ದರು. ಅವರ ಅಳಿಯ ಅನಿರುದ್ಧ್​ ಜತ್ಕರ್​ (Aniruddha Jatkar) ಕೂಡ ತಮ್ಮದೇ ಆದ ರೀತಿಯ ಗುರುತಿಸಿಕೊಂಡಿದ್ದಾರೆ. ಕಿರುತೆರೆ ಮತ್ತು ಹಿರಿತೆರೆ ಎರಡರಲ್ಲೂ ಅವರು ಸೈ ಎನಿಸಿಕೊಂಡಿದ್ದಾರೆ. ಇಂದು (ಆಗಸ್ಟ್​ 10) ಅವರ ಹೊಸ ಸಿನಿಮಾ ಸೆಟ್ಟೇರಿದೆ. ‘ಶೆಫ್​ ಚಿದಂಬರ’ (Chef Chidambara) ಎಂಬುದು ಈ ಸಿನಿಮಾದ ಶೀರ್ಷಿಕೆ. ವಿಷ್ಣುವರ್ಧನ್​ ನಟನೆಯ ಸೂಪರ್​ ಹಿಟ್​ ‘ಯಜಮಾನ’ ಸಿನಿಮಾಗೆ ಮುಹೂರ್ತ ನಡೆದಿದ್ದ ರಾಮಾಂಜನೇಯ ದೇವಸ್ಥಾನದಲ್ಲೇ ‘ಶೆಫ್​ ಚಿದಂಬರ’ ಚಿತ್ರಕ್ಕೆ ಮುಹೂರ್ತ ನೆರವೇರಿದೆ ಎಂಬುದು ವಿಶೇಷ. ಭಾರತಿ ವಿಷ್ಣುವರ್ಧನ್​ (Bharathi Vishnuvardhan), ಉಪೇಂದ್ರ ಮುಂತಾದವರು ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಕಿರುತೆರೆ ಸೀರಿಯಲ್​ಗಳಲ್ಲಿ ಬ್ಯುಸಿ ಆಗಿದ್ದ ಅನಿರುದ್ಧ್​ ಅವರು ಒಂದಷ್ಟು ವರ್ಷಗಳ ಕಾಲ ಸಿನಿಮಾದಿಂದ ದೂರ ಉಳಿದುಕೊಂಡಿದ್ದರು. ಈಗ ‘ಶೆಫ್​ ಚಿದಂಬರ’ ಮೂಲಕ ಅವರು ಮತ್ತೆ ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಬೆಂಗಳೂರಿನ ಹನುಮಂತ ನಗರದ ರಾಮಾಂಜನೇಯ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ. ಚಿತ್ರದ ಮೊದಲ ದೃಶ್ಯಕ್ಕೆ ಉಪೇಂದ್ರ ಅವರು ಆರಂಭ ಫಲಕ ತೋರಿದರು. ಭಾರತಿ ವಿಷ್ಣುವರ್ಧನ್​ ಅವರು ಕ್ಯಾಮೆರಾ ಚಾಲನೆ ಮಾಡಿದರು. ‘ಈ ಜಾಗಕ್ಕೆ ಬಂದಾಗ ವಿಷ್ಣುವರ್ಧನ್​ ಅವರ ‘ಯಜಮಾನ’ ಸಿನಿಮಾ ಮುಹೂರ್ತ ಸಮಾರಂಭ ನೆನಪಾಯಿತು. ಆ ಸಿನಿಮಾದ ಮುಹೂರ್ತ ಸಹ ಇಲ್ಲಿಯೇ ನಡೆದಿತ್ತು. ಅದೇ ರೀತಿ ಶೆಫ್​ ಚಿದಂಬರ ಚಿತ್ರಕ್ಕೂ ಒಳ್ಳೆಯದಾಗಲಿ’ ಎಂದು ಭಾರತಿ ವಿಷ್ಣುವರ್ಧನ್ ಶುಭಕೋರಿದರು.

ರೂಪ ಡಿ.ಎನ್. ಅವರು ನಿರ್ಮಾಣ ಮಾಡುತ್ತಿರುವ ‘ಶೆಫ್​ ಚಿದಂಬರ’ ಸಿನಿಮಾಗೆ ಎಂ. ಆನಂದರಾಜ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಡಾರ್ಕ್ ಕಾಮಿಡಿ ಕಥಾಹಂದರ ಇರಲಿದೆ. ಅನಿರುದ್ಧ್​ ಅವರಿಗೆ ನಾಯಕಿಯರಾಗಿ ರೇಚಲ್ ಡೇವಿಡ್ ಮತ್ತು ನಿಧಿ ಸುಬ್ಬಯ್ಯ ಅವರು ಅಭಿನಯಿಸುತ್ತಿದ್ದಾರೆ. ಶರತ್ ಲೋಹಿತಾಶ್ವ, ಶಿವಮಣಿ, ರಘು ರಮಣಕೊಪ್ಪ, ಕೆ.ಎಸ್. ಶ್ರೀಧರ್ ಸೇರಿದಂತೆ ಹಲವು ಕಲಾವಿದರು ಈ ಚಿತ್ರದ ಪಾತ್ರವರ್ಗದಲ್ಲಿ ಇದ್ದಾರೆ.

ಹೇಗಿದೆ ನೋಡಿ ವಿಷ್ಣುವರ್ಧನ್​ ಹೊಸ ಮನೆ; ‘ವಲ್ಮೀಕ’ ಗೃಹ ಪ್ರವೇಶದಲ್ಲಿ ಅನಿರುದ್ಧ್​ ಕುಟುಂಬ

ಉದಯ್ ಲೀಲ ಅವರ ಛಾಯಾಗ್ರಹಣ, ರಿತ್ವಿಕ್ ಮುರಳಿಧರ್ ಅವರ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಅವರ ಸಂಕಲನದಲ್ಲಿ ‘ಶೆಫ್​ ಚಿದಂಬರ’ ಸಿನಿಮಾ ಮೂಡಿಬರಲಿದೆ. ಬಿ.ಆರ್. ನವೀನ್ ಕುಮಾರ್ ಅವರು ಸೌಂಡ್ ಡಿಸೈನ್ ಮಾಡುತ್ತಿದ್ದಾರೆ. ಈ ಸಿನಿಮಾದ ಕ್ಯಾರೆಕ್ಟರ್​ ಟೀಸರ್​ ಅನ್ನು ಉಪೇಂದ್ರ ಬಿಡುಗಡೆ ಮಾಡಿದ್ದಾರೆ. ಇತ್ತೀಚೆಗೆ ಕಿಚ್ಚ ಸುದೀಪ್​ ಅವರು ಈ ಸಿನಿಮಾದ ಪೋಸ್ಟರ್​ ಬಿಡುಗಡೆ ಮಾಡಿದ್ದರು. ಈ ಎಲ್ಲ ಕಾರಣಗಳಿಂದಾಗಿ ‘ಶೆಫ್​ ಚಿದಂಬರ’ ಸಿನಿಮಾ ಸುದ್ದಿಯಲ್ಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ