AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಿ ವಿಷ್ಣುವರ್ಧನ್​ ಜೀವನದ ಕುರಿತ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಅನಿರುದ್ಧ್​ ಜತ್ಕರ್​

‘ಬಾಳೆ ಬಂಗಾರ’ ಸಾಕ್ಷ್ಯಚಿತ್ರಕ್ಕೆ ನಾನ್​-ಫೀಚರ್​ ಫಿಲ್ಮ್​ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈ ಡಾಕ್ಯುಮೆಂಟರಿಗೆ ಅನಿರುದ್ಧ್​ ಜತ್ಕರ್​ ಅವರು ನಿರ್ದೇಶನ ಮಾಡಿದ್ದಾರೆ. ಭಾರತಿ ವಿಷ್ಣುವರ್ಧನ್​ ಅವರ ಸಾಧನೆ ಮತ್ತು ಜೀವನದ ಬಗ್ಗೆ ಈ ಸಾಕ್ಷ್ಯಚಿತ್ರದಲ್ಲಿ ವಿವರಿಸಲಾಗಿದೆ.

ಭಾರತಿ ವಿಷ್ಣುವರ್ಧನ್​ ಜೀವನದ ಕುರಿತ ಸಾಕ್ಷ್ಯಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಪಡೆದ ಅನಿರುದ್ಧ್​ ಜತ್ಕರ್​
ಭಾರತಿ ವಿಷ್ಣುವರ್ಧನ್,​ ಅನಿರುದ್ಧ್​ ಜತ್ಕರ್​
ಮದನ್​ ಕುಮಾರ್​
|

Updated on:Aug 24, 2023 | 6:18 PM

Share

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ (69th National Film Award 2023) ಘೋಷಣೆ ಆಗಿದೆ. 2021ರ ಸಾಲಿನ ಸಿನಿಮಾಗಳಿಗೆ ಈ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ವಿವಿಧ ವಿಭಾಗಗಳಲ್ಲಿ ನ್ಯಾಷನಲ್​ ಅವಾರ್ಡ್​ ಪ್ರಕಟ ಆಗಿದೆ. ಖ್ಯಾತ ನಟಿ ಭಾರತಿ ವಿಷ್ಣುವರ್ಧನ್​ ಅವರ ಜೀವನದ ಕುರಿತು ತಯಾರಾದ ‘ಬಾಳೆ ಬಂಗಾರ’  ಸಾಕ್ಷ್ಯಚಿತ್ರಕ್ಕೆ (Bale Bangara Documentary) ನಾನ್​-ಫೀಚರ್​ ಫಿಲ್ಮ್​ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ. ಈ ಡಾಕ್ಯುಮೆಂಟರಿಗೆ ಅನಿರುದ್ಧ್​ ಜತ್ಕರ್​ (Anirudh Jatkar) ಅವರು ನಿರ್ದೇಶನ ಮಾಡಿದ್ದಾರೆ. ಭಾರತಿ ವಿಷ್ಣುವರ್ಧನ್​ ಅವರ ಸಾಧನೆ ಮತ್ತು ಜೀವನದ ಬಗ್ಗೆ ಈ ಸಾಕ್ಷ್ಯಚಿತ್ರದಲ್ಲಿ ವಿವರಿಸಲಾಗಿದೆ. ಅನೇಕ ಸೆಲೆಬ್ರಿಟಿಗಳ ಸಂದರ್ಶನ ಕೂಡ ಇದರಲ್ಲಿ ಇದೆ.

ಭಾರತಿ ವಿಷ್ಣುವರ್ಧನ್​ ಅವರು ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಅವರ ವ್ಯಕ್ತಿತ್ವ ಮತ್ತು ಸಾಧನೆ ಕುರಿತು ‘ಬಾಳೆ ಬಂಗಾರ’ ಸಾಕ್ಷ್ಯಚಿತ್ರದಲ್ಲಿ ಚಿತ್ರರಂಗದ ಹಲವರು ಮಾತನಾಡಿದ್ದಾರೆ. ಹಿರಿಯ ಕಲಾವಿದರಾದ ಅನಂತ್​ ನಾಗ್​, ಶಿವರಾಮ್​, ಶಿವರಾಜ್​ಕುಮಾರ್​, ಮೋಹನ್​ ಲಾಲ್​, ಹೇಮಾ ಚೌಧರಿ ಮುಂತಾದವರು ತಮ್ಮ ಮಾತುಗಳನ್ನು ಹಂಚಿಕೊಂಡಿದ್ದಾರೆ. ಸ್ವತಃ ಭಾರತಿ ವಿಷ್ಣುವರ್ಧನ್​ ಅವರ ಸಂದರ್ಶನ ಕೂಡ ಈ ಸಾಕ್ಷ್ಯಚಿತ್ರದಲ್ಲಿದೆ. ಹಲವು ವರ್ಷಗಳ ಕಾಲ ಅಧ್ಯಯನ ಮಾಡಿ, ಅನೇಕ ಬಗೆಯ ಮಾಹಿತಿಗಳನ್ನು ಕಲೆಹಾಕಿ ಅನಿರುದ್ಧ್​ ಜತ್ಕರ್​ ಅವರು ಈ ಡಾಕ್ಯುಮೆಂಟರಿ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಯಾರಿಗೆಲ್ಲ ಸಿಕ್ಕಿದೆ ನ್ಯಾಷನಲ್​ ಅವಾರ್ಡ್​? ಇಲ್ಲಿದೆ ಲೈವ್​ ವಿಡಿಯೋ

ಕನ್ನಡ ಚಿತ್ರರಂಗದ ದಿಗ್ಗಜ ನಟರಾದ ಡಾ. ರಾಜ್​ಕುಮಾರ್​, ಡಾ. ವಿಷ್ಣುವರ್ಧನ್​ ಸೇರಿದಂತೆ ಹಲವು ನಟರ ಜೊತೆ ಭಾರತಿ ವಿಷ್ಣುವರ್ಧನ್​ ಅವರು ಸಿನಿಮಾ ಮಾಡಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ ಅವರು ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. ಬರೀ 8 ವರ್ಷದಲ್ಲಿ ಅವರು 100 ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಮನೆಮಾತಾದರು. ಅವರ ಅಭಿನಯಕ್ಕೆ ಪ್ರೇಕ್ಷಕರು ಮನಸೋತರು. ಹಲವು ಕಷ್ಟಗಳನ್ನು ಎದುರಿಸಿ ಅವರು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದರು. ಈ ಎಲ್ಲ ವಿಚಾರಗಳನ್ನು ‘ಬಾಳೆ ಬಂಗಾರ’ ಸಾಕ್ಷ್ಯಚಿತ್ರದಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: 69th National Film Awards 2023: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; ಇಲ್ಲಿದೆ ಪಟ್ಟಿ

ವಿಷ್ಣುವರ್ಧನ್​ ಅವರ ಅಳಿಯ ಅನಿರುದ್ಧ್ ಜತ್ಕರ್​ ಅವರು ಚಿತ್ರರಂಗದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿದ್ದಾರೆ. ಹಿರಿತೆರೆ ಮತ್ತು ಕಿರುತೆರೆ ಎರಡರಲ್ಲೂ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತುಪಡಿಸಿದ್ದಾರೆ. ಬೇರೆ ಬೇರೆ ಪ್ರಯೋಗಗಳ ಮೂಲಕ ಅವರು ದಾಖಲೆ ಮಾಡಿದ್ದಾರೆ. ನಿರ್ದೇಶನದಲ್ಲೂ ಅವರು ಆಸಕ್ತಿ ಹೊಂದಿದ್ದಾರೆ. ಈಗ ಅನಿರುದ್ಧ್​ ಅವರು ‘ಶೆಫ್​ ಚಿದಂಬರ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅದರ ನಡುವೆ ರಾಷ್ಟ್ರ ಪ್ರಶಸ್ತಿ ಪಡೆದಿರುವುದಕ್ಕೆ ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:52 pm, Thu, 24 August 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು