AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲಿ ಯಾವ ಮ್ಯೂಸಿಕ್ ಡೈರೆಕ್ಟರ್​ಗಳೂ ಕೇಳದಷ್ಟು ಸಂಭಾವನೆ ಪಡೆದ ಅನಿರುದ್ಧ್ ರವಿಚಂದರ್

Toxic Movie: ಯಶ್ ನಟನೆಯ 'ಟಾಕ್ಸಿಕ್' ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹರಡಿದೆ. ಅವರು ಈ ಚಿತ್ರಕ್ಕೆ ದೊಡ್ಡ ಮಟ್ಟದ ಸಂಭಾವನೆಯಾಗಿ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದು ಅವರ ಮೊದಲ ಕನ್ನಡ ಚಿತ್ರವಾಗಿದ್ದು, ಈ ಬೃಹತ್ ಸಂಭಾವನೆ ಚರ್ಚೆಗೆ ಕಾರಣವಾಗಿದೆ.

ಕನ್ನಡದಲ್ಲಿ ಯಾವ ಮ್ಯೂಸಿಕ್ ಡೈರೆಕ್ಟರ್​ಗಳೂ ಕೇಳದಷ್ಟು ಸಂಭಾವನೆ ಪಡೆದ ಅನಿರುದ್ಧ್ ರವಿಚಂದರ್
ಅನಿರುದ್ಧ್-ಯಶ್
ರಾಜೇಶ್ ದುಗ್ಗುಮನೆ
|

Updated on: Jul 14, 2025 | 9:07 AM

Share

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಸದ್ಯ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿವೆ. ಈ ಸಿನಿಮಾಗೆ ಅನಿರುದ್ಧ್ ರವಿಚಂದರ್ ಅವರು ಮ್ಯೂಸಿಕ್ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿ ಹಾಗೂ ಅಚ್ಚರಿಗೊಂಡಿದ್ದಾರೆ. ಈ ಬೆನ್ನಲ್ಲೇ ಸಿನಿಮಾ ಸಂಭಾವನೆ ವಿಚಾರ ಕೂಡ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ. ಈ ಚಿತ್ರಕ್ಕಾಗಿ ಅನಿರುದ್ಧ್ (Anirudh Ravichandar) ಅವರು ದೊಡ್ಡ ಮಟ್ಟದ ಸಂಭಾವನೆ ಪಡೆಯುತ್ತಿದ್ದಾರಂತೆ. ಇದನ್ನು ಕೇಳಿ ಫ್ಯಾನ್ಸ್ ಹುಬ್ಬೇರಿಸಿದ್ದಾರೆ.

ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್​ ದಾಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗೆ ಅನಿರುದ್ಧ್ ಅವರು ಮ್ಯೂಸಿಕ್ ಡೈರೆಕ್ಟರ್ ಆಗಿ ಆಯ್ಕೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಇದನ್ನು ತಂಡದವರು ಖಚಿತಪಡಿಸಿಲ್ಲ. ಹೀಗಿರುವಾಗಲೇ ಇವರ ಸಂಭಾವನೆ ವಿಚಾರ ಜೋರಾಗಿದೆ.

ಇದನ್ನೂ ಓದಿ
Image
ಈ ನಟಿ ಜೊತೆ ಕದ್ದು ಮುಚ್ಚಿ ಓಡಾಡಿದ್ದ ಸಲ್ಮಾನ್ ಖಾನ್?
Image
ಸೂತಕದ ಮನೆಯಲ್ಲೂ ಸೆಲ್ಫಿ ಹುಚ್ಚು; ತಾಳ್ಮೆ ಕಳೆದುಕೊಂಡು ಕೂಗಾಡಿದ ರಾಜಮೌಳಿ
Image
ಕೋಟಾ ಶ್ರೀನಿವಾಸ್ ರಾವ್ ಕನ್ನಡದಲ್ಲಿ ನಟಿಸಿದ್ದ ಸಿನಿಮಾಗಳು ಯಾವುವು ಗೊತ್ತೆ?
Image
ಹಿರಿಯ ನಟ ಕೋಟ ಶ್ರೀನಿವಾಸ ರಾವ್ ನಿಧನ; ಅನಾರೋಗ್ಯದಿಂದ ವಿಧಿವಶ

ಅನಿರುದ್ಧ್ ಬಗ್ಗೆ ಮಾಡಲಾದ ಪೋಸ್ಟ್

ಅನಿರುದ್ಧ್ ಅವರು ಪ್ರತಿ ಚಿತ್ರಕ್ಕೆ ಮ್ಯೂಸಿಕ್ ಮಾಡಲು ಬರೋಬ್ಬರಿ 10 ಕೋಟಿ ರೂಪಾಯಿ ಪಡೆಯುತ್ತಾರೆ. ಅವರ ಹಿನ್ನೆಲೆ ಸಂಗೀತ ಹಾಗೂ ಅವರ ಹಾಡುಗಳಿಂದಲೇ ಸಿನಿಮಾಗಳು ಹಿಟ್ ಆದ ಉದಾಹರಣೆ ಇದೆ. ಈಗ ಯಶ್ ಅವರ ‘ಟಾಕ್ಸಿಕ್’ ಚಿತ್ರಕ್ಕೆ ಮ್ಯೂಸಿಕ್ ನೀಡಲು ಆಹ್ವಾನ ಕೊಡಲಾಗಿದೆ. ಅವರು ಇದನ್ನು ಒಪ್ಪಿದ್ದಾರೆ ಎನ್ನಲಾಗುತ್ತಿದೆ. ಅವರು ಹೆಚ್ಚುವರಿಯಾಗಿ ಎರಡು ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕೆವಿಎನ್ ಸಂಸ್ಥೆ ಇದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅಂದರೆ ಅವರು ಈ ಚಿತ್ರಕ್ಕೆ 12 ಕೋಟಿ ರೂಪಾಯಿ ಪಡೆಯಲಿದ್ದಾರೆ.

ಇದನ್ನೂ ಓದಿ: ಸಂಗೀತದಿಂದಲೇ ಸಿನಿಮಾಗಳನ್ನು ಗೆಲ್ಲಿಸುತ್ತಿರುವ ಸಂಗೀತ ನಿರ್ದೇಶಕ ಅನಿರುದ್ಧ್ ಪಡೆವ ಸಂಭಾವನೆ ಎಷ್ಟು?

ಅನಿರುದ್ಧ್ ಅವರು ‘ಟಾಕ್ಸಿಕ್​’ಗೆ ಮ್ಯೂಸಿಕ್ ಕೊಡೋದು ನಿಜವಾದಲ್ಲಿ ಹೆಚ್ಚಿನದ್ದನ್ನು ನಿರೀಕ್ಷಿಸಬಹುದು. ಈ ಮೊದಲು ಸಿನಿಮಾಗೆ ರವಿ ಬಸ್ರೂರು ಸಂಗೀತ ಮಾಡುತ್ತಾರೆ ಎನ್ನಲಾಗಿತ್ತು. ಕೆಜಿಎಫ್ ಚಿತ್ರದಲ್ಲಿ ಯಶ್ ಹಾಗೂ ರವಿ ಬಸ್ರೂರು ಅವರು ಒಟ್ಟಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದರು. ಆದರೆ, ಈಗ ಅವರ ಬದಲು ಟ್ರೆಂಡ್​ನಲ್ಲಿರೋ ಅನಿರುದ್ಧ್​ಗೆ ಮಣೆ ಹಾಕಲಾಗಿದೆ. ಇದು ಅವರ ಮೊದಲ ಕನ್ನಡ ಸಿನಿಮಾ ಆಗಲಿದೆ. ಈ ಚಿತ್ರದಲ್ಲಿ ತಮಿಳಿನ ನಯನತಾರಾ, ಹಿಂದಿಯ ಕಿಯಾರಾ ಅಡ್ವಾಣಿ ಕೂಡ ನಟಿಸಿದ್ದಾರೆ. ಅನಿರುದ್ಧ್ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಪಡೆದಿದ್ದಾರೆ. ‘ಜೈಲರ್’, ‘ದೇವರ’, ‘ಜವಾನ್’ ಸಿನಿಮಾಗಳಿಗೆ ಸಂಗೀತ ಕೊಟ್ಟ ಅವರು ಜನಪ್ರಿಯತೆ ಪಡೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು