AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡದ ಶಾಲೆಯಲ್ಲಿ ಓದಿದರೆ ಸಾಕಾಗಲ್ಲ; ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ’: ಅನಿತಾ ಭಟ್​ ಕ್ಲಾಸ್​

‘ಹೆದೆಗಾರಿಕೆ ಅಲ್ಲ, ‘ಎದೆಗಾರಿಕೆ’. ಕನ್ನಡ ಶಾಲೆಯಲ್ಲಿ ಓದಿದರೆ ಸಾಕಾಗೋದಿಲ್ಲ, ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ. ಆಮೇಲೆ ಬೇರೆಯವರನ್ನ ಆಡಿಕೊಳ್ಳಬಹುದಂತೆ’ ಎಂದು ಅನಿತಾ ಭಟ್​ ಖಡಕ್​ ಆಗಿ ಟ್ವೀಟ್​ ಮಾಡಿದ್ದಾರೆ.

‘ಕನ್ನಡದ ಶಾಲೆಯಲ್ಲಿ ಓದಿದರೆ ಸಾಕಾಗಲ್ಲ; ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ’: ಅನಿತಾ ಭಟ್​ ಕ್ಲಾಸ್​
ಅನಿತಾ ಭಟ್​
TV9 Web
| Edited By: |

Updated on: Jul 03, 2021 | 9:48 AM

Share

ಸ್ಯಾಂಡಲ್​ವುಡ್​ ನಟಿ ಅನಿತಾ ಭಟ್​ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಜೊತೆಗೆ ಅವರು ಸೋಶಿಯಲ್​ ಮೀಡಿಯಾದಲ್ಲೂ ಹೆಚ್ಚು ಸಕ್ರಿಯರಾಗಿರುತ್ತಾರೆ. ಇತ್ತೀಚೆಗೆ ಅವರು ಮಾಡಿರುವ ಒಂದು ಟ್ವೀಟ್​ ಹೆಚ್ಚು ಚರ್ಚೆ ಆಗುತ್ತಿದೆ. ನೆಟ್ಟಿಗರೊಬ್ಬರು ಕನ್ನಡವನ್ನು ತಪ್ಪಾಗಿ ಬರೆದಿರುವ ಬಗ್ಗೆ ಅನಿತಾ ಭಟ್​ ಕ್ಲಾಸ್​ ತೆಗೆದುಕೊಂಡಿದ್ದಾರೆ. ಇದಕ್ಕೆ ಹಲವು ಬಗೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಅಷ್ಟಕ್ಕೂ ಅನಿತಾ ಮಾಡಿದ ಟ್ವೀಟ್​ ಏನು? ಅದಕ್ಕೆ ಬಂದ ತಕರಾರುಗಳೇನು? ಇಲ್ಲಿದೆ ವಿವರ…

ಕೊರೊನಾ ಕಾಟ ಶುರುವಾದ ಬಳಿಕ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚಿದೆ ಎಂಬ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ್ದ ಅನಿತಾ ಭಟ್​ ಅವರು, ತಾವು ಕೂಡ ಸರ್ಕಾರಿ ಶಾಲೆಯಲ್ಲಿ ಓದಿದ್ದು ಎಂದು ಹೇಳಿದ್ದರು. ಅದಕ್ಕೆ ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ. ‘ನೀವು ಓದಿದ್ದು ಸರ್ಕಾರಿ ಶಾಲೆಯಲ್ಲಿ ಸಂತೋಷ… ಆದರೆ ನಿಮ್ಮ ಮಕ್ಕಳು? ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ. ನನ್ನ ಮಕ್ಕಳನ್ನು ಸಹ ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಿದ್ದೇನೆ. ಈ ಮಾತನ್ನು ಹೇಳುವ ಹೆದೆಗಾರಿಕೆ ಇರಬೇಕಲ್ಲವೆ’ ಎಂದು ಒಬ್ಬರು ಕಮೆಂಟ್​ ಮಾಡಿದ್ದಾರೆ. ಇದರಲ್ಲಿ ‘ಹೆದೆಗಾರಿಕೆ’ ಎಂದು ಬರೆದಿರುವುದಕ್ಕೆ ಅನಿತಾ ತಿರುಗೇಟು ನೀಡಿದ್ದಾರೆ.

‘ಹೆದೆಗಾರಿಕೆ ಅಲ್ಲ, ‘ಎದೆಗಾರಿಕೆ’. ಕನ್ನಡ ಶಾಲೆಯಲ್ಲಿ ಓದಿದರೆ ಸಾಕಾಗೋದಿಲ್ಲ, ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ. ಆಮೇಲೆ ಬೇರೆಯವರನ್ನ ಆಡಿಕೊಳ್ಳಬಹುದಂತೆ. ನಮಸ್ಕಾರ’ ಎಂದು ಅನಿತಾ ಟ್ವೀಟ್​ ಮಾಡಿದ್ದಾರೆ. ಈ ಕುರಿತಂತೆ ಅನೇಕರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ‘ನಮ್ಮ ಕೊಳ್ಳೇಗಾಲ, ಮಳವಳ್ಳಿ ಕಡೆ ಹ ಹಾಗೂ ಅ ನಡುವೆ ವ್ಯತ್ಯಾಸವಿಲ್ಲ. It is interchangeable. ಕನ್ನಡವು ಪ್ರದೇಶದಿಂದ ಪ್ರದೇಶಕ್ಕೆ ಬದಲಾಗುತ್ತೆ. ಗ್ರಾಂಥಿಕ ಕನ್ನಡವೊಂದೇ ಕನ್ನಡ ಅಲ್ಲ’ ಎಂಬ ಕಮೆಂಟ್​ ಕೂಡ ಬಂದಿದೆ.

‘ಅ ಕಾರಕ್ಕೆ ಅ ಕಾರವನ್ನೇ ಉಪಯೋಗಿಸೋದು ಗ್ರಾಂಥಿಕ ಕನ್ನಡ ಅಲ್ಲ. ಯಾವುದೇ ಪ್ರದೇಶಕ್ಕೆ ಹೋದರು slang ಹಾಗೂ accent ಬದಲಾಗತ್ತೆಯೇ ಹೊರತು ವ್ಯಾಕರಣವಾಗಲಿ, ಲಿಪಿಯಾಗಲಿ, ಅಕ್ಷರಗಳಾಗಲಿ ಬದಲಾಗುವುದಿಲ್ಲ’ ಎಂದು ಅನಿತಾ ಭಟ್​ ಉತ್ತರ ನೀಡಿದ್ದಾರೆ. ಈ ಬಗ್ಗೆ ಚರ್ಚೆ ಮುಂದುವರಿದಿದೆ.

ಇದನ್ನೂ ಓದಿ:

Kannada Language: ಕನ್ನಡಕ್ಕೆ ಅವಮಾನ; ಸಿಡಿದೆದ್ದ ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳು

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ