AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶೆಫ್​ ಚಿದಂಬರ’ ಸಿನಿಮಾದ ಮೊದಲ ಹಾಡಿಗಾಗಿ ಮೈಕ್​ ಹಿಡಿದ ಅನಿರುದ್ಧ್​

ಅನಿರುದ್ಧ್​ ಜತ್ಕರ್​ ಅವರು ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ಬ್ಯುಸಿ ಆಗಿದ್ದಾರೆ. ಅವರು ನಟಿಸಿರುವ ‘ಶೆಫ್​ ಚಿದಂಬರ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈಗ ಈ ಸಿನಿಮಾದ ಮೊದಲ ಹಾಡನ್ನು ರಿಲೀಸ್​ ಮಾಡಲಾಗಿದೆ. ಸ್ವತಃ ಅನಿರುದ್ಧ್​ ಅವರೇ ಈ ಹಾಡಿಗೆ ಧ್ವನಿ ನೀಡಿದ್ದಾರೆ. ರಿತ್ವಿಕ್​ ಮುರಳಿಧರ್​ ಸಂಗೀತ ನೀಡಿದ್ದು, ಗಣೇಶ್ ಪರಶುರಾಮ್ ಸಾಹಿತ್ಯ ಬರೆದಿದ್ದಾರೆ.

‘ಶೆಫ್​ ಚಿದಂಬರ’ ಸಿನಿಮಾದ ಮೊದಲ ಹಾಡಿಗಾಗಿ ಮೈಕ್​ ಹಿಡಿದ ಅನಿರುದ್ಧ್​
ಅನಿರುದ್ಧ್​ ಜತ್ಕರ್​
ಮದನ್​ ಕುಮಾರ್​
|

Updated on: May 12, 2024 | 4:38 PM

Share

ಒಂದಷ್ಟು ಕಾರಣಗಳಿಂದ ‘ಶೆಫ್​ ಚಿದಂಬರ’ (Chef Chidambara) ಸಿನಿಮಾ ಸುದ್ದಿ ಆಗುತ್ತಿದೆ. ಈ ಸಿನಿಮಾದಲ್ಲಿ ನಟ ಅನಿರುದ್ಧ್​ ಜತ್ಕರ್​ (Anirudh Jatkar) ಅವರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಮತ್ತು ‘ಲವ್ ಮಾಕ್ಟೇಲ್ 2’ ಸಿನಿಮಾದ ಖ್ಯಾತಿಯ ರೆಚೆಲ್ ಡೇವಿಡ್‌ ಅವರು ನಟಿಸುತ್ತಿದ್ದಾರೆ. ಕೆ.ಎಸ್. ಶ್ರೀಧರ್‌, ಶರತ್ ಲೋಹಿತಾಶ್ವ, ಶಿವಮಣಿ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ‘ಶೆಫ್​ ಚಿದಂಬರ’ ಸಿನಿಮಾದ ಮೊದಲ ಹಾಡು (Chef Chidambara Movie Song) ಬಿಡುಗಡೆ ಆಗಿದೆ.

‘ಶೆಫ್​ ಚಿದಂಬರ’ ಸಿನಿಮಾಗೆ ಎಂ. ಆನಂದರಾಜ್ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಮತ್ತು ಪೊಸ್ಟ್ ಪ್ರೊಡಕ್ಷನ್ ಕೆಲಸ ಪೂರ್ಣಗೊಂಡಿದೆ. ಶೀಘ್ರದಲ್ಲೇ ಸಿನಿಮಾ ತೆರೆಗೆ ಬರಲಿದೆ. ಆರಂಭದಲ್ಲೇ ಫಸ್ಟ್ ಲುಕ್ ಪೋಸ್ಟರ್ ಮೂಲಕ ಈ ಸಿನಿಮಾ ಸಾಕಷ್ಟು ಕೌತುಕ ಮೂಡಿಸಿತ್ತು. ಈಗ ಶೀರ್ಷಿಕೆ ಗೀತೆ ಬಿಡುಗಡೆ ಆಗಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸಿದೆ.

‘A2 music’ ಮೂಲಕ ‘ಶೆಫ್​ ಚಿದಂಬರ’ ಸಿನಿಮಾದ ಮೊದಲ ಹಾಡು ಬಿಡುಗಡೆ ಆಗಿದೆ. ಗಣೇಶ್ ಪರಶುರಾಮ್ ಅವರು ಈ ಸಾಂಗ್​ ಬರೆದಿದ್ದಾರೆ. ರಿತ್ವಿಕ್ ಮುರಳಿಧರ್ ಅವರು ಸಂಗೀತ ನೀಡಿದ್ದಾರೆ. ಈ ಹಾಡಿಗೆ ಸ್ವತಃ ಅನಿರುದ್ಧ್ ಜತ್ಕರ್​ ಅವರೇ ಧ್ವನಿ ನೀಡಿದ್ದಾರೆ ಎಂಬುದು ವಿಶೇಷ. ಅನಿರುದ್ದ್ ಅವರ ಕಂಠದಲ್ಲಿ ಮೂಡಿ ಬಂದ ಈ ಹಾಡು ಅವರ ಅಭಿಮಾನಿಗಳಿಗೆ ಇಷ್ಟ ಆಗಿದೆ.

ಈ ಹಾಡಿನ ಕೆಲವು ಭಾಗ ರ‍್ಯಾಪ್​ ಶೈಲಿಯಲ್ಲಿದೆ. ಇದನ್ನು ರೋಹಿತ್ ಹಾಡಿದ್ದಾರೆ. ‘ಶೆಫ್​ ಚಿದಂಬರ’ ಸಿನಿಮಾದ ಟೈಟಲ್​ ಟ್ರ್ಯಾಕ್​ಗೆ ಮೆಚ್ಚುಗೆ ಸಿಕ್ಕಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ. ‘ದಮ್ತಿ ಪಿಕ್ಚರ್ಸ್’ ಮೂಕಲ ರೂಪಾ ಡಿ.ಎನ್. ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಸಿನಿಮಾಗೆ ನಿರ್ದೇಶಕ ಎಂ. ಆನಂದರಾಜ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಗಣೇಶ್ ಪರಶುರಾಮ್ ಅವರು ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ: ‘ಸಿಂಹ ಗುಹೆ’ ಸಿನಿಮಾದ ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಅನಿರುದ್ಧ್​ ಜತ್ಕರ್​

ಈ ಚಿತ್ರಕ್ಕೆ ಉದಯಲೀಲಾ ಅವರು ಛಾಯಾಗ್ರಹಣ ಮಾಡಿದ್ದಾರೆ. ರಿತ್ವಿಕ್ ಮುರಳಿಧರ್ ಅವರು ಸಂಗೀತ ನೀಡಿದ್ದಾರೆ. ವಿಜೇತ್ ಚಂದ್ರ ಅವರ ಸಂಕಲನ ಈ ಚಿತ್ರಕ್ಕಿದೆ. ಆಶಿಕ್ ಕುಸುಗೊಳ್ಳಿ ಅವರು ಡಿ.ಐ. ಕೆಲಸ ಮಾಡಿದ್ದಾರೆ. ಮಾಧುರಿ ಪರಶುರಾಮ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ. ನರಸಿಂಹಮೂರ್ತಿ ಅವರು ಸಾಹಸ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ